AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ.

ಕೊವಿಡ್​ 19ನಿಂದ ಮೃತಪಡುವ ಉದ್ಯೋಗಿಗಳ ವೇತನ ಪ್ರತಿ ತಿಂಗಳೂ ಅವರ ಕುಟುಂಬಕ್ಕೆ ತಲುಪಲಿದೆ: ಟಾಟಾ ಸ್ಟೀಲ್​ ಕಂಪನಿಯ ಮಹತ್ವದ ನಿರ್ಧಾರ
ಟಾಟಾ ಸ್ಟೀಲ್​ (ಸಾಂದರ್ಭಿಕ ಚಿತ್ರ)
Lakshmi Hegde
|

Updated on:May 25, 2021 | 7:29 PM

Share

ಜೆಮ್​ಶೆಡ್​ಪುರದಲ್ಲಿರುವ ಸ್ಟೀಲ್​ ತಯಾರಿಕಾ ಕಂಪನಿ ಟಾಟಾ ಸ್ಟೀಲ್​ ಈ ಕೊವಿಡ್​ 19 ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ತನ್ನ ಕಂಪನಿಯ ಯಾವುದೇ ಉದ್ಯೋಗಿ ಕೊವಿಡ್​ ಸೋಂಕಿನಿಂದ ಮೃತಪಟ್ಟರೆ, ಅವರಿಗೆ ನೀಡಲಾಗುತ್ತಿದ್ದ ತಿಂಗಳ ವೇತನವನ್ನು ನಿಲ್ಲಿಸುವುದಿಲ್ಲ. ಅವರ ಕುಟುಂಬಕ್ಕೆ ಕೊಡುತ್ತೇವೆ ಎಂದು ತಿಳಿಸಿದೆ.

ಸಾಮಾಜಿಕ ಭದ್ರತಾ ಯೋಜನೆಯಡಿ ಕಂಪನಿ ತಿಂಗಳ ವೇತನವನ್ನು ಮುಂದುವರಿಸುತ್ತದೆ. ಒಬ್ಬ ಉದ್ಯೋಗಿ ಕೊವಿಡ್​ 19ನಿಂದ ಮೃತಪಟ್ಟ ತಕ್ಷಣ ಅವರಿಗೆ ನೀಡಲಾಗುತ್ತಿದ್ದ ವೇತನವನ್ನು ನಿಲ್ಲಿಸುವುದಿಲ್ಲ. ಅವರ ನಿವೃತ್ತಿಯವರೆಗೆ, ಅಂದರೆ 60ವರ್ಷ ಆಗುವವರೆಗೂ ಕುಟುಂಬಕ್ಕೆ ಆ ಹಣ ನೀಡಲಾಗುತ್ತದೆ ಎಂದು ಕಂಪನಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿದೆ.

ಮೇ 23ರಂದು ಹೇಳಿಕೆ ಬಿಡುಗಡೆ ಮಾಡಿದ್ದು, ಆ ಉದ್ಯೋಗಿಯ ಕುಟುಂಬಕ್ಕೆ ಸಂಬಳದ ಜತೆ ವೈದ್ಯಕೀಯ ಅನುಕೂಲ ಮತ್ತು ವಸತಿ ಸೌಲಭ್ಯವನ್ನೂ ನೀಡಲಾಗುವುದು ಎಂದು ತಿಳಿಸಿದೆ. ಇದರೊಂದಿಗೆ ಕೊರೊನಾದಿಂದ ಸಾವನ್ನಪ್ಪುವ ಉದ್ಯೋಗಿಗಳ ಮಕ್ಕಳ ಶಿಕ್ಷಣದ ವೆಚ್ಚವನ್ನೂ ಟಾಟಾ ಸ್ಟೀಲ್​ ಭರಿಸಲಿದೆ ಎಂದೂ ಮಾಹಿತಿ ನೀಡಿದೆ. ಕಂಪನಿಯ ಉಳಿದ ಉದ್ಯೋಗಿಗಳ ವೇತನದಲ್ಲಿ ಹೆಚ್ಚಳವಾದರೂ ಇವರ ಸಂಬಳದಲ್ಲಿ ಹೆಚ್ಚಳ ಮಾಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ಮೂಲಕ ಟಾಟಾ ಸ್ಟೀಲ್​ ಕಾರ್ಪೋರೇಟ್​ ವಲಯದಲ್ಲಿ ಒಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಉಳಿದ ಕಂಪನಿಗಳಿಗೆ ಮಾದರಿಯಾಗಿದೆ.

ಇದನ್ನೂ ಓದಿ: Pope Francis: ಪೋಪ್ ಫ್ರಾನ್ಸಿಸ್​ಗೆ ಎಲೆಕ್ಟ್ರಿಕ್ ಕಾರು ಸಿದ್ಧಪಡಿಸಲಿದೆ ಫಿಸ್ಕರ್ ಆಟೋಮೊಬೈಲ್ ಕಂಪೆನಿ

Karnataka Rain: ಯಾಸ್ ಚಂಡಮಾರುತದ ಪ್ರಭಾವ; ಕರ್ನಾಟಕದಲ್ಲಿ ಇಂದಿನಿಂದ ಮೇ 29ರವರೆಗೂ ವ್ಯಾಪಕ ಮಳೆ

Published On - 6:38 pm, Tue, 25 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ