Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ

ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.

Breaking News: ಜಯಲಲಿತಾ ಸಾವು ಪ್ರಕರಣ; ಶಶಿಕಲಾ, ಮಾಜಿ ಸಚಿವರ ವಿರುದ್ಧ ತನಿಖೆಗೆ ಆರ್ಮುಗಸ್ವಾಮಿ ಆಯೋಗ ಆದೇಶ
ಶಶಿಕಲಾ- ಜಯಲಲಿತಾ, ನ್ಯಾಯಮೂರ್ತಿ ಆರ್ಮುಗಸ್ವಾಮಿImage Credit source: ABP News
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 18, 2022 | 12:27 PM

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಜೆ. ಜಯಲಲಿತಾ (J Jayalalithaa) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ವರದಿ ಮಂಡನೆ ಮಾಡಿದೆ. ತಮಿಳುನಾಡು ಅಸೆಂಬ್ಲಿಯಲ್ಲಿ ಸಮಿತಿಯ ತನಿಖಾ ವರದಿಯನ್ನು ಮಂಡನೆ ಮಾಡಿದ್ದು, ಜಯಲಲಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕಲಾ ನಟರಾಜನ್ (VK Sasikala), ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್, ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಆದೇಶಿಸಲಾಗಿದೆ.

ಜಯಲಲಿತಾ ಸಾವಿನ ಕುರಿತು ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದಲ್ಲಿ ಈ ವಿಚಾರಣಾ ಸಮಿತಿಯನ್ನು ನೇಮಿಸಲಾಗಿತ್ತು. ತಮಿಳುನಾಡು ಮಾಜಿ ಸಿಎಂ ಮತ್ತು ಎಐಎಡಿಎಂಕೆ ನಾಯಕಿ ಜೆ ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಆರುಮುಗಸ್ವಾಮಿ ತನಿಖಾ ಆಯೋಗವು ಇಂದು ತಮಿಳುನಾಡು ವಿಧಾನಸಭೆಯಲ್ಲಿ ತನ್ನ ತನಿಖಾ ವರದಿಯನ್ನು ಮಂಡಿಸಿದೆ.

ಇದನ್ನೂ ಓದಿ: ಶಶಿಕಲಾ ಮನಸಿಗೆ ಬಂದಂತೆ ಮನೆ ಬದಲಿಸಿದ್ದಾರೆ, ವಸ್ತುಗಳೂ ನಾಪತ್ತೆಯಾಗಿವೆ; ಜಯಲಲಿತಾ ಮನೆಯ ವಾರಸ್ದಾರರ ಆರೋಪ

ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ, ಮಾಜಿ ಆರೋಗ್ಯ ಸಚಿವ ವಿಜಯಭಾಸ್ಕರ್ ಮತ್ತು ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ವೈದ್ಯ ಶಿವಕುಮಾರ್ ಅವರನ್ನು ತನಿಖೆ ನಡೆಸಲು ಆದೇಶಿಸಲಾಗಿದೆ. ಇದಕ್ಕೂ ಮುನ್ನ ಸಮಿತಿ ವರದಿಯನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಸಲ್ಲಿಸಿತ್ತು. 2016ರ ಸೆಪ್ಟೆಂಬರ್ 22ರಿಂದ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಈ ಸಮಿತಿಯನ್ನು ರಚಿಸಿತ್ತು.

ವಿಕೆ ಶಶಿಕಲಾ, ಶಿವಕುಮಾರ್, ಆಗಿನ ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಮತ್ತು ಆಗಿನ ಮುಖ್ಯ ಕಾರ್ಯದರ್ಶಿ ರಾಮಮೋಹನ ರಾವ್ ಅವರ ವಿರುದ್ಧ ಸರ್ಕಾರಿ ತನಿಖೆಗೆ ಆದೇಶಿಸುವ (ಆಯೋಗ) ವರದಿಯ ಕುರಿತು ಕಾನೂನು ತಜ್ಞರ ಅಭಿಪ್ರಾಯವನ್ನು ತೆಗೆದುಕೊಂಡು ಸೂಕ್ತ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎನ್ನಲಾಗಿದೆ.

2017ರಲ್ಲಿ ಜಯಲಲಿತಾ ಅವರ ಪಕ್ಷವಾದ ಎಐಡಿಎಂಕೆ ತಮಿಳುನಾಡಿನಲ್ಲಿ ಆಡಳಿತ ನಡೆಸುತ್ತಿದ್ದಾಗ ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎ. ಆರ್ಮುಗಸ್ವಾಮಿ ನೇತೃತ್ವದ ಆಯೋಗವನ್ನು ಸ್ಥಾಪಿಸಲಾಗಿತ್ತು. ಬಳಿಕ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಾಗ, ಜಯಲಲತಾ ಅವರ ಸಾವಿನ ಬಗ್ಗೆ ವಿವರವಾದ ತನಿಖೆಯನ್ನು ನಡೆಸುವುದಾಗಿ ಭರವಸೆ ನೀಡಿತ್ತು. ನ್ಯಾಯಮೂರ್ತಿ ಎ ಆರ್ಮುಗಸ್ವಾಮಿ ಅವರ ವರದಿಯನ್ನು ಆಗಸ್ಟ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:14 pm, Tue, 18 October 22

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?