AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಜೊತೆ ಗೋಲ್​ ಗಪ್ಪ ಸವಿದ ಜಪಾನ್​ ಪ್ರಧಾನಿ ಫ್ಯೂಮಿಯೊ ಕಿಶಿದಾ

ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯ ಬುದ್ಧ ಜಯಂತಿ ಪಾರ್ಕ್‌ಗೆ ಭೇಟಿ ನೀಡಿದ ವೇಳೆ ಗೋಲ್​ ಗಪ್ಪ ಸವಿದಿದ್ದಾರೆ.

ನರೇಂದ್ರ ಮೋದಿ ಜೊತೆ ಗೋಲ್​ ಗಪ್ಪ ಸವಿದ ಜಪಾನ್​ ಪ್ರಧಾನಿ ಫ್ಯೂಮಿಯೊ ಕಿಶಿದಾ
ನರೇಂದ್ರ ಮೋದಿ ಜೊತೆ ಗೋಲ್​ ಗಪ್ಪ ತಿನ್ನುತ್ತಿರುವ ಜಪಾನ್​ ಪ್ರಧಾನಿ ಫ್ಯೂಮಿಯೊ ಕಿಶಿದಾ
ಗಂಗಾಧರ​ ಬ. ಸಾಬೋಜಿ
|

Updated on:Mar 20, 2023 | 9:11 PM

Share

ದೆಹಲಿ: ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ (Japanese PM Fumio Kishida) ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯ ಬುದ್ಧ ಜಯಂತಿ ಪಾರ್ಕ್‌ಗೆ ಭೇಟಿ ನೀಡಿದ ವೇಳೆ ಗೋಲ್​ ಗಪ್ಪ (ಪಾನಿ ಪುರಿ) ಮತ್ತು ಲಸ್ಸಿ ಸೇರಿದಂತೆ ಭಾರತೀಯ ವಿವಿಧ ಖಾದ್ಯಗಳನ್ನು ಸೇವಿಸಿದ್ದಾರೆ. ಇಬ್ಬರು ನಾಯಕರು ಗೋಲ್​ ಗಪ್ಪ ಸವಿಯುತ್ತಿರುವ ಆನಂದ ಕ್ಷಣವನ್ನು ಕಾಣಬಹುದಾಗಿದೆ. ಬಳಿಕ ಪ್ರಧಾನಿ ಮೋದಿ, ಫ್ಯೂಮಿಯೊ ಕಿಶಿದಾ ಅವರಿಗೆ ಗೋಲ್​ ಗಪ್ಪ ಪಾಕವಿಧಾನದ ಕುರಿತು ವಿವರಿಸಿದ್ದಾರೆ. ಬಳಿಕ ಬೀಸಿಲಿನ ಬೇಗೆಯಿಂದ ತಂಪಾಗಿಸಿಕೊಳ್ಳಲು ಮಾವಿನ ಲಸ್ಸಿ (ಆಮ್-ಪನ್ನಾ) ಯನ್ನು ಇಬ್ಬರು ನಾಯಕರು ಸೇವಿಸಿ ಖುಷಿಪಟ್ಟಿದ್ದಾರೆ. ಸದ್ಯ ಸಾಮಾನ್ಯ ಭಾರತೀಯರ ಇಷ್ಟದ ಆಹಾರವಾದ ಗೋಲ್-ಗಪ್ಪವನ್ನು ಫ್ಯೂಮಿಯೊ ಕಿಶಿದಾ ಮತ್ತು ನರೇಂದ್ರ ಮೋದಿ ಸೇವಿಸಿರುವುದು ಸಾಕಷ್ಟು ವೈರಲ್​ ಆಗಿದೆ.

ಕಿಶಿದಾ ಅವರು ಪ್ರಧಾನಿ ಮೋದಿಯವರೊಂದಿಗೆ ವಾರ್ಷಿಕ ಭಾರತ-ಜಪಾನ್ ಶೃಂಗಸಭೆಗಾಗಿ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದು, ಸೋಮವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದಿದ್ದಾರೆ. ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ತಮ್ಮ ಭೇಟಿಯನ್ನು ಪ್ರಾರಂಭಿಸಿದ ಜಪಾನ್ ಪ್ರಧಾನಿ, ನಂತರ ದೆಹಲಿಯ ಧೌಲಾ ಕುವಾನ್‌ನಲ್ಲಿರುವ ಬುದ್ಧ ಸ್ಮಾರಕ ಉದ್ಯಾನವನಕ್ಕೆ ಭೇಟಿ ನೀಡಿದರು. ಅಲ್ಲಿ ಟಿಬೆಟಿಯನ್ ಜನರಿಗೆ ಕೃತಜ್ಞತೆಯ ಸಂಕೇತವಾಗಿ ಬುದ್ಧನ ಚಿನ್ನದ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: Japan PM Fumio Kishida: ಜಿ7 ಹಿರೋಷಿಮಾ ಶೃಂಗಸಭೆಗೆ ಪ್ರಧಾನಿ ಮೋದಿಗೆ ಔಪಚಾರಿಕ ಆಹ್ವಾನ ನೀಡಿದ ಜಪಾನ್ ಪ್ರಧಾನಿ

ಜಿ7 ನಾಯಕರ ಸಭೆಗೆ ಮೋದಿ ಆಹ್ವಾನಿಸಿದ ಜಪಾನ್​ ಪ್ರಧಾನಿ

ಮೇ ತಿಂಗಳಲ್ಲಿ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ನಾಯಕರ ಸಭೆಗೆ ಕಿಶಿದಾ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ್ದಾರೆ. ಬಳಿಕ ಹೈದರಾಬಾದ್ ಹೌಸ್‌ನಲ್ಲಿ ಉಭಯ ನಾಯಕರು ಸಭೆ ನಡೆಸಿದರು. ಈ ವರ್ಷ ಆತಿಥೇಯ ರಾಷ್ಟ್ರವಾಗಿ ಭಾರತದ G20 ಗುರಿಗಳ ಬಗ್ಗೆಯೂ ಅವರು ಮಾತನಾಡಿದರು. ನಂತರ ಮಾತನಾಡಿದ ಪ್ರಧಾನಿ ಮೋದಿ, ಪಿಎಂ ಕಿಶಿದಾ ಅವರೊಂದಿಗೆ ಭಾರತದ ಜಿ 20 ಪ್ರೆಸಿಡೆನ್ಸಿ ಬಗ್ಗೆ ಚರ್ಚಿಸಿದ್ದೇನೆ. ಇಂದು, ನಾನು ಪಿಎಂ ಕಿಶಿದಾ ಅವರಿಗೆ ನಮ್ಮ ಜಿ 20 ಅಧ್ಯಕ್ಷ ಸ್ಥಾನದ ಆದ್ಯತೆಗಳ ಬಗ್ಗೆ ವಿವರವಾಗಿ ಹೇಳಿದ್ದೇನೆ. ಜಿ 20 ಅಧ್ಯಕ್ಷ ಸ್ಥಾನದ ಪ್ರಮುಖ ಅಡಿಪಾಯವೆಂದರೆ ಜಾಗತಿಕ ದಕ್ಷಿಣದ ಆದ್ಯತೆಗಳಿಗೆ ಧ್ವನಿ ನೀಡುವುದು ಎಂದರು.

ಇದನ್ನೂ ಓದಿ: ದೆಹಲಿಯ ಬುದ್ಧ ಜಯಂತಿ ಪಾರ್ಕ್​​ನಲ್ಲಿ ಜಪಾನ್ ಪ್ರಧಾನಿ, ಮೋದಿ ವಾಯು ವಿಹಾರ, ಒಂದಿಷ್ಟು ಚರ್ಚೆ​: ಇಲ್ಲಿವೆ ಫೋಟೋಸ್

ಭಾರತ ಮತ್ತು ಜಪಾನ್​ ಒಟ್ಟಾಗಿ ಕೆಲಸ

ವಸುಧೈವ ಕುಟುಂಬಕಂನಲ್ಲಿ ನಂಬಿಕೆಯಿರುವ ಸಂಸ್ಕೃತಿಯ ಮೂಲಕ ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಸುವುದಾಗಿದೆ. ಅದಕ್ಕಾಗಿಯೇ ನಾವು ಈ ಜಿ 20 ಸಭೆಯನ್ನು ಕೈಗೊಂಡಿದ್ದೇವೆ. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯು ನಮ್ಮ ಪರಸ್ಪರ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಕಾನೂನಿನ ನಿಯಮದ ಗೌರವವನ್ನು ಆಧರಿಸಿದೆ. ಭಾರತದ ಜಿ 20 ಅಧ್ಯಕ್ಷ ಸ್ಥಾನ ಮತ್ತು ಜಪಾನ್‌ನ ಜಿ 7 ಅಧ್ಯಕ್ಷ ಸ್ಥಾನದ ಆದ್ಯತೆಗಳ ಮೇಲೆ ಒಟ್ಟಾಗಿ ಕೆಲಸ ಮಾಡಲು ಇದು ಅತ್ಯುತ್ತಮ ಅವಕಾಶವಾಗಿದೆ. ಪ್ರತಿ ಬಾರಿ ಫ್ಯೂಮಿಯೊ ಕಿಶಿದಾ ಅವರನ್ನು ಭೇಟಿಯಾದಾಗಲೂ ಭಾರತ-ಜಪಾನ್ ದ್ವಿಪಕ್ಷೀಯ ಸಂಬಂಧಕ್ಕೆ ಸಕಾರಾತ್ಮಕತೆ ಮತ್ತು ಬದ್ಧತೆಯನ್ನು ಕಂಡುಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:04 pm, Mon, 20 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ