AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ
ಟಾಟಾ ಸ್ಟೀಲ್​ (ಸಾಂದರ್ಭಿಕ ಚಿತ್ರ)
Lakshmi Hegde
|

Updated on:May 25, 2021 | 7:29 PM

Share

ಜೆಮ್​ಶೆಡ್​ಪುರದಲ್ಲಿರುವ ಸ್ಟೀಲ್​ ತಯಾರಿಕಾ ಕಂಪನಿ ಟಾಟಾ ಸ್ಟೀಲ್​ ಈ ಕೊವಿಡ್​ 19 ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ತನ್ನ ಕಂಪನಿಯ ಯಾವುದೇ ಉದ್ಯೋಗಿ ಕೊವಿಡ್​ ಸೋಂಕಿನಿಂದ ಮೃತಪಟ್ಟರೆ, ಅವರಿಗೆ ನೀಡಲಾಗುತ್ತಿದ್ದ ತಿಂಗಳ ವೇತನವನ್ನು ನಿಲ್ಲಿಸುವುದಿಲ್ಲ. ಅವರ ಕುಟುಂಬಕ್ಕೆ ಕೊಡುತ್ತೇವೆ ಎಂದು ತಿಳಿಸಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಕಂಪನಿ ತಿಂಗಳ ವೇತನವನ್ನು ಮುಂದುವರಿಸುತ್ತದೆ. ಒಬ್ಬ ಉದ್ಯೋಗಿ ಕೊವಿಡ್​ 19ನಿಂದ ಮೃತಪಟ್ಟ ತಕ್ಷಣ ಅವರಿಗೆ ನೀಡಲಾಗುತ್ತಿದ್ದ ವೇತನವನ್ನು ನಿಲ್ಲಿಸುವುದಿಲ್ಲ. ಅವರ ನಿವೃತ್ತಿಯವರೆಗೆ, ಅಂದರೆ 60ವರ್ಷ ಆಗುವವರೆಗೂ ಕುಟುಂಬಕ್ಕೆ ಆ ಹಣ ನೀಡಲಾಗುತ್ತದೆ ಎಂದು ಕಂಪನಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ. ಇದರೊಂದಿಗೆ ಕೊರೊನಾದಿಂದ ಸಾವನ್ನಪ್ಪುವ ಉದ್ಯೋಗಿಗಳ ಮಕ್ಕಳ ಶಿಕ್ಷಣದ ವೆಚ್ಚವನ್ನೂ ಟಾಟಾ ಸ್ಟೀಲ್​ ಭರಿಸಲಿದೆ ಎಂದೂ ಮಾಹಿತಿ ನೀಡಿದೆ. ಕಂಪನಿಯ ಉಳಿದ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳವಾದರೂ ಇವರ ಸಂಬಳದಲ್ಲಿ ಹೆಚ್ಚಳ ಮಾಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ಮೂಲಕ ಟಾಟಾ ಸ್ಟೀಲ್​ ಕಾರ್ಪೋರೇಟ್​ ವಲಯದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಉಳಿದ ಕಂಪನಿಗಳಿಗೆ ಮಾದರಿಯಾಗಿದೆ.

ಇದನ್ನೂ ಓದಿ: Pope Francis: ಪೋಪ್ ಫ್ರಾನ್ಸಿಸ್​ಗೆ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸಲಿದೆ ಫಿಸ್ಕರ್ ಆಟೋಮೊಬೈಲ್ ಕಂಪೆನಿ

Karnataka Rain: ಯಾಸ್ ಚಂಡಮಾರುತದ ಪ್ರಭಾವ; ಕರ್ನಾಟಕದಲ್ಲಿ ಇಂದಿನಿಂದ ಮೇ 29ರವರೆಗೂ ವ್ಯಾಪಕ ಮಳೆ

Published On - 6:38 pm, Tue, 25 May 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ