AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ
ಟಾಟಾ ಸ್ಟೀಲ್​ (ಸಾಂದರ್ಭಿಕ ಚಿತ್ರ)
Lakshmi Hegde
|

Updated on:May 25, 2021 | 7:29 PM

Share

ಜೆಮ್​ಶೆಡ್​ಪುರದಲ್ಲಿರುವ ಸ್ಟೀಲ್​ ತಯಾರಿಕಾ ಕಂಪನಿ ಟಾಟಾ ಸ್ಟೀಲ್​ ಈ ಕೊವಿಡ್​ 19 ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ತನ್ನ ಕಂಪನಿಯ ಯಾವುದೇ ಉದ್ಯೋಗಿ ಕೊವಿಡ್​ ಸೋಂಕಿನಿಂದ ಮೃತಪಟ್ಟರೆ, ಅವರಿಗೆ ನೀಡಲಾಗುತ್ತಿದ್ದ ತಿಂಗಳ ವೇತನವನ್ನು ನಿಲ್ಲಿಸುವುದಿಲ್ಲ. ಅವರ ಕುಟುಂಬಕ್ಕೆ ಕೊಡುತ್ತೇವೆ ಎಂದು ತಿಳಿಸಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಕಂಪನಿ ತಿಂಗಳ ವೇತನವನ್ನು ಮುಂದುವರಿಸುತ್ತದೆ. ಒಬ್ಬ ಉದ್ಯೋಗಿ ಕೊವಿಡ್​ 19ನಿಂದ ಮೃತಪಟ್ಟ ತಕ್ಷಣ ಅವರಿಗೆ ನೀಡಲಾಗುತ್ತಿದ್ದ ವೇತನವನ್ನು ನಿಲ್ಲಿಸುವುದಿಲ್ಲ. ಅವರ ನಿವೃತ್ತಿಯವರೆಗೆ, ಅಂದರೆ 60ವರ್ಷ ಆಗುವವರೆಗೂ ಕುಟುಂಬಕ್ಕೆ ಆ ಹಣ ನೀಡಲಾಗುತ್ತದೆ ಎಂದು ಕಂಪನಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ. ಇದರೊಂದಿಗೆ ಕೊರೊನಾದಿಂದ ಸಾವನ್ನಪ್ಪುವ ಉದ್ಯೋಗಿಗಳ ಮಕ್ಕಳ ಶಿಕ್ಷಣದ ವೆಚ್ಚವನ್ನೂ ಟಾಟಾ ಸ್ಟೀಲ್​ ಭರಿಸಲಿದೆ ಎಂದೂ ಮಾಹಿತಿ ನೀಡಿದೆ. ಕಂಪನಿಯ ಉಳಿದ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳವಾದರೂ ಇವರ ಸಂಬಳದಲ್ಲಿ ಹೆಚ್ಚಳ ಮಾಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ಮೂಲಕ ಟಾಟಾ ಸ್ಟೀಲ್​ ಕಾರ್ಪೋರೇಟ್​ ವಲಯದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಉಳಿದ ಕಂಪನಿಗಳಿಗೆ ಮಾದರಿಯಾಗಿದೆ.

ಇದನ್ನೂ ಓದಿ: Pope Francis: ಪೋಪ್ ಫ್ರಾನ್ಸಿಸ್​ಗೆ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸಲಿದೆ ಫಿಸ್ಕರ್ ಆಟೋಮೊಬೈಲ್ ಕಂಪೆನಿ

Karnataka Rain: ಯಾಸ್ ಚಂಡಮಾರುತದ ಪ್ರಭಾವ; ಕರ್ನಾಟಕದಲ್ಲಿ ಇಂದಿನಿಂದ ಮೇ 29ರವರೆಗೂ ವ್ಯಾಪಕ ಮಳೆ

Published On - 6:38 pm, Tue, 25 May 21

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್