AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.19-20ಕ್ಕೆ ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ; ಉಕ್ರೇನ್​ ಬಿಕ್ಕಟ್ಟಿನ ಬಗ್ಗೆಯೂ ನಡೆಯಲಿದೆ ಚರ್ಚೆ

2019 ರಲ್ಲಿ ಭಾರತದ ಅಸ್ಸಾಂ ಸೇರಿ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಹೀಗಾಗಿ 2019ರ ಡಿಸೆಂಬರ್​ 15-17ರವರೆಗೆ ಜಪಾನ್​ನ ಅಂದಿನ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು.

ಮಾ.19-20ಕ್ಕೆ ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ; ಉಕ್ರೇನ್​ ಬಿಕ್ಕಟ್ಟಿನ ಬಗ್ಗೆಯೂ ನಡೆಯಲಿದೆ ಚರ್ಚೆ
ಜಪಾನ್​ ಪ್ರಧಾನಿ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Mar 15, 2022 | 10:51 AM

Share

ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೊ ಕಿಶಿದಾ (Fumio Kishida)ಮಾರ್ಚ್​ 19-20ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ವಾರ್ಷಿಕ ಶೃಂಗಸಭೆಗಾಗಿ ಅವರು ಮಾರ್ಚ್​ 19ರ ಮಧ್ಯಾಹ್ನದ ಹೊತ್ತಿಗೆ ಭಾರತಕ್ಕೆ ತಲುಪಲಿದ್ದು, ಮರುದಿನ ಮಾರ್ಚ್​ 20ರಂದು ವಾಪಸ್​ ತೆರಳಲಿದ್ದಾರೆ. ಭಾರತ ಮತ್ತು ಜಪಾನ್​ ನಡುವೆ ಹೊಸ ಹೂಡಿಕೆಗಳಿಗೆ ಉತ್ತೇಜನ ನೀಡುವ ಮತ್ತು ದ್ವಿಪಕ್ಷೀಯ ಸಹಭಾಗಿತ್ವ ಬಲ ಪಡಿಸಲು ಇದೊಂದು ಸದಾವಕಾಶವಾಗಿದೆ. ಪ್ರಧಾನಿ ಮೋದಿ ಮತ್ತು ಜಪಾನ್​ ಪ್ರಧಾನಮಂತ್ರಿ ಫ್ಯುಮಿಯೋ ಕಿಶಿದಾ ನಡೆಸಲಿರುವ ಈ ಶೃಂಗಸಭೆಯಲ್ಲಿ, ಎರಡೂ ದೇಶಗಳ ನಡುವಿನ ಆರ್ಥಿಕ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವ ಸಂಬಂಧ ಚರ್ಚೆ ನಡೆಯಲಿದೆ. ಇಂಡೋ-ಫೆಸಿಪಿಕ್​ ಸಮಸ್ಯೆಗಳು ಮತ್ತು ಉಕ್ರೇನ್​ ಬಿಕ್ಕಟ್ಟಿನ ಕುರಿತೂ ಇಬ್ಬರು ದಿಗ್ಗಜರು ವಿಸ್ತೃತ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

2019 ರಲ್ಲಿ ಭಾರತದ ಅಸ್ಸಾಂ ಸೇರಿ ಇನ್ನಿತರ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತು. ಹೀಗಾಗಿ 2019ರ ಡಿಸೆಂಬರ್​ 15-17ರವರೆಗೆ ಜಪಾನ್​ನ ಅಂದಿನ ಪ್ರಧಾನಿ ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು. ಅದಾದ ಬಳಿಕ 2021ರ ಸೆಪ್ಟೆಂಬರ್​ನಲ್ಲಿ ಜಪಾನ್​ ಪ್ರಧಾನಿಯಾಗಿ ಕಿಶಿದಾ ಅಧಿಕಾರ ವಹಿಸಿಕೊಂಡಿದ್ದಾರೆ. ಅಂದು ರದ್ದಾದ, ಆಗಿನ ಪ್ರಧಾನಿ ಶಿಂಜೋ ಅಬೆ ಮತ್ತು ಪ್ರಧಾನಿ ಮೋದಿ ನಡುವಿನ ಭೇಟಿಯ ಮುಂದುವರಿದ ಭಾಗವಾಗಿ ಇದೀಗ ಕಿಶಿದಾ ಮತ್ತು ಮೋದಿ ಭೇಟಿಯಾಗಿ, ವಿವಿಧ ವಿಷಯಗಳ ಚರ್ಚೆ ನಡೆಸಲಿದ್ದಾರೆ. ಅತ್ತ ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ್ದು, ಜಾಗತಿಕವಾಗಿ ಪ್ರಕ್ಷುಬ್ಧತೆ ಉಂಟಾಗಿದೆ. ಈಗಾಗಲೇ ಕ್ವಾಡ್​ ನಾಯಕರು ಅಂದರೆ ಭಾರತದ ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಯುಎಸ್​ ಅಧ್ಯಕ್ಷ ಜೋ ಬೈಡನ್​ ಮತ್ತು ಜಪಾನ್​ ಪ್ರಧಾನಿ ಕಿಶಿದಾ ವರ್ಚ್ಯುವಲ್​ ಆಗಿ ಸಭೆ ನಡೆಸಿದ್ದಾರೆ. ಹೀಗಿದ್ದಾಗ್ಯೂ ಜಪಾನ್​, ಭಾರತದ ಪ್ರಧಾನಿಯವರೊಂದಿಗೆ ಶೃಂಗಸಭೆ ನಡೆಸಲು ದಿನಾಂಕ ನಿಗದಿ ಮಾಡುವಂತೆ ಹೇಳಿತ್ತು ಎಂದೂ ವರದಿಯಾಗಿದೆ.

ಕಿಶಿದಾ ದೆಹಲಿ ಭೇಟಿಯ ವೇಳೆ ಉದ್ಯಮಕ್ಕೆ ಸಂಬಂಧಪಟ್ಟ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೇ, ಮುಂಬೈ-ಅಹ್ಮದಾಬಾದ್​ ಕಾರಿಡಾರ್​ ಆಚೆಗೂ ಬುಲೆಟ್​​ ರೈಲು ಯೋಜನೆ ವಿಸ್ತರಣೆ ಮಾಡುವ ನಿಟ್ಟಿನಲ್ಲೂ ಭಾರತ-ಜಪಾನ್​ ಮಾತುಕತೆಗಳು ನಡೆಯಲಿವೆ. ಜಾಗತಿಕವಾಗಿ ನಡೆಯುವ ಸಣ್ಣಮಟ್ಟದ ರಾಜಕೀಯಗಳಿಗೆ ಪ್ರಭಾವಿತರಾಗದೆ, ಎರಡೂ ರಾಷ್ಟ್ರಗಳೂ ಸದಾ ಉತ್ತಮ ಸಂಬಂಧ ಕಾಯ್ದುಕೊಳ್ಳಬೇಕು. ಭಾರತ ಮತ್ತು ಜಪಾನ್​ ಮಧ್ಯೆ ಪೂರೈಕೆ ಸರಪಳಿ ಸರಾಗವಾಗಿ ಇರಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆಯೂ ದಿಗ್ಗಜರು ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: Russia Ukraine Conflict: ಇನ್ನೂ ಎರಡು ತಿಂಗಳು ಯುದ್ಧ ಮುಂದುವರಿಯಲಿದೆ ಎಂದು ಉಕ್ರೇನ್: ದಾಳಿ ತೀವ್ರಗೊಳಿಸಿದ ರಷ್ಯಾ

Published On - 9:55 am, Tue, 15 March 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್