AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮಾತಿನ ಧಾಟಿ ಸ್ವೀಕಾರಾರ್ಹವಲ್ಲ: ಸಂಸತ್ತಿನಲ್ಲಿ ಜಗದೀಪ್ ಧನ್ಖರ್ ವಿರುದ್ಧ ಜಯಾ ಬಚ್ಚನ್ ವಾಗ್ದಾಳಿ

ಕಳೆದ ವಾರ ಜಯಾ ಅಮಿತಾಬ್ ಬಚ್ಚನ್ ಎಂದು ಕರೆದ ನಂತರ ನಟ-ರಾಜಕಾರಣಿ ಜಯಾ ಬಚ್ಚನ್, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ವಾಗ್ವಾದ ನಡೆಸಿದ್ದರು. "ಸರ್, ಸಿರ್ಫ್ ಜಯಾ ಬಚ್ಚನ್ ಬೋಲ್ತೆ ತೋ ಕಾಫಿ ಹೋಜಾತಾ (ನನ್ನನ್ನು ಜಯಾ ಬಚ್ಚನ್ ಎಂದು ಕರೆದರೆ ಸಾಕು, ಸರ್)" ಎಂದು ಅವರು ಹೇಳಿದ್ದರು.

ನಿಮ್ಮ ಮಾತಿನ ಧಾಟಿ  ಸ್ವೀಕಾರಾರ್ಹವಲ್ಲ: ಸಂಸತ್ತಿನಲ್ಲಿ ಜಗದೀಪ್ ಧನ್ಖರ್ ವಿರುದ್ಧ ಜಯಾ ಬಚ್ಚನ್ ವಾಗ್ದಾಳಿ
ಜಗದೀಪ್ ಧನ್ಖರ್ -ಜಯಾ ಬಚ್ಚನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Aug 09, 2024 | 2:22 PM

Share

ದೆಹಲಿ ಆಗಸ್ಟ್ 09: ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ (Jagdeep Dhankar) ಅವರು ಸಮಾಜವಾದಿ ಸಂಸದೆ ಜಯಾ ಬಚ್ಚನ್ (Jaya Bachchan) ಅವರನ್ನು ಶುಕ್ರವಾರ ಸಂಸತ್ತಿನಲ್ಲಿ “ಜಯಾ ಅಮಿತಾಭ್ ಬಚ್ಚನ್” ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಯಾ. “ನನ್ನನ್ನು ಕ್ಷಮಿಸಿ, ಆದರೆ ನಿಮ್ಮ ಮಾತಿನ ಧಾಟಿ ಸ್ವೀಕಾರಾರ್ಹವಲ್ಲ, ಸರ್” ಎಂದಿದ್ದಾರೆ. ಇದಕ್ಕೆ ಧನ್ಖರ್, “ನೀವು ಸೆಲೆಬ್ರಿಟಿಯಾಗಿರಬಹುದು.ಆದರೆ ನೀವು ಇಲ್ಲಿನ ಶಿಷ್ಟಾಚಾರಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. ಇಬ್ಬರ ನಡುವಿನ ಮಾತಿನ ಚಕಮಕಿಯ ನಂತರ, ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದ ವಿರೋಧ ಪಕ್ಷಗಳು ಜಯಾ ಬಚ್ಚನ್ ಅವರಿಗೆ ಬೆಂಬಲ ಸೂಚಿಸಿ ಸದನದಿಂದ ಹೊರನಡೆದಿವೆ.

ಈ ವಾರದ ಆರಂಭದಲ್ಲಿ ಜಯಾ ಬಚ್ಚನ್ ಅವರನ್ನು ಸಂಸತ್ತಿನಲ್ಲಿ ಅಮಿತಾಬ್ ಬಚ್ಚನ್ ಅವರ ಹೆಸರನ್ನು ಸಂಬೋಧಿಸಿದ್ದಕ್ಕೆ ಅವರು ರಾಜ್ಯಸಭಾ ಉಪಾಧ್ಯಕ್ಷರೊಂದಿಗೆ ವಾಗ್ವಾದ ನಡೆಸಿದ್ದಾರೆ. ಕಳೆದ ವಾರ ಜಯಾ ಅಮಿತಾಬ್ ಬಚ್ಚನ್ ಎಂದು ಕರೆದ ನಂತರ ನಟ-ರಾಜಕಾರಣಿಯು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ವಾಗ್ವಾದ ನಡೆಸಿದ್ದರು. “ಸರ್, ಸಿರ್ಫ್ ಜಯಾ ಬಚ್ಚನ್ ಬೋಲ್ತೆ ತೋ ಕಾಫಿ ಹೋಜಾತಾ (ನನ್ನನ್ನು ಜಯಾ ಬಚ್ಚನ್ ಎಂದು ಕರೆದರೆ ಸಾಕು, ಸರ್)” ಎಂದು ಅವರು ಹೇಳಿದ್ದರು.

ಧನ್ಖರ್- ಜಯಾ ಬಚ್ಚನ್ ವಾಕ್ಸಮರ

ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಮೇಲ್ಮನೆಯಲ್ಲಿ ‘ಜಯಾ ಅಮಿತಾಭ್ ಬಚ್ಚನ್’ ಗದ್ದಲ ಪುನರಾವರ್ತನೆಯಾಗುತ್ತಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದ ವಿರೋಧ ಪಕ್ಷಗಳು ಶುಕ್ರವಾರ ಮಧ್ಯಾಹ್ನ ರಾಜ್ಯಸಭೆಯಿಂದ ಹೊರನಡೆದಿವೆ. ಈ ಸಂಸತ್ತಿನ ಅಧಿವೇಶನದಲ್ಲಿ ಎರಡು ಬಾರಿ  ಜಯಾ ಬಚ್ಚನ್ ಅವರನ್ನು ‘ಜಯಾ ಅಮಿತಾಭ್ ಬಚ್ಚನ್’ ಎಂದು ಪರಿಚಯಿಸಲಾಗಿದೆ.

ಸಭಾತ್ಯಾಗದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಯಾ, “ಇದು ತುಂಬಾ ಅವಮಾನಕರ ಅನುಭವ…” ಎಂದು ಹೇಳಿದರು.  ಅದೇ ವೇಳೆ ಆಢಳಿತಾರೂಢ ಪಕ್ಷ ವಿಪಕ್ಷದವರನ್ನು  ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, ‘ಜಯಾ ಅಮಿತಾಬ್ ಬಚ್ಚನ್’ ಎಂದು ಉಲ್ಲೇಖಿಸಿದಾಗ  ಜಯಾ ಸಿಡಿಮಿಡಿಗೊಂಡಿದ್ದಾರೆ. ಇದಕ್ಕೆ , ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್  ನೀವು ನನಗೆ ಪಾಠ ಮಾಡಬೇಡಿ ಎಂದಿದ್ದಾರೆ.

ಆದರೆ, ಜಯಾ ಬಚ್ಚನ್ ದೃಢವಾಗಿ ನಿಂತು ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಧನ್ಖರ್ ವಿರುದ್ಧ ಪ್ರತಿಭಟನೆಗಳು ಹೆಚ್ಚಾದಾಗ ಮತ್ತು ವಿರೋಧ ಪಕ್ಷದ ಸಂಸದರು ಹೊರನಡೆದಿದ್ದರಿಂದ “ನನಗೆ ಅಧ್ಯಕ್ಷರಿಂದ ಕ್ಷಮೆ ಬೇಕು” ಎಂದು ಹೇಳಿದರು.

ಇದನ್ನೂ ಓದಿ: 17 ತಿಂಗಳ ನಂತರ ಮನೀಶ್ ಸಿಸೋಡಿಯಾಗೆ ಜಾಮೀನು; ಭಾವುಕರಾದ ಸಚಿವೆ ಅತಿಶಿ

ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ’ಬ್ರೇನ್ ನೇತೃತ್ವದಲ್ಲಿ ವಿಪಕ್ಷ ಸಂಸತ್ತಿನ ಹೊರಗೆ ಜಮಾಯಿಸಿದ್ದಾರೆ.

ಶಿವಸೇನೆಯ (ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಅವರು ಜಯಾ ಬಚ್ಚನ್ ಅವರು “ಅಗಾಧ ಸಂಸದೀಯ ಅನುಭವವನ್ನು ಹೊಂದಿದ್ದಾರೆ. ಉಪಾಧ್ಯಕ್ಷರಿಗಿಂತ ಹೆಚ್ಚು” ಎಂದು ಹೇಳಿದ್ದು, ಅವರ ತೃಣಮೂಲ ಕಾಂಗ್ರೆಸ್ ಸಹೋದ್ಯೋಗಿ ಡೋಲಾ ಸೇನ್, ಜಯಾ ಬಚ್ಚನ್ ನಾಲ್ಕು ಬಾರಿ ಸಂಸದರಾಗಿದ್ದಾರೆ. ಅವರು ಗೌರವಕ್ಕೆ ಅರ್ಹರು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:18 pm, Fri, 9 August 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ