AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.

Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ
ಶಶಿಕಲಾ- ಜಯಲಲಿತಾ, ನ್ಯಾಯಮೂರ್ತಿ ಆರ್ಮುಗಸ್ವಾಮಿImage Credit source: ABP News
TV9 Web
| Edited By: |

Updated on:Oct 18, 2022 | 12:27 PM

Share

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜೆ. ಜಯಲಲಿತಾ (J Jayalalithaa) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ವರದಿ ಮಂಡನೆ ಮಾಡಿದೆ. ತಮಿಳುನಾಡು ಅಸೆಂಬ್ಲಿಯಲ್ಲಿ ಸಮಿತಿಯ ತನಿಖಾ ವರದಿಯನ್ನು ಮಂಡನೆ ಮಾಡಿದ್ದು, ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್ (VK Sasikala), ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.

ಜಯಲಲಿತಾ ಸಾವಿನ ಕುರಿತು ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದಲ್ಲಿ ಈ ವಿಚಾರಣಾ ಸಮಿತಿಯನ್ನು ನೇಮಿಸಲಾಗಿತ್ತು. ತಮಿಳುನಾಡು ಮಾಜಿ ಸಿಎಂ ಮತ್ತು ಎಐಎಡಿಎಂಕೆ ನಾಯಕಿ ಜೆ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರುಮುಗಸ್ವಾಮಿ ತನಿಖಾ ಆಯೋಗವು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತನ್ನ ತನಿಖಾ ವರದಿಯನ್ನು ಮಂಡಿಸಿದೆ.

ಇದನ್ನೂ ಓದಿ: ಶಶಿಕಲಾ ಮನಸಿಗೆ ಬಂದಂತೆ ಮನೆ ಬದಲಿಸಿದ್ದಾರೆ, ವಸ್ತುಗಳೂ ನಾಪತ್ತೆಯಾಗಿವೆ; ಜಯಲಲಿತಾ ಮನೆಯ ವಾರಸ್ದಾರರ ಆರೋಪ

ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್ ಮತ್ತು ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ಅವರನ್ನು ತನಿಖೆ ನಡೆಸಲು ಆದೇಶಿಸಲಾಗಿದೆ. ಇದಕ್ಕೂ ಮುನ್ನ ಸಮಿತಿ ವರದಿಯನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. 2016ರ ಸೆಪ್ಟೆಂಬರ್ 22ರಿಂದ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈ ಸಮಿತಿಯನ್ನು ರಚಿಸಿತ್ತು.

ವಿಕೆ ಶಶಿಕಲಾ, ಶಿವಕುಮಾರ್, ಆಗಿನ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಮತ್ತು ಆಗಿನ ಮುಖ್ಯ ಕಾರ್ಯದರ್ಶಿ ರಾಮಮೋಹನ ರಾವ್ ಅವರ ವಿರುದ್ಧ ಸರ್ಕಾರಿ ತನಿಖೆಗೆ ಆದೇಶಿಸುವ (ಆಯೋಗ) ವರದಿಯ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎನ್ನಲಾಗಿದೆ.

2017ರಲ್ಲಿ ಜಯಲಲಿತಾ ಅವರ ಪಕ್ಷವಾದ ಎಐಡಿಎಂಕೆ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿದ್ದಾಗ ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎ. ಆರ್ಮುಗಸ್ವಾಮಿ ನೇತೃತ್ವದ ಆಯೋಗವನ್ನು ಸ್ಥಾಪಿಸಲಾಗಿತ್ತು. ಬಳಿಕ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಾಗ, ಜಯಲಲತಾ ಅವರ ಸಾವಿನ ಬಗ್ಗೆ ವಿವರವಾದ ತನಿಖೆಯನ್ನು ನಡೆಸುವುದಾಗಿ ಭರವಸೆ ನೀಡಿತ್ತು. ನ್ಯಾಯಮೂರ್ತಿ ಎ ಆರ್ಮುಗಸ್ವಾಮಿ ಅವರ ವರದಿಯನ್ನು ಆಗಸ್ಟ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Tue, 18 October 22

Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್