AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ವಾರಸುದಾರೆ ಸಲ್ಲಿಸಿದ್ದ ಅರ್ಜಿ ವಜಾ: ಜಪ್ತಿಯಾದ ಒಡವೆ ಸರ್ಕಾರದ ಪಾಲು

ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿಯಾದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ನೀಡಿದೆ. ಜಯಲಲಿತಾ ಅವರ ವಾರಸುದಾರೆ ಜೆ. ದೀಪಾ ಅವರು ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ನೇತೃತ್ವ ವಹಿಸಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಜಯಲಲಿತಾ ವಾರಸುದಾರೆ ಸಲ್ಲಿಸಿದ್ದ ಅರ್ಜಿ ವಜಾ: ಜಪ್ತಿಯಾದ ಒಡವೆ ಸರ್ಕಾರದ ಪಾಲು
ಜಯಲಲಿತಾ ವಾರಸುದಾರೆ ಸಲ್ಲಿಸಿದ್ದ ಅರ್ಜಿ ವಜಾ: ಜಪ್ತಿಯಾದ ಒಡವೆ ಸರ್ಕಾರದ ಪಾಲು
Ramesha M
| Edited By: |

Updated on:Jan 13, 2025 | 3:32 PM

Share

ಬೆಂಗಳೂರು, ಜನವರಿ 13: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ (Jayalalithaa) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿದ್ದ ಜಯಲಲಿತಾ ವಾರಸುದಾರೆ ಜೆ.ದೀಪಾ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ವಿ.ಶ್ರೀಶಾನಂದ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ಆದೇಶ ಹೊರಡಿಸಿದೆ.

ಕಳೆದ ವರ್ಷ ಮಾರ್ಚ್ 6, 7ರಂದು ಒಡವೆ ಹಸ್ತಾಂತರಿಸಬೇಕಿತ್ತು. ಆದರೆ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆ ಎಂದು ಜಯಲಲಿತಾ ವಾರಸುದಾರೆ ಜೆ.ದೀಪಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜೆ.ದೀಪಾ ಅರ್ಜಿಗೆ ಎಸ್‌ಪಿಪಿ ಕಿರಣ್ ಜವಳಿ ಆಕ್ಷೇಪಣೆ ಸಲ್ಲಿಸಿದ್ದರು. ತಮಿಳುನಾಡು ಸರ್ಕಾರದ ಪರ ಹಿರಿಯ ವಕೀಲ‌ ಸಂದೇಶ್ ಚೌಟ ವಾದಿಸಿದ್ದರು. ವಿಚಾರಣೆ ನಡೆಸಿ ಜೆ.ದೀಪಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಇದನ್ನೂ ಓದಿ: 6 ಟ್ರಂಕ್​ಗಳ ಮೂಲಕ ಬೆಂಗಳೂರಿನಿಂದ ತಮಿಳುನಾಡಿಗೆ ಮರಳಲಿವೆ ದಿ.ಜಯಲಲಿತಾರ ಆಭರಣ, ವಸ್ತುಗಳು

ಇನ್ನು ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿತ್ತು. ತಮಿಳುನಾಡು ಗೃಹ ಪ್ರಧಾನ ಕಾರ್ಯದರ್ಶಿ ಮತ್ತು ಐಜಿಪಿ ವಿಜಿಲೆನ್ಸ್ ಹಾಜರಿರಬೇಕು. ಒಡವೆ ತೆಗೆದುಕೊಂಡು ಹೋಗಲು 6 ಟ್ರಂಕ್​ಗಳನ್ನು ತರುವಂತೆ ಕೋರ್ಟ್ ಸೂಚನೆ ನೀಡಿತ್ತು. ವಿಡಿಯೋಗ್ರಾಫರ್, ಫೋಟೋಗ್ರಾಫರ್, ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್​ನಲ್ಲಿ ಭದ್ರತೆ ಒದಗಿಸುವಂತೆ ವಿಶೇಷ ನ್ಯಾಯಾಧೀಶ ಮೋಹನ್​ರಿಂದ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: Jayalalithaa: 1997ರಲ್ಲಿ ವಶಪಡಿಸಿಕೊಂಡ ಜಯಲಲಿತಾಗೆ ಸೇರಿದ 11,344 ಸೀರೆ, 91 ಕೈಗಡಿಯಾರ, 750 ಅಲಂಕೃತ ಚಪ್ಪಲಿಗಳನ್ನು ಹರಾಜು ಹಾಕುವಂತೆ ಮನವಿ

ಜಯಲಲಿತಾ ವಿರುದ್ಧ 1991ರಿಂದ 96 ನಡುವೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಚೆನ್ನೈನಲ್ಲಿ ಐಷಾರಾಮಿ ಬಂಗಲೆಗಳನ್ನು ಹೊಂದಿದ್ದರು, ಹೈದರಾಬಾದ್‌ ಬಳಿ ಫಾರ್ಮ್‌ ಹೌಸ್‌, ತಮಿಳುನಾಡಿನ ನೀಲಗಿರಿ ಪ್ರದೇಶದಲ್ಲಿ ಭಾರಿ ಚಹಾ ತೋಟ, ಬೆಲೆಬಾಳುವ ಆಭರಣ, ಕಾರ್ಖಾನೆಗಳು, ಬ್ಯಾಂಕ್‌ ಖಾತೆಗಳಲ್ಲಿ ಸಂಪತ್ತು ಕ್ರೋಢೀಕರಣ, ಐಷಾರಾಮಿ ಕಾರುಗಳನ್ನು ಹೊಂದಿದ್ದರು ಎನ್ನಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:09 pm, Mon, 13 January 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ