AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curfew: ಶ್ರೀನಗರದಲ್ಲಿ ನಾಳೆಯಿಂದ 10 ದಿನ ಕೊರೊನಾ ಕರ್ಫ್ಯೂ ಜಾರಿ

ಶ್ರೀನಗರದಲ್ಲಿ ಕಳೆದ 17 ದಿನಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದಕ್ಕೆ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂದು ಆದೇಶದಲ್ಲಿ ಜಿಲ್ಲಾಡಳಿತ ತಿಳಿಸಿದೆ.

Curfew: ಶ್ರೀನಗರದಲ್ಲಿ ನಾಳೆಯಿಂದ 10 ದಿನ ಕೊರೊನಾ ಕರ್ಫ್ಯೂ ಜಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 08, 2021 | 10:18 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕೊರೊನಾ ಕರ್ಫ್ಯೂ ವಿಧಿಸಲಾಗಿದೆ. ನಾಳೆಯಿಂದ 10 ದಿನಗಳ ಕಾಲ ಕೊರೊನಾ ಕರ್ಫ್ಯೂ ವಿಧಿಸಲಾಗಿದೆ. ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ 10 ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಶ್ರೀನಗರ ಜಿಲ್ಲಾಡಳಿತ ನಾಳೆಯಿಂದ (ಮಂಗಳವಾರ) 10 ದಿನಗಳ ಕಾಲ 5 ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಕೊರೊನಾ ಕರ್ಫ್ಯೂ ವಿಧಿಸಿದೆ. ಲಾಲ್ ಬಜಾರ್, ಹೈದರ್‌ ಪೋರಾ, ಚನಪೋರಾ, ಬೆಮಿನಾ (ಹಮ್‌ದಾನಿಯಾ ಕಾಲೋನಿ), ಬೆಮಿನಾ (ಹೌಸಿಂಗ್ ಕಾಲೋನಿ, ಬಿಲಾಲ್ ಕಾಲೋನಿ, ಎಸ್‌ಡಿಎ ಕಾಲೋನಿ)ಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಶ್ರೀನಗರದಲ್ಲಿ ಕಳೆದ 17 ದಿನಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದಕ್ಕೆ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂದು ಆದೇಶದಲ್ಲಿ ಜಿಲ್ಲಾಡಳಿತ ತಿಳಿಸಿದೆ. ಕೊವಿಡ್ ರೋಗದ ಹರಡುವಿಕೆಯನ್ನು ಪರಿಶೀಲಿಸುವ ಸಲುವಾಗಿ ಗುರುತಿಸಲಾದ ಹಾಟ್‌ಸ್ಪಾಟ್‌ಗಳನ್ನು ಮೈಕ್ರೋ ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ. ಸಾರ್ವಜನಿಕ ಸಭೆ ಮತ್ತು ಸಾರ್ವಜನಿಕ ಸಾರಿಗೆಯ ಚಲನೆಯನ್ನು ನಿಷೇಧಿಸಲು ನಿರ್ಧರಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಶ್ರೀನಗರ ಜಿಲ್ಲೆಯ ಇತರ ಭಾಗಗಳಿಗೆ ಕೋವಿಡ್ ಹರಡುವುದನ್ನು ತಡೆಯಲು ಕಟ್ಟುನಿಟ್ಟಾದ ನಿಯಂತ್ರಣ ಕ್ರಮಗಳು ಸಹ ಅಗತ್ಯವಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಚಟುವಟಿಕೆಗಳ ಸುಗಮ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಪ್ರಾಸಂಗಿಕ ಸೇವೆಗಳು ಮತ್ತು ಚಟುವಟಿಕೆಗಳನ್ನು ಒಳಗೊಂಡಂತೆ ಎಲ್ಲಾ ಅಗತ್ಯ ಸೇವೆಗಳನ್ನು ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಮುಂದುವರಿಸಲು ಅನುಮತಿಸಲಾಗುತ್ತದೆ.

ನಾಳೆಯಿಂದ ದಿನಸಿ/ ತರಕಾರಿ/ ಮಾಂಸ/ ಹಾಲಿನ ಅಂಗಡಿಗಳು ತೆರೆದಿರುತ್ತವೆ. ಅಗತ್ಯ ವಸ್ತುಗಳನ್ನು ಬೆಳಿಗ್ಗೆ 7 ಗಂಟೆಯಿಂದ 11ರವರೆಗೆ ಮಾತ್ರ ಒದಗಿಸಲಾಗುವುದು.

ಇದನ್ನೂ ಓದಿ: ಕೊವಿಡ್ ಲಸಿಕೆ ವಿತರಣೆ, ಜಮ್ಮು ಕಾಶ್ಮೀರದ 370ನೇ ವಿಧಿ ರದ್ದತಿ ನಿರ್ಧಾರವನ್ನು ಶ್ಲಾಘಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Jammu Kashmir: ಜಮ್ಮು ಕಾಶ್ಮೀರದ ಎಲ್​ಒಸಿ ಬಳಿ ಗಣಿಸ್ಫೋಟದಲ್ಲಿ ಇಬ್ಬರು ಸೈನಿಕರ ಸಾವು

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ