AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu-Kashmir: ಸೋನಾಮಾರ್ಗ್‌ನಲ್ಲಿ ಹಿಮದ ಬಿರುಗಾಳಿಗೆ ಮೂವರು ಕಾರ್ಮಿಕರು ಹಿಮ ಸಮಾಧಿ, ಒಂದು ಸಾವು

ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದ ಬಾಲ್ಟಾಲ್ ಮತ್ತು ಝೋಜಿಲಾ ಬಳಿ ಹಿಮಕುಸಿತದಿಂದ ಮೂವರು ಕಾರ್ಮಿಕರು ಹಿಮದಲ್ಲಿ ಸಮಾಧಿಯಾಗಿದ್ದಾರೆ. ಇದೀಗ ಈ ಮೂವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Jammu-Kashmir: ಸೋನಾಮಾರ್ಗ್‌ನಲ್ಲಿ ಹಿಮದ ಬಿರುಗಾಳಿಗೆ ಮೂವರು ಕಾರ್ಮಿಕರು ಹಿಮ ಸಮಾಧಿ, ಒಂದು ಸಾವು
Jammu-Kashmir Three laborers buried in snow, one dead in Sonamarg blizzardImage Credit source: TV9 Hindi
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jan 12, 2023 | 4:11 PM

Share

ಗಂದರ್‌ಬಲ್: ಜಮ್ಮು ಮತ್ತು ಕಾಶ್ಮೀರ(Jammu-Kashmir) ಗಂದರ್‌ಬಲ್ ಜಿಲ್ಲೆಯ ಸೋನಾಮಾರ್ಗ್ ಪ್ರದೇಶದ ಬಾಲ್ಟಾಲ್ ಮತ್ತು ಝೋಜಿಲಾ ಬಳಿ ಹಿಮಕುಸಿತದಿಂದ ಮೂವರು ಕಾರ್ಮಿಕರು ಹಿಮದಲ್ಲಿ ಸಮಾಧಿಯಾಗಿದ್ದಾರೆ. ಇದೀಗ ಈ ಮೂವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಹಿಮದ ಒಳಗಿದ್ದ ಒಬ್ಬ ಕಾರ್ಮಿಕನ ಮೃತ ದೇಹವನ್ನು ಹೊರ ತೆಗೆಯಲಾಗಿದೆ. ಅವರ ಬಗ್ಗೆ ಯಾವುದೇ ಮಾಹಿತಿ ಪತ್ತೆಯಾಗಿಲ್ಲ. ಉಳಿದ ಇಬ್ಬರು ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೀಲ್‌ಗ್ರಾತ್‌ನ ಸರ್ಬಲ್ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೈದರಾಬಾದ್‌ನ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL) ಕಂಪನಿಯು ಈ ಪ್ರದೇಶದಲ್ಲಿ ಝೋಜಿಲಾ ಸುರಂಗದ ಕೆಲಸ ಮಾಡುತ್ತಿದ್ದು. ಮೂವರು ಕಾರ್ಮಿಕರಲ್ಲಿ ಒಬ್ಬರ ಮೃತದೇಹವನ್ನು ಹಿಮಕುಸಿತ ಸ್ಥಳದಿಂದ ಹೊರತೆಗೆಯಲಾಗಿದ್ದು, ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸ್, ಎಸ್‌ಡಿಆರ್‌ಎಫ್, ಸೇನೆ, ಬೀಕನ್‌ಗಳು ಮತ್ತು ಎಂಇಐಎಲ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಿಮಪಾತ ಸಂಭವಿಸಿದ ಸ್ಥಳದಲ್ಲಿ ಹಿಮದಿಂದ ತುಂಬಿರುವ ಪ್ರದೇಶವನ್ನು ತೆರವುಗೊಳಿಸಲಾಗುತ್ತಿದೆ.

ಇದನ್ನು ಓದಿ:Jammu-Kashmir: ತವಾಂಗ್ ಮುಖಾಮುಖಿ ಬಳಿಕ ಭಾರತ-ಪಾಕ್ ಗಡಿಯಲ್ಲಿ ಗಸ್ತು ಹೆಚ್ಚಿಸಿದ ಭದ್ರತಾ ಪಡೆ

ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ತಂಡಗಳು ಸಹ ಸ್ಥಳದಲ್ಲಿವೆ. ಸಾಮಾನ್ಯವಾಗಿ ಬಿಳಿ ಹಿಮದಿಂದ ಆವೃತವಾದ ಪರ್ವತಗಳು ಪ್ರವಾಸಿಗರಿಗೆ ವಿಶೇಷ ಆಕರ್ಷಣೆಯ ಕೇಂದ್ರವಾಗಿದೆ. ಆದರೆ ಕೆಲವೊಮ್ಮೆ ಇಂತಹ ಅಪಾಯಕಾರಿ ಘಟನೆಗಳು ನಡೆಯುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:09 pm, Thu, 12 January 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?