AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ

ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಭದ್ರತಾ ಪಡೆಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

Pulwama Encounter: ಪುಲ್ವಾಮಾದಲ್ಲಿ ಉಗ್ರರ ಜತೆ ಭದ್ರತಾ ಪಡೆಗಳ ಗುಂಡಿನ ಚಕಮಕಿ; ಮೂವರು ಉಗ್ರರು ಹತ
ಸಾಂದರ್ಭಿಕ ಚಿತ್ರ
guruganesh bhat
|

Updated on:Apr 02, 2021 | 12:19 PM

Share

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಿಂದ ಎರಡರಿಂದ ಮೂವರು ಉಗ್ರರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ದೊರಕಿದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ಕಾರ್ಯಾಚರಣೆಗೆ ಇಳಿದವು. ಪುಲ್ವಾಮಾ ಜಿಲ್ಲೆಯ ಕಕಾಪೊರಾ ಪ್ರದೇಶದ ಘಾಟ್ ಮೊಹಲ್ಲಾ ಎಂಬ ಸ್ಥಳದ ಬಳಿ ಈ ಗುಂಡಿನ ಚಕಮಕಿ ನಡೆದಿದೆ ಎಂದು ಆಂಗ್ಲ ಸುದ್ದಿ ಜಾಲತಾಣ ಡಿಎನ್​ಎ ವರದಿ ಮಾಡಿದೆ.

2019ರ ಪುಲ್ವಾಮಾ ದಾಳಿ

ಪಾಕಿಸ್ತಾನದ ಉಗ್ರ 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ. ಹೆದ್ದಾರಿ ಮೇಲೆ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನಗಳನ್ನು ಗುರಿಯಾಗಿಸಿ ಉಗ್ರ ದಾಳಿ ಮಾಡಿದ್ದ. ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಈ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಬಳಿಕ, ಉಗ್ರರ ಈ ದುಷ್ಕೃತ್ಯಕ್ಕೆ ತಿರುಗೇಟು ನೀಡಿದ ಭಾರತ, ಫೆ. 26ರಂದು ಪಾಕ್ ಆಕ್ರಮಿತ ಕಾಶ್ಮೀರ ಭಾಗಕ್ಕೆ ತೆರಳಿ ಉಗ್ರರ ಶಿಬಿರಗಳನ್ನು ಹೇಳಹೆಸರಿಲ್ಲದಂತೆ ಮಾಡಿತ್ತು. ಭಾರತೀಯ ವಾಯುಪಡೆ ಮತ್ತು ಭೂಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಅಟ್ಟಹಾಸವನ್ನು ಹಿಮ್ಮೆಟ್ಟಿಸುವಂತೆ ಶಿಬಿರಗಳನ್ನು ಧ್ವಂಸಗೊಳಿಸಿತ್ತು. ಇಂದಿಗೆ ಪುಲ್ವಾಮ ಘಟನೆ ನಡೆದು 2 ವರ್ಷಗಳಾಗುತ್ತಿವೆ.

ಘಟನೆಯ ದಿನ ಏನಾಗಿತ್ತು? ಅಂದು 78 ವಾಹನಗಳಲ್ಲಿ 2500 ಸಿಆರ್​ಪಿಎಫ್ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದರು. ಕೇಂದ್ರ ಪೊಲೀಸ್ ಮೀಸಲು ಪಡೆಯ ಸಿಬ್ಬಂದಿ ರಜೆ ಮುಗಿಸಿ ಕರ್ತವ್ಯಕ್ಕೆ ಪುನಃ ಕಣಿವೆಗೆ ಮರಳುತ್ತಿದ್ದರು. 78 ವಾಹನಗಳಿಗೆ ಬೆಂಗಾವಲಾಗಿದ್ದ CRPF ಯೋಧರ ಬಸ್ಸುಗಳು ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಆವಂತಿಪುರದ ಲಾಟೂಮೋಡೆ ಎಂಬಲ್ಲಿಗೆ ತಲುಪಿತ್ತು.

ಆ ವೇಳೆ, ಹೆದ್ದಾರಿಯ ಎಡ ಮಾರ್ಗದಲ್ಲಿ ಸ್ಪೋಟಕಗಳನ್ನು ಹೊಂದಿದ್ದ ಬಸ್ ಒಂದು ಆಗಮಿಸಿತು. ಭಾರತೀಯ ಸೇನೆ ಬೆಂಗಾವಲು ಪಡೆಯ ಬಸ್​ನ್ನು ಹಿಂದಿಕ್ಕಿ, ಢಿಕ್ಕಿ ಹೊಡೆದು ಸ್ಫೋಟಗೊಂಡಿತು. ಈ ಭೀಕರ ಆತ್ಮಾಹುತಿ ದಾಳಿಗೆ ಸೇನಾ ವಾಹನಗಳು ಭಸ್ಮಗೊಂಡವು. 40 ಯೋಧರು ಹುತಾತ್ಮರಾದರು. 35 ಮಂದಿ ಗಾಯಗೊಂಡರು.

ಪುಲ್ವಾಮದ ಅವಂತಿಪುರದ ಬಳಿ, ಮಧ್ಯಾಹ್ನ 3.15ರ ವೇಳೆಗೆ ವರದಿಯಾದ ಈ ದಾಳಿಯಲ್ಲಿ ಒಂದು ಬಸ್​ನಲ್ಲಿದ್ದ 40ರಷ್ಟು ಯೋಧರು ಮೃತಪಟ್ಟಿದ್ದರು. 80 ಕೆ.ಜಿ.ಯಷ್ಟು ಸ್ಫೋಟಕಗಳನ್ನು ದಾಳಿಗೆ ಬಳಸಲಾಗಿತ್ತು. 1989ರ ಬಳಿಕ ಯೋಧರನ್ನು ಗುರಿಯಾಗಿಸಿ, ಭಯೋತ್ಪಾದಕರು ನಡೆಸಿದ ಅತಿ ಭೀಕರ ದಾಳಿ ಇದಾಗಿತ್ತು.

ಇದನ್ನೂ ಓದಿ: ಬಾಲಾಕೋಟ್​ ದಾಳಿಗೆ 2 ವರ್ಷ: ವೈರಿ ನೆಲದಲ್ಲೂ ಮುಗುಳ್ನಗುತ್ತಿದ್ದ ಧೀರ ಅಭಿನಂದನ್​ ವರ್ಧಮಾನ್

ಬಾಲಾಕೋಟ್ ದಾಳಿಗೆ 2 ವರ್ಷ: ಭಾರತ-ಪಾಕ್ ನಡುವೆ ಹೊಸ ಕದನವಿರಾಮ ಒಪ್ಪಂದ; ಬದ್ಧವಾಗಿರುವುದೇ ಪಾಕ್?

(Jammu Kashmir Pulwama Encounter 2 to 3 terrorists trapped)

Published On - 12:12 pm, Fri, 2 April 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ