AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.19-20ಕ್ಕೆ ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ; ಉಕ್ರೇನ್​ ಬಿಕ್ಕಟ್ಟಿನ ಬಗ್ಗೆಯೂ ನಡೆಯಲಿದೆ ಚರ್ಚೆ

2019 ರಲ್ಲಿ ಭಾರತದ ಅಸ್ಸಾಂ ಸೇರಿ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಹೀಗಾಗಿ 2019ರ ಡಿಸೆಂಬರ್​ 15-17ರವರೆಗೆ ಜಪಾನ್​ನ ಅಂದಿನ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು.

ಮಾ.19-20ಕ್ಕೆ ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ; ಉಕ್ರೇನ್​ ಬಿಕ್ಕಟ್ಟಿನ ಬಗ್ಗೆಯೂ ನಡೆಯಲಿದೆ ಚರ್ಚೆ
ಜಪಾನ್​ ಪ್ರಧಾನಿ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Mar 15, 2022 | 10:51 AM

Share

ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೊ ಕಿಶಿದಾ (Fumio Kishida)ಮಾರ್ಚ್​ 19-20ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ವಾರ್ಷಿಕ ಶೃಂಗಸಭೆಗಾಗಿ ಅವರು ಮಾರ್ಚ್​ 19ರ ಮಧ್ಯಾಹ್ನದ ಹೊತ್ತಿಗೆ ಭಾರತಕ್ಕೆ ತಲುಪಲಿದ್ದು, ಮರುದಿನ ಮಾರ್ಚ್​ 20ರಂದು ವಾಪಸ್​ ತೆರಳಲಿದ್ದಾರೆ. ಭಾರತ ಮತ್ತು ಜಪಾನ್​ ನಡುವೆ ಹೊಸ ಹೂಡಿಕೆಗಳಿಗೆ ಉತ್ತೇಜನ ನೀಡುವ ಮತ್ತು ದ್ವಿಪಕ್ಷೀಯ ಸಹಭಾಗಿತ್ವ ಬಲ ಪಡಿಸಲು ಇದೊಂದು ಸದಾವಕಾಶವಾಗಿದೆ. ಪ್ರಧಾನಿ ಮೋದಿ ಮತ್ತು ಜಪಾನ್​ ಪ್ರಧಾನಮಂತ್ರಿ ಫ್ಯುಮಿಯೋ ಕಿಶಿದಾ ನಡೆಸಲಿರುವ ಈ ಶೃಂಗಸಭೆಯಲ್ಲಿ, ಎರಡೂ ದೇಶಗಳ ನಡುವಿನ ಆರ್ಥಿಕ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚೆ ನಡೆಯಲಿದೆ. ಇಂಡೋ-ಫೆಸಿಪಿಕ್​ ಸಮಸ್ಯೆಗಳು ಮತ್ತು ಉಕ್ರೇನ್​ ಬಿಕ್ಕಟ್ಟಿನ ಕುರಿತೂ ಇಬ್ಬರು ದಿಗ್ಗಜರು ವಿಸ್ತೃತ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

2019 ರಲ್ಲಿ ಭಾರತದ ಅಸ್ಸಾಂ ಸೇರಿ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಹೀಗಾಗಿ 2019ರ ಡಿಸೆಂಬರ್​ 15-17ರವರೆಗೆ ಜಪಾನ್​ನ ಅಂದಿನ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು. ಅದಾದ ಬಳಿಕ 2021ರ ಸೆಪ್ಟೆಂಬರ್​ನಲ್ಲಿ ಜಪಾನ್​ ಪ್ರಧಾನಿಯಾಗಿ ಕಿಶಿದಾ ಅಧಿಕಾರ ವಹಿಸಿಕೊಂಡಿದ್ದಾರೆ. ಅಂದು ರದ್ದಾದ, ಆಗಿನ ಪ್ರಧಾನಿ ಶಿಂಜೋ ಅಬೆ ಮತ್ತು ಪ್ರಧಾನಿ ಮೋದಿ ನಡುವಿನ ಭೇಟಿಯ ಮುಂದುವರಿದ ಭಾಗವಾಗಿ ಇದೀಗ ಕಿಶಿದಾ ಮತ್ತು ಮೋದಿ ಭೇಟಿಯಾಗಿ, ವಿವಿಧ ವಿಷಯಗಳ ಚರ್ಚೆ ನಡೆಸಲಿದ್ದಾರೆ. ಅತ್ತ ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ್ದು, ಜಾಗತಿಕವಾಗಿ ಪ್ರಕ್ಷುಬ್ಧತೆ ಉಂಟಾಗಿದೆ. ಈಗಾಗಲೇ ಕ್ವಾಡ್​ ನಾಯಕರು ಅಂದರೆ ಭಾರತದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಯುಎಸ್​ ಅಧ್ಯಕ್ಷ ಜೋ ಬೈಡನ್​ ಮತ್ತು ಜಪಾನ್​ ಪ್ರಧಾನಿ ಕಿಶಿದಾ ವರ್ಚ್ಯುವಲ್​ ಆಗಿ ಸಭೆ ನಡೆಸಿದ್ದಾರೆ. ಹೀಗಿದ್ದಾಗ್ಯೂ ಜಪಾನ್​, ಭಾರತದ ಪ್ರಧಾನಿಯವರೊಂದಿಗೆ ಶೃಂಗಸಭೆ ನಡೆಸಲು ದಿನಾಂಕ ನಿಗದಿ ಮಾಡುವಂತೆ ಹೇಳಿತ್ತು ಎಂದೂ ವರದಿಯಾಗಿದೆ.

ಕಿಶಿದಾ ದೆಹಲಿ ಭೇಟಿಯ ವೇಳೆ ಉದ್ಯಮಕ್ಕೆ ಸಂಬಂಧಪಟ್ಟ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೇ, ಮುಂಬೈ-ಅಹ್ಮದಾಬಾದ್​ ಕಾರಿಡಾರ್​ ಆಚೆಗೂ ಬುಲೆಟ್​​ ರೈಲು ಯೋಜನೆ ವಿಸ್ತರಣೆ ಮಾಡುವ ನಿಟ್ಟಿನಲ್ಲೂ ಭಾರತ-ಜಪಾನ್​ ಮಾತುಕತೆಗಳು ನಡೆಯಲಿವೆ. ಜಾಗತಿಕವಾಗಿ ನಡೆಯುವ ಸಣ್ಣಮಟ್ಟದ ರಾಜಕೀಯಗಳಿಗೆ ಪ್ರಭಾವಿತರಾಗದೆ, ಎರಡೂ ರಾಷ್ಟ್ರಗಳೂ ಸದಾ ಉತ್ತಮ ಸಂಬಂಧ ಕಾಯ್ದುಕೊಳ್ಳಬೇಕು. ಭಾರತ ಮತ್ತು ಜಪಾನ್​ ಮಧ್ಯೆ ಪೂರೈಕೆ ಸರಪಳಿ ಸರಾಗವಾಗಿ ಇರಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆಯೂ ದಿಗ್ಗಜರು ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: Russia Ukraine Conflict: ಇನ್ನೂ ಎರಡು ತಿಂಗಳು ಯುದ್ಧ ಮುಂದುವರಿಯಲಿದೆ ಎಂದು ಉಕ್ರೇನ್: ದಾಳಿ ತೀವ್ರಗೊಳಿಸಿದ ರಷ್ಯಾ

Published On - 9:55 am, Tue, 15 March 22

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು