AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಕಮಲ ಹಿಡಿದ ಪವನ್ ಕಲ್ಯಾಣ್!

ಹೈದರಾಬಾದ್​: ನೆರೆ ರಾಜ್ಯ ಆಂಧ್ರಪ್ರದೇಶದ ರಾಜ್ಯಕೀಯ ಅಂದ್ರೆ ಕಲರ್‌ಫುಲ್. ಅಲ್ಲಿನ ರಾಜಕೀಯದಲ್ಲಿ ಯಾವಾಗ ಏನ್ ಆಗುತ್ತೆ ಅನ್ನೋದು ಊಹಿಸಲು ಅಸಾಧ್ಯ. ಅದರಲ್ಲೂ ಜಗನ್‌ ಮೋಹನ್ ರೆಡ್ಡಿ ಸಿಎಂ ಆದ ಮೇಲೆ ಅಲ್ಲಿನ ರಾಜಕೀಯ ಫುಲ್ ಬದಲಾಗಿ ಹೋಗಿದೆ. ಹೀಗೆ ನಾನಾ ಕಾರಣಗಳಿಂದ ಗಮನ ಸೆಳೆದೆ ಆಂಧ್ರ ರಾಜಕೀಯ ಮತ್ತೆ ಸದ್ದು ಮಾಡುತ್ತಿದೆ. 2024 ರಲ್ಲಿ ಆಂಧ್ರದ ಗದ್ದುಗೆ ಹಿಡಿಯಲು ಪ್ಲ್ಯಾನ್: ಆಂಧ್ರಪ್ರದೇಶದ 2024ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಎರಡೂ ಪಕ್ಷಗಳು ಈಗಲೇ ಮೈತ್ರಿ ಮಾಡಿಕೊಂಡಿವೆ. ಆಂಧ್ರಪ್ರದೇಶದಲ್ಲಿ […]

ಆಂಧ್ರದಲ್ಲಿ ಕಮಲ ಹಿಡಿದ ಪವನ್ ಕಲ್ಯಾಣ್!
ಸಾಧು ಶ್ರೀನಾಥ್​
|

Updated on:Jan 17, 2020 | 11:54 AM

Share

ಹೈದರಾಬಾದ್​: ನೆರೆ ರಾಜ್ಯ ಆಂಧ್ರಪ್ರದೇಶದ ರಾಜ್ಯಕೀಯ ಅಂದ್ರೆ ಕಲರ್‌ಫುಲ್. ಅಲ್ಲಿನ ರಾಜಕೀಯದಲ್ಲಿ ಯಾವಾಗ ಏನ್ ಆಗುತ್ತೆ ಅನ್ನೋದು ಊಹಿಸಲು ಅಸಾಧ್ಯ. ಅದರಲ್ಲೂ ಜಗನ್‌ ಮೋಹನ್ ರೆಡ್ಡಿ ಸಿಎಂ ಆದ ಮೇಲೆ ಅಲ್ಲಿನ ರಾಜಕೀಯ ಫುಲ್ ಬದಲಾಗಿ ಹೋಗಿದೆ. ಹೀಗೆ ನಾನಾ ಕಾರಣಗಳಿಂದ ಗಮನ ಸೆಳೆದೆ ಆಂಧ್ರ ರಾಜಕೀಯ ಮತ್ತೆ ಸದ್ದು ಮಾಡುತ್ತಿದೆ.

2024 ರಲ್ಲಿ ಆಂಧ್ರದ ಗದ್ದುಗೆ ಹಿಡಿಯಲು ಪ್ಲ್ಯಾನ್: ಆಂಧ್ರಪ್ರದೇಶದ 2024ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಎರಡೂ ಪಕ್ಷಗಳು ಈಗಲೇ ಮೈತ್ರಿ ಮಾಡಿಕೊಂಡಿವೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಹಾಗೂ ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷಗಳ ನಡುವೆ ಮೈತ್ರಿ ಏರ್ಪಟ್ಟಿದೆ. ನಿನ್ನೆ ವಿಜಯವಾಡದಲ್ಲಿ ಸಭೆ ನಡೆಸಿದ ಬಳಿಕ ಬಿಜೆಪಿ-ಜನಸೇನಾ ಪಕ್ಷಗಳು ತಮ್ಮ ನಡುವಿನ ರಾಜಕೀಯ ಮೈತ್ರಿಯನ್ನು ಘೋಷಿಸಿವೆ. ಕಳೆದ ವಾರವೇ ಜನಸೇನಾ ಪಕ್ಷದ ಸ್ಥಾಪಕ ಪವನ್ ಕಲ್ಯಾಣ್ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾರನ್ನ ಭೇಟಿಯಾಗಿದ್ದರು. ಆಗಲೇ ಎರಡು ಪಕ್ಷಗಳ ನಡುವಿನ ಮೈತ್ರಿಯ ಸುಳಿವು ಸಿಕ್ಕಿತ್ತು. ಈಗ ಅದು ಅಧಿಕೃತವಾಗಿದೆ.

ಬಿಜೆಪಿ ಜೊತೆ ಜನಸೇನಾ ಮೈತ್ರಿ: ಅಂದಹಾಗೇ ಕಳೆದ ವರ್ಷ ನಡೆದ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷಕ್ಕೆ ಯಶಸ್ಸು ಸಿಕ್ಕಿಲ್ಲ. ಒಂದು ಕ್ಷೇತ್ರದಲ್ಲಿ ಮಾತ್ರ ಜನಸೇನಾ ಪಕ್ಷ ಗೆಲುವು ಸಾಧಿಸಿತ್ತು. ಆದರೆ, ಶೇಕಡಾ 7ರಷ್ಟು ವೋಟ್ ಪಡೆದಿತ್ತು. 2024ರ ಆಂಧ್ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಪಕ್ಷ ಸಂಘಟಿಸಿದರೇ, ಯಶಸ್ಸು ಸಿಗಬಹುದು. ಜೊತೆಗೆ ಬಿಜೆಪಿ ಜೊತೆ ಮೈತ್ರಿ ಇದ್ದರೇ ಮತ್ತಷ್ಟು ಅನುಕೂಲವಾಗಲಿದೆ ಅನ್ನೋ ಲೆಕ್ಕಾಚಾರವನ್ನು ಪವನ್ ಕಲ್ಯಾಣ್ ಹಾಕಿದ್ದಾರೆ. ಹೀಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.

ಒಟ್ನಲ್ಲಿ ಮೋದಿ ಅಲೆಯ ಮೇಲೆ ನಂಬಿಕೆ ಇಟ್ಟಿರುವ ಪವನ್ ಕಲ್ಯಾಣ್ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು 2024ರ ವಿಧಾನಸಭೆ ಚುನಾವಣೆ ಎದುರಿಸಿ, ಸಿಎಂ ಹುದ್ದೆಗೇರಬಹುದು ಅನ್ನೋ ಲೆಕ್ಕಾಚಾರದಲ್ಲಿದ್ದಾರೆ. ಅದಕ್ಕಾಗಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಆಂಧ್ರದಲ್ಲಿ ಸಿಎಂ ಜಗನ್ ಮುಂದೆ ಬಿಜೆಪಿ ಮತ್ತು ಜನಸೇನಾ ಮೈತ್ರಿ ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡ್ಬೇಕಿದೆ.

Published On - 8:20 am, Fri, 17 January 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ