AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ
ಟಾಟಾ ಸ್ಟೀಲ್​ (ಸಾಂದರ್ಭಿಕ ಚಿತ್ರ)
Lakshmi Hegde
|

Updated on:May 25, 2021 | 7:29 PM

Share

ಜೆಮ್​ಶೆಡ್​ಪುರದಲ್ಲಿರುವ ಸ್ಟೀಲ್​ ತಯಾರಿಕಾ ಕಂಪನಿ ಟಾಟಾ ಸ್ಟೀಲ್​ ಈ ಕೊವಿಡ್​ 19 ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ತನ್ನ ಕಂಪನಿಯ ಯಾವುದೇ ಉದ್ಯೋಗಿ ಕೊವಿಡ್​ ಸೋಂಕಿನಿಂದ ಮೃತಪಟ್ಟರೆ, ಅವರಿಗೆ ನೀಡಲಾಗುತ್ತಿದ್ದ ತಿಂಗಳ ವೇತನವನ್ನು ನಿಲ್ಲಿಸುವುದಿಲ್ಲ. ಅವರ ಕುಟುಂಬಕ್ಕೆ ಕೊಡುತ್ತೇವೆ ಎಂದು ತಿಳಿಸಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಕಂಪನಿ ತಿಂಗಳ ವೇತನವನ್ನು ಮುಂದುವರಿಸುತ್ತದೆ. ಒಬ್ಬ ಉದ್ಯೋಗಿ ಕೊವಿಡ್​ 19ನಿಂದ ಮೃತಪಟ್ಟ ತಕ್ಷಣ ಅವರಿಗೆ ನೀಡಲಾಗುತ್ತಿದ್ದ ವೇತನವನ್ನು ನಿಲ್ಲಿಸುವುದಿಲ್ಲ. ಅವರ ನಿವೃತ್ತಿಯವರೆಗೆ, ಅಂದರೆ 60ವರ್ಷ ಆಗುವವರೆಗೂ ಕುಟುಂಬಕ್ಕೆ ಆ ಹಣ ನೀಡಲಾಗುತ್ತದೆ ಎಂದು ಕಂಪನಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ. ಇದರೊಂದಿಗೆ ಕೊರೊನಾದಿಂದ ಸಾವನ್ನಪ್ಪುವ ಉದ್ಯೋಗಿಗಳ ಮಕ್ಕಳ ಶಿಕ್ಷಣದ ವೆಚ್ಚವನ್ನೂ ಟಾಟಾ ಸ್ಟೀಲ್​ ಭರಿಸಲಿದೆ ಎಂದೂ ಮಾಹಿತಿ ನೀಡಿದೆ. ಕಂಪನಿಯ ಉಳಿದ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳವಾದರೂ ಇವರ ಸಂಬಳದಲ್ಲಿ ಹೆಚ್ಚಳ ಮಾಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ಮೂಲಕ ಟಾಟಾ ಸ್ಟೀಲ್​ ಕಾರ್ಪೋರೇಟ್​ ವಲಯದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಉಳಿದ ಕಂಪನಿಗಳಿಗೆ ಮಾದರಿಯಾಗಿದೆ.

ಇದನ್ನೂ ಓದಿ: Pope Francis: ಪೋಪ್ ಫ್ರಾನ್ಸಿಸ್​ಗೆ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸಲಿದೆ ಫಿಸ್ಕರ್ ಆಟೋಮೊಬೈಲ್ ಕಂಪೆನಿ

Karnataka Rain: ಯಾಸ್ ಚಂಡಮಾರುತದ ಪ್ರಭಾವ; ಕರ್ನಾಟಕದಲ್ಲಿ ಇಂದಿನಿಂದ ಮೇ 29ರವರೆಗೂ ವ್ಯಾಪಕ ಮಳೆ

Published On - 6:38 pm, Tue, 25 May 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!