Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ

ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಭದ್ರತಾ ಪಡೆಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ
ಸಾಂದರ್ಭಿಕ ಚಿತ್ರ
Follow us
guruganesh bhat
|

Updated on:Apr 02, 2021 | 12:19 PM

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ದೊರಕಿದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದವು. ಪುಲ್ವಾಮಾ ಜಿಲ್ಲೆಯ ಕಕಾಪೊರಾ ಪ್ರದೇಶದ ಘಾಟ್ ಮೊಹಲ್ಲಾ ಎಂಬ ಸ್ಥಳದ ಬಳಿ ಈ ಗುಂಡಿನ ಚಕಮಕಿ ನಡೆದಿದೆ ಎಂದು ಆಂಗ್ಲ ಸುದ್ದಿ ಜಾಲತಾಣ ಡಿಎನ್​ಎ ವರದಿ ಮಾಡಿದೆ.

2019ರ ಪುಲ್ವಾಮಾ ದಾಳಿ

ಪಾಕಿಸ್ತಾನದ ಉಗ್ರ 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ. ಹೆದ್ದಾರಿ ಮೇಲೆ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನಗಳನ್ನು ಗುರಿಯಾಗಿಸಿ ಉಗ್ರ ದಾಳಿ ಮಾಡಿದ್ದ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಈ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಬಳಿಕ, ಉಗ್ರರ ಈ ದುಷ್ಕೃತ್ಯಕ್ಕೆ ತಿರುಗೇಟು ನೀಡಿದ ಭಾರತ, ಫೆ. 26ರಂದು ಪಾಕ್ ಆಕ್ರಮಿತ ಕಾಶ್ಮೀರ ಭಾಗಕ್ಕೆ ತೆರಳಿ ಉಗ್ರರ ಶಿಬಿರಗಳನ್ನು ಹೇಳಹೆಸರಿಲ್ಲದಂತೆ ಮಾಡಿತ್ತು. ಭಾರತೀಯ ವಾಯುಪಡೆ ಮತ್ತು ಭೂಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಅಟ್ಟಹಾಸವನ್ನು ಹಿಮ್ಮೆಟ್ಟಿಸುವಂತೆ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇಂದಿಗೆ ಪುಲ್ವಾಮ ಘಟನೆ ನಡೆದು 2 ವರ್ಷಗಳಾಗುತ್ತಿವೆ.

ಘಟನೆಯ ದಿನ ಏನಾಗಿತ್ತು? ಅಂದು 78 ವಾಹನಗಳಲ್ಲಿ 2500 ಸಿಆರ್​ಪಿಎಫ್ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದರು. ಕೇಂದ್ರ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿ ರಜೆ ಮುಗಿಸಿ ಕರ್ತವ್ಯಕ್ಕೆ ಪುನಃ ಕಣಿವೆಗೆ ಮರಳುತ್ತಿದ್ದರು. 78 ವಾಹನಗಳಿಗೆ ಬೆಂಗಾವಲಾಗಿದ್ದ CRPF ಯೋಧರ ಬಸ್ಸುಗಳು ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಆವಂತಿಪುರದ ಲಾಟೂಮೋಡೆ ಎಂಬಲ್ಲಿಗೆ ತಲುಪಿತ್ತು.

ಆ ವೇಳೆ, ಹೆದ್ದಾರಿಯ ಎಡ ಮಾರ್ಗದಲ್ಲಿ ಸ್ಪೋಟಕಗಳನ್ನು ಹೊಂದಿದ್ದ ಬಸ್ ಒಂದು ಆಗಮಿಸಿತು. ಭಾರತೀಯ ಸೇನೆ ಬೆಂಗಾವಲು ಪಡೆಯ ಬಸ್​ನ್ನು ಹಿಂದಿಕ್ಕಿ, ಢಿಕ್ಕಿ ಹೊಡೆದು ಸ್ಫೋಟಗೊಂಡಿತು. ಈ ಭೀಕರ ಆತ್ಮಾಹುತಿ ದಾಳಿಗೆ ಸೇನಾ ವಾಹನಗಳು ಭಸ್ಮಗೊಂಡವು. 40 ಯೋಧರು ಹುತಾತ್ಮರಾದರು. 35 ಮಂದಿ ಗಾಯಗೊಂಡರು.

ಪುಲ್ವಾಮದ ಅವಂತಿಪುರದ ಬಳಿ, ಮಧ್ಯಾಹ್ನ 3.15ರ ವೇಳೆಗೆ ವರದಿಯಾದ ಈ ದಾಳಿಯಲ್ಲಿ ಒಂದು ಬಸ್​ನಲ್ಲಿದ್ದ 40ರಷ್ಟು ಯೋಧರು ಮೃತಪಟ್ಟಿದ್ದರು. 80 ಕೆ.ಜಿ.ಯಷ್ಟು ಸ್ಫೋಟಕಗಳನ್ನು ದಾಳಿಗೆ ಬಳಸಲಾಗಿತ್ತು. 1989ರ ಬಳಿಕ ಯೋಧರನ್ನು ಗುರಿಯಾಗಿಸಿ, ಭಯೋತ್ಪಾದಕರು ನಡೆಸಿದ ಅತಿ ಭೀಕರ ದಾಳಿ ಇದಾಗಿತ್ತು.

ಇದನ್ನೂ ಓದಿ: ಬಾಲಾಕೋಟ್​ ದಾಳಿಗೆ 2 ವರ್ಷ: ವೈರಿ ನೆಲದಲ್ಲೂ ಮುಗುಳ್ನಗುತ್ತಿದ್ದ ಧೀರ ಅಭಿನಂದನ್​ ವರ್ಧಮಾನ್

ಬಾಲಾಕೋಟ್ ದಾಳಿಗೆ 2 ವರ್ಷ: ಭಾರತ-ಪಾಕ್ ನಡುವೆ ಹೊಸ ಕದನವಿರಾಮ ಒಪ್ಪಂದ; ಬದ್ಧವಾಗಿರುವುದೇ ಪಾಕ್?

(Jammu Kashmir Pulwama Encounter 2 to 3 terrorists trapped)

Published On - 12:12 pm, Fri, 2 April 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ