AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.

Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ
ಶಶಿಕಲಾ- ಜಯಲಲಿತಾ, ನ್ಯಾಯಮೂರ್ತಿ ಆರ್ಮುಗಸ್ವಾಮಿImage Credit source: ABP News
TV9 Web
| Edited By: |

Updated on:Oct 18, 2022 | 12:27 PM

Share

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜೆ. ಜಯಲಲಿತಾ (J Jayalalithaa) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ವರದಿ ಮಂಡನೆ ಮಾಡಿದೆ. ತಮಿಳುನಾಡು ಅಸೆಂಬ್ಲಿಯಲ್ಲಿ ಸಮಿತಿಯ ತನಿಖಾ ವರದಿಯನ್ನು ಮಂಡನೆ ಮಾಡಿದ್ದು, ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್ (VK Sasikala), ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.

ಜಯಲಲಿತಾ ಸಾವಿನ ಕುರಿತು ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದಲ್ಲಿ ಈ ವಿಚಾರಣಾ ಸಮಿತಿಯನ್ನು ನೇಮಿಸಲಾಗಿತ್ತು. ತಮಿಳುನಾಡು ಮಾಜಿ ಸಿಎಂ ಮತ್ತು ಎಐಎಡಿಎಂಕೆ ನಾಯಕಿ ಜೆ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರುಮುಗಸ್ವಾಮಿ ತನಿಖಾ ಆಯೋಗವು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತನ್ನ ತನಿಖಾ ವರದಿಯನ್ನು ಮಂಡಿಸಿದೆ.

ಇದನ್ನೂ ಓದಿ: ಶಶಿಕಲಾ ಮನಸಿಗೆ ಬಂದಂತೆ ಮನೆ ಬದಲಿಸಿದ್ದಾರೆ, ವಸ್ತುಗಳೂ ನಾಪತ್ತೆಯಾಗಿವೆ; ಜಯಲಲಿತಾ ಮನೆಯ ವಾರಸ್ದಾರರ ಆರೋಪ

ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್ ಮತ್ತು ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ಅವರನ್ನು ತನಿಖೆ ನಡೆಸಲು ಆದೇಶಿಸಲಾಗಿದೆ. ಇದಕ್ಕೂ ಮುನ್ನ ಸಮಿತಿ ವರದಿಯನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. 2016ರ ಸೆಪ್ಟೆಂಬರ್ 22ರಿಂದ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈ ಸಮಿತಿಯನ್ನು ರಚಿಸಿತ್ತು.

ವಿಕೆ ಶಶಿಕಲಾ, ಶಿವಕುಮಾರ್, ಆಗಿನ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಮತ್ತು ಆಗಿನ ಮುಖ್ಯ ಕಾರ್ಯದರ್ಶಿ ರಾಮಮೋಹನ ರಾವ್ ಅವರ ವಿರುದ್ಧ ಸರ್ಕಾರಿ ತನಿಖೆಗೆ ಆದೇಶಿಸುವ (ಆಯೋಗ) ವರದಿಯ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎನ್ನಲಾಗಿದೆ.

2017ರಲ್ಲಿ ಜಯಲಲಿತಾ ಅವರ ಪಕ್ಷವಾದ ಎಐಡಿಎಂಕೆ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿದ್ದಾಗ ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎ. ಆರ್ಮುಗಸ್ವಾಮಿ ನೇತೃತ್ವದ ಆಯೋಗವನ್ನು ಸ್ಥಾಪಿಸಲಾಗಿತ್ತು. ಬಳಿಕ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಾಗ, ಜಯಲಲತಾ ಅವರ ಸಾವಿನ ಬಗ್ಗೆ ವಿವರವಾದ ತನಿಖೆಯನ್ನು ನಡೆಸುವುದಾಗಿ ಭರವಸೆ ನೀಡಿತ್ತು. ನ್ಯಾಯಮೂರ್ತಿ ಎ ಆರ್ಮುಗಸ್ವಾಮಿ ಅವರ ವರದಿಯನ್ನು ಆಗಸ್ಟ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Tue, 18 October 22

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ