AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.19-20ಕ್ಕೆ ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ; ಉಕ್ರೇನ್​ ಬಿಕ್ಕಟ್ಟಿನ ಬಗ್ಗೆಯೂ ನಡೆಯಲಿದೆ ಚರ್ಚೆ

2019 ರಲ್ಲಿ ಭಾರತದ ಅಸ್ಸಾಂ ಸೇರಿ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಹೀಗಾಗಿ 2019ರ ಡಿಸೆಂಬರ್​ 15-17ರವರೆಗೆ ಜಪಾನ್​ನ ಅಂದಿನ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು.

ಮಾ.19-20ಕ್ಕೆ ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ; ಉಕ್ರೇನ್​ ಬಿಕ್ಕಟ್ಟಿನ ಬಗ್ಗೆಯೂ ನಡೆಯಲಿದೆ ಚರ್ಚೆ
ಜಪಾನ್​ ಪ್ರಧಾನಿ ಮತ್ತು ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Mar 15, 2022 | 10:51 AM

Share

ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೊ ಕಿಶಿದಾ (Fumio Kishida)ಮಾರ್ಚ್​ 19-20ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ವಾರ್ಷಿಕ ಶೃಂಗಸಭೆಗಾಗಿ ಅವರು ಮಾರ್ಚ್​ 19ರ ಮಧ್ಯಾಹ್ನದ ಹೊತ್ತಿಗೆ ಭಾರತಕ್ಕೆ ತಲುಪಲಿದ್ದು, ಮರುದಿನ ಮಾರ್ಚ್​ 20ರಂದು ವಾಪಸ್​ ತೆರಳಲಿದ್ದಾರೆ. ಭಾರತ ಮತ್ತು ಜಪಾನ್​ ನಡುವೆ ಹೊಸ ಹೂಡಿಕೆಗಳಿಗೆ ಉತ್ತೇಜನ ನೀಡುವ ಮತ್ತು ದ್ವಿಪಕ್ಷೀಯ ಸಹಭಾಗಿತ್ವ ಬಲ ಪಡಿಸಲು ಇದೊಂದು ಸದಾವಕಾಶವಾಗಿದೆ. ಪ್ರಧಾನಿ ಮೋದಿ ಮತ್ತು ಜಪಾನ್​ ಪ್ರಧಾನಮಂತ್ರಿ ಫ್ಯುಮಿಯೋ ಕಿಶಿದಾ ನಡೆಸಲಿರುವ ಈ ಶೃಂಗಸಭೆಯಲ್ಲಿ, ಎರಡೂ ದೇಶಗಳ ನಡುವಿನ ಆರ್ಥಿಕ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚೆ ನಡೆಯಲಿದೆ. ಇಂಡೋ-ಫೆಸಿಪಿಕ್​ ಸಮಸ್ಯೆಗಳು ಮತ್ತು ಉಕ್ರೇನ್​ ಬಿಕ್ಕಟ್ಟಿನ ಕುರಿತೂ ಇಬ್ಬರು ದಿಗ್ಗಜರು ವಿಸ್ತೃತ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

2019 ರಲ್ಲಿ ಭಾರತದ ಅಸ್ಸಾಂ ಸೇರಿ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಹೀಗಾಗಿ 2019ರ ಡಿಸೆಂಬರ್​ 15-17ರವರೆಗೆ ಜಪಾನ್​ನ ಅಂದಿನ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು. ಅದಾದ ಬಳಿಕ 2021ರ ಸೆಪ್ಟೆಂಬರ್​ನಲ್ಲಿ ಜಪಾನ್​ ಪ್ರಧಾನಿಯಾಗಿ ಕಿಶಿದಾ ಅಧಿಕಾರ ವಹಿಸಿಕೊಂಡಿದ್ದಾರೆ. ಅಂದು ರದ್ದಾದ, ಆಗಿನ ಪ್ರಧಾನಿ ಶಿಂಜೋ ಅಬೆ ಮತ್ತು ಪ್ರಧಾನಿ ಮೋದಿ ನಡುವಿನ ಭೇಟಿಯ ಮುಂದುವರಿದ ಭಾಗವಾಗಿ ಇದೀಗ ಕಿಶಿದಾ ಮತ್ತು ಮೋದಿ ಭೇಟಿಯಾಗಿ, ವಿವಿಧ ವಿಷಯಗಳ ಚರ್ಚೆ ನಡೆಸಲಿದ್ದಾರೆ. ಅತ್ತ ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ್ದು, ಜಾಗತಿಕವಾಗಿ ಪ್ರಕ್ಷುಬ್ಧತೆ ಉಂಟಾಗಿದೆ. ಈಗಾಗಲೇ ಕ್ವಾಡ್​ ನಾಯಕರು ಅಂದರೆ ಭಾರತದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಯುಎಸ್​ ಅಧ್ಯಕ್ಷ ಜೋ ಬೈಡನ್​ ಮತ್ತು ಜಪಾನ್​ ಪ್ರಧಾನಿ ಕಿಶಿದಾ ವರ್ಚ್ಯುವಲ್​ ಆಗಿ ಸಭೆ ನಡೆಸಿದ್ದಾರೆ. ಹೀಗಿದ್ದಾಗ್ಯೂ ಜಪಾನ್​, ಭಾರತದ ಪ್ರಧಾನಿಯವರೊಂದಿಗೆ ಶೃಂಗಸಭೆ ನಡೆಸಲು ದಿನಾಂಕ ನಿಗದಿ ಮಾಡುವಂತೆ ಹೇಳಿತ್ತು ಎಂದೂ ವರದಿಯಾಗಿದೆ.

ಕಿಶಿದಾ ದೆಹಲಿ ಭೇಟಿಯ ವೇಳೆ ಉದ್ಯಮಕ್ಕೆ ಸಂಬಂಧಪಟ್ಟ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೇ, ಮುಂಬೈ-ಅಹ್ಮದಾಬಾದ್​ ಕಾರಿಡಾರ್​ ಆಚೆಗೂ ಬುಲೆಟ್​​ ರೈಲು ಯೋಜನೆ ವಿಸ್ತರಣೆ ಮಾಡುವ ನಿಟ್ಟಿನಲ್ಲೂ ಭಾರತ-ಜಪಾನ್​ ಮಾತುಕತೆಗಳು ನಡೆಯಲಿವೆ. ಜಾಗತಿಕವಾಗಿ ನಡೆಯುವ ಸಣ್ಣಮಟ್ಟದ ರಾಜಕೀಯಗಳಿಗೆ ಪ್ರಭಾವಿತರಾಗದೆ, ಎರಡೂ ರಾಷ್ಟ್ರಗಳೂ ಸದಾ ಉತ್ತಮ ಸಂಬಂಧ ಕಾಯ್ದುಕೊಳ್ಳಬೇಕು. ಭಾರತ ಮತ್ತು ಜಪಾನ್​ ಮಧ್ಯೆ ಪೂರೈಕೆ ಸರಪಳಿ ಸರಾಗವಾಗಿ ಇರಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆಯೂ ದಿಗ್ಗಜರು ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: Russia Ukraine Conflict: ಇನ್ನೂ ಎರಡು ತಿಂಗಳು ಯುದ್ಧ ಮುಂದುವರಿಯಲಿದೆ ಎಂದು ಉಕ್ರೇನ್: ದಾಳಿ ತೀವ್ರಗೊಳಿಸಿದ ರಷ್ಯಾ

Published On - 9:55 am, Tue, 15 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ