AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಿಂದ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆ

ಐದು ವರ್ಷಗಳ ಜೈಲು ಶಿಕ್ಷಯೆ ಬಳಿಕ ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಿಂದ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆ
ಜೈಲಿನಿಂದ ಬಿಡುಗಡೆಯಾದ ಸುಧಾಕರನ್
TV9 Web
| Edited By: |

Updated on:Oct 16, 2021 | 12:21 PM

Share

ಆನೇಕಲ್: ಸುಮಾರು ಐದು ವರ್ಷಗಳ ಬಳಿಕ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ (Jayalalitha) ದತ್ತುಪುತ್ರ ಸುಧಾಕರನ್ (Sudhakaran) ಇಂದು (ಅ.16) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಐದು ವರ್ಷಗಳ ಜೈಲು ಶಿಕ್ಷೆಯ ನಂತರ ಸುಧಾಕರನ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಸುಧಾಕರನ್ ರಿಲೀಸ್​ ಆಗುತ್ತಿದ್ದಂತೆ ಬೆಂಬಲಿಗರು ಸುಧಾಕರನ್ ಪರವಾಗಿ ಘೋಷಣೆ ಕೂಗಿ ಬರಮಾಡಿಕೊಂಡಿದ್ದಾರೆ. ಇನ್ನು ಜೈಲಿನಿಂದ ಬಿಡುಗಡೆಗೊಂಡ ಸುಧಾಕರನ್ ಸ್ವಾಗತಕ್ಕಾಗಿ ಬೆಂಬಲಿಗರು ತಮಿಳುನಾಡಿನಿಂದ ಆಗಮಿಸಿದ್ದರು.

ಚಿನ್ನಮ್ಮ ಶಶಿಕಲಾ ನಟರಾಜನ್​ ಜೊತೆಯೇ ಸುಧಾಕರನ್ ಬಿಡುಗಡೆ ಆಗಬೇಕಿತ್ತು. ಆದರೆ ದಂಡ ಕಟ್ಟೋಕೆ‌ ಆಗದ ಹಿನ್ನೆಲೆ ಒಂದು ವರ್ಷ ಹೆಚ್ಚು ಕಾಲ ಜೈಲು ವಾಸವನ್ನು ಅನುಭವಿಸಬೇಕಾಯಿತು.

ಅಕ್ರಮ ಆಸ್ತಿ ಸಂಪಾದಿಸದ್ದ ಆರೋಪದ ಮೇಲೆ ಶಶಿಕಲಾ ನಟರಾಜನ್​ಗೆ ಜೈಲು ವಾಸ ನೀಡಲಾಗಿತ್ತು. ಸುಮಾರು ನಾಲ್ಕು ವರ್ಷಗಳ ನಂತರ ಅಂದರೆ ಇದೇ ವರ್ಷ ಜನವರಿ 27ಕ್ಕೆ ಇವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆ ಮಾಡಲಾಗಿತ್ತು. ಶಶಿಕಲಾ ರಿಲೀಸ್ ಆದ ದಿನವೇ ಜಯಲಲಿತಾ ದತ್ತುಪುತ್ರ ಸುಧಾಕರನ್ ಬಿಡುಗಡೆಯಾಗಬೇಕಿತ್ತು. ಆದರೆ ದಂಡ ಕಟ್ಟದ ಕಾರಣ ಬಿಡುಗಡೆಯಾಗಿರಲಿಲ್ಲ.

ಇನ್ನು ಸುಧಾಕರನ್ ಆಸ್ತಿಗೆ ಸರ್ಕಾರ ಮುಟ್ಟುಗೋಲು ಹಾಕಿತ್ತು. 2017ರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತಮಿಳುನಾಡು ಸರ್ಕಾರ ಫೆಬ್ರವರಿ 10ಕ್ಕೆ ಸುಧಾಕರನ್ ಆಸ್ತಿಗೆ  ಮುಟ್ಟುಗೋಲು ಹಾಕಿತ್ತು.

ಇದನ್ನೂ ಓದಿ

ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಭಾರಿ ಮಳೆಗೆ ವಿಪ್ರೊ ಕಂಪನಿಯ ಕಾಂಪೌಂಡ್ ಕುಸಿತ!

Published On - 11:59 am, Sat, 16 October 21

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ