AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಿಂದ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆ

ಐದು ವರ್ಷಗಳ ಜೈಲು ಶಿಕ್ಷಯೆ ಬಳಿಕ ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆ
ಜೈಲಿನಿಂದ ಬಿಡುಗಡೆಯಾದ ಸುಧಾಕರನ್
Follow us
TV9 Web
| Updated By: sandhya thejappa

Updated on:Oct 16, 2021 | 12:21 PM

ಆನೇಕಲ್: ಸುಮಾರು ಐದು ವರ್ಷಗಳ ಬಳಿಕ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ (Jayalalitha) ದತ್ತುಪುತ್ರ ಸುಧಾಕರನ್ (Sudhakaran) ಇಂದು (ಅ.16) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಐದು ವರ್ಷಗಳ ಜೈಲು ಶಿಕ್ಷೆಯ ನಂತರ ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಧಾಕರನ್ ರಿಲೀಸ್​ ಆಗುತ್ತಿದ್ದಂತೆ ಬೆಂಬಲಿಗರು ಸುಧಾಕರನ್ ಪರವಾಗಿ ಘೋಷಣೆ ಕೂಗಿ ಬರಮಾಡಿಕೊಂಡಿದ್ದಾರೆ. ಇನ್ನು ಜೈಲಿನಿಂದ ಬಿಡುಗಡೆಗೊಂಡ ಸುಧಾಕರನ್ ಸ್ವಾಗತಕ್ಕಾಗಿ ಬೆಂಬಲಿಗರು ತಮಿಳುನಾಡಿನಿಂದ ಆಗಮಿಸಿದ್ದರು.

ಚಿನ್ನಮ್ಮ ಶಶಿಕಲಾ ನಟರಾಜನ್​ ಜೊತೆಯೇ ಸುಧಾಕರನ್ ಬಿಡುಗಡೆ ಆಗಬೇಕಿತ್ತು. ಆದರೆ ದಂಡ ಕಟ್ಟೋಕೆ‌ ಆಗದ ಹಿನ್ನೆಲೆ ಒಂದು ವರ್ಷ ಹೆಚ್ಚು ಕಾಲ ಜೈಲು ವಾಸವನ್ನು ಅನುಭವಿಸಬೇಕಾಯಿತು.

ಅಕ್ರಮ ಆಸ್ತಿ ಸಂಪಾದಿಸದ್ದ ಆರೋಪದ ಮೇಲೆ ಶಶಿಕಲಾ ನಟರಾಜನ್​ಗೆ ಜೈಲು ವಾಸ ನೀಡಲಾಗಿತ್ತು. ಸುಮಾರು ನಾಲ್ಕು ವರ್ಷಗಳ ನಂತರ ಅಂದರೆ ಇದೇ ವರ್ಷ ಜನವರಿ 27ಕ್ಕೆ ಇವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಲಾಗಿತ್ತು. ಶಶಿಕಲಾ ರಿಲೀಸ್ ಆದ ದಿನವೇ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆಯಾಗಬೇಕಿತ್ತು. ಆದರೆ ದಂಡ ಕಟ್ಟದ ಕಾರಣ ಬಿಡುಗಡೆಯಾಗಿರಲಿಲ್ಲ.

ಇನ್ನು ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿತ್ತು. 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಫೆಬ್ರವರಿ 10ಕ್ಕೆ ಸುಧಾಕರನ್ ಆಸ್ತಿಗೆ  ಮುಟ್ಟುಗೋಲು ಹಾಕಿತ್ತು.

ಇದನ್ನೂ ಓದಿ

ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಭಾರಿ ಮಳೆಗೆ ವಿಪ್ರೊ ಕಂಪನಿಯ ಕಾಂಪೌಂಡ್ ಕುಸಿತ!

Published On - 11:59 am, Sat, 16 October 21

ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ