AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2016ರಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ದಿನ ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು; ಅಪೋಲೋ ವೈದ್ಯರ ವರದಿ

ಜಯಲಲಿತಾ ಅವರ ಆಪ್ತೆಯಾಗಿದ್ದ ಶಶಿಕಲಾ ಅವರ ಪರ ವಕೀಲರಾದ ರಾಜಾ ಷಣ್ಮುಗಂ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಪೋಲೋ ವೈದ್ಯರು, 2016ರ ವೇಳೆಗೇ ಅವರ ಆರೋಗ್ಯ ಹದಗೆಟ್ಟಿತ್ತು.

2016ರಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ದಿನ ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು; ಅಪೋಲೋ ವೈದ್ಯರ ವರದಿ
ಜಯಲಲಿತಾ
TV9 Web
| Edited By: |

Updated on:Mar 08, 2022 | 11:30 AM

Share

ತಮಿಳುನಾಡಿನ ಜನರ ಪಾಲಿಗೆ ಅಮ್ಮನೇ ಆಗಿ ಹೋಗಿದ್ದ, ಅಲ್ಲಿನ ಮಾಜಿ ಸಿಎಂ ಜಯಲಲಿತಾ ( Jayalalithaa Death)  ಮೃತಪಟ್ಟು ಐದುವರ್ಷದ ಮೇಲಾಯಿತು. ಅನಾರೋಗ್ಯದಿಂದ ಮೃತಪಟ್ಟಿದ್ದರೂ ಕೂಡ ಅವರ ಸಾವು ಇಂದಿಗೂ ಹಲವು ಪ್ರಶ್ನೆಗಳನ್ನು ಉಳಿಸಿಯೇ ಹೋಗಿದೆ. ಜಯಲಲಿತಾ ಸಾವಿನ ಬಗ್ಗೆ ಆರ್ಮುಗಂ ಸ್ವಾಮಿ ಆಯೋಗ (ಏಕಸದಸ್ಯ ಆಯೋಗ) ತನಿಖೆ ನಡೆಸುತ್ತಿದೆ.  ಜಯಲಲಿತಾ ಅನಾರೋಗ್ಯಕ್ಕೀಡಾದ ಕಾಲದಲ್ಲಿ ಅವರಿಗೆ ಚಿಕಿತ್ಸೆ ನೀಡಿದ್ದ ಅಪೊಲೋ ಆಸ್ಪತ್ರೆ ವೈದ್ಯ ಬಾಬು ಮನೋಹರ್​ ಅವರು ಇದೀಗ ಆಯೋಗಕ್ಕೆ ಒಂದು ವರದಿ ನೀಡಿದ್ದಾರೆ. ಜಯಲಲಿತಾ ಅವರು 2016ರ ಮೇ ತಿಂಗಳಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನವೇ ಅನಾರೋಗ್ಯದಿಂದ ಬಳಲುತ್ತಿದ್ದರು. ಅಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇತ್ತು. ತಲೆನೋವು ಮಿತಿಮೀರಿತ್ತು ಎಂದು ಬಾಬು ಮನೋಹರ್​ ತನಿಖಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಜಯಲಲಿತಾ ಅವರ ಆಪ್ತೆಯಾಗಿದ್ದ ಶಶಿಕಲಾ ಅವರ ಪರ ವಕೀಲರಾದ ರಾಜಾ ಷಣ್ಮುಗಂ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಪೋಲೋ ವೈದ್ಯರು, 2016ರ ವೇಳೆಗೇ ಅವರ ಆರೋಗ್ಯ ಹದಗೆಟ್ಟಿತ್ತು. ವಿಶ್ರಾಂತಿ ತೆಗೆದುಕೊಳ್ಳುವಂತೆ ನಾವು ಸೂಚಿಸಿದ್ದೆವು. ಆದರೆ ಅವರು, ತಾವು ದಿನಕ್ಕೆ 16 ಗಂಟೆ ಕೆಲಸ ಮಾಡಲೇಬೇಕು. ಹೀಗಾಗಿ ವಿಶ್ರಾಂತಿ ಪಡೆಯುವುದು ತುಂಬ ಕಷ್ಟ ಎಂದು ಹೇಳಿದ್ದರು ಎಂಬುದಾಗಿ ತಿಳಿಸಿದ್ದಾರೆ. ಜಯಲಲಿತಾ ಅನಾರೋಗ್ಯಕ್ಕೀಡಾಗಿ ಸುಮಾರು 75 ದಿನಗಳ ಕಾಲ ಆಸ್ಪತ್ರೆಯಲ್ಲಿ ಇದ್ದರು. ಅವರು ಮೃತಪಟ್ಟ ಬಳಿಕ ಸಾವಿಗೆ ಕಾರಣದ ಬಗ್ಗೆ ಅನೇಕ ಅನುಮಾನಗಳು ಹುಟ್ಟಿವೆ. ಹೀಗಾಗಿ ಅವರ ಸಾವಿನ ತನಿಖೆಗಾಗಿ ತಮಿಳುನಾಡು ಸರ್ಕಾರ ನ್ಯಾಯಮೂರ್ತಿ ಎ.ಆರ್ಮುಗಸ್ವಾಮಿ ನೇತೃತ್ವದ ಆಯೋಗವನ್ನು ರಚಿಸಿದೆ.   ಜಸ್ಟೀಸ್​ ಎ.ಆರ್ಮುಗಂ ಸ್ವಾಮಿ ಆಯೋಗಕ್ಕೆ ಸಹಾಯ ಮಾಡಲು ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ  ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್​)ಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಧರ್ಮ ಗಾರ್ಡಿಯನ್ 2022; ಭಾರತ- ಜಪಾನ್ ಜಂಟಿ ಮಿಲಿಟರಿ ಸಮರಾಭ್ಯಾಸದ ಅಣಕು ಪ್ರದರ್ಶನ

Published On - 9:27 am, Tue, 8 March 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!