AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಅಭ್ಯರ್ಥಿಗೆ ಬೆಂಬಲ; ಜೆಡಿಯು ಸ್ಪಷ್ಟನೆ

ಜೂನ್ 26ರಂದು ನಡೆಯಲಿರುವ ಚುನಾವಣೆಗೂ ಮುನ್ನ ಎನ್‌ಡಿಎ ಸರ್ಕಾರದಲ್ಲಿ ಸ್ಪೀಕರ್ ಹುದ್ದೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ)ದಿಂದ ನಾಮನಿರ್ದೇಶನಗೊಂಡ ವ್ಯಕ್ತಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಜೆಡಿಯು ವಕ್ತಾರ ಕೆಸಿ ತ್ಯಾಗಿ ಹೇಳಿದ್ದಾರೆ.

ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಅಭ್ಯರ್ಥಿಗೆ ಬೆಂಬಲ; ಜೆಡಿಯು ಸ್ಪಷ್ಟನೆ
ಕೆ.ಸಿ. ತ್ಯಾಗಿ
ಸುಷ್ಮಾ ಚಕ್ರೆ
|

Updated on: Jun 14, 2024 | 4:12 PM

Share

ನವದೆಹಲಿ: ತಮ್ಮ ಪಕ್ಷ ಮತ್ತು ತೆಲುಗು ದೇಶಂ ಪಕ್ಷ (TDP) ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (NDA) ಭಾಗವಾಗಿದ್ದು, ಲೋಕಸಭಾ ಸ್ಪೀಕರ್ (Lok Sabha Speaker) ಹುದ್ದೆಗೆ ಬಿಜೆಪಿ ಸೂಚಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಜೆಡಿಯು ನಾಯಕ ಕೆ.ಸಿ. ತ್ಯಾಗಿ ಹೇಳಿದ್ದಾರೆ. ಹೊಸ ಲೋಕಸಭಾ ಸ್ಪೀಕರ್ ಹುದ್ದೆ ಟಿಡಿಪಿ ಅಥವಾ ಜೆಡಿಯು ಪಕ್ಷಕ್ಕೆ ಸಿಗಬಹುದು ಎಂಬ ಕೆಲವು ವಿರೋಧ ಪಕ್ಷದ ನಾಯಕರ ಟೀಕೆಗಳ ಬಗ್ಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರದಲ್ಲಿ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುತ್ತಿದೆ. ನಾವು ಬಿಜೆಪಿ ನಾಮನಿರ್ದೇಶನ ಮಾಡುವ ಅಭ್ಯರ್ಥಿಗೆ ಬೆಂಬಲ ನೀಡುತ್ತೇವೆ ಎಂದಿದ್ದಾರೆ.

ಕೆ.ಸಿ. ತ್ಯಾಗಿ ಅವರ ಹೇಳಿಕೆಗಳು ಬಿಜೆಪಿಯೇ ಸ್ಪೀಕರ್ ಸ್ಥಾನಕ್ಕೆ ತನ್ನ ನಾಮನಿರ್ದೇಶನವನ್ನು ಮಾಡುವ ಸಾಧ್ಯತೆಯಿದೆ ಮತ್ತು ಅಭ್ಯರ್ಥಿಯು ಪಕ್ಷದ ಮಿತ್ರಪಕ್ಷಗಳ ನಡುವೆ ಇಲ್ಲದಿರಬಹುದು ಎಂಬುದರ ಸೂಚನೆಯಾಗಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಜೂನ್ 26ರಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಿಗದಿಯಾಗಿದೆ.

ಇದನ್ನೂ ಓದಿ: ಯಡಿಯೂರಪ್ಪನವರನ್ನು ಕೆಣಕಲು ಹೋದ್ರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮ: ಬಿಜೆಪಿ ಎಚ್ಚರಿಕೆ!

ಲೋಕಸಭೆಯು ತನ್ನ ಹೊಸ ಸ್ಪೀಕರ್ ಅನ್ನು ಜೂನ್ 26ರಂದು ಆಯ್ಕೆ ಮಾಡಲಿದ್ದು, ಅಭ್ಯರ್ಥಿಗಳನ್ನು ಬೆಂಬಲಿಸುವ ಪ್ರಸ್ತಾವನೆಗಳ ಸೂಚನೆಗಳನ್ನು ಸದಸ್ಯರು ಒಂದು ದಿನ ಮುಂಚಿತವಾಗಿ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು.

“ಸ್ಪೀಕರ್ ಯಾವಾಗಲೂ ಆಡಳಿತ ಪಕ್ಷದವರಾಗಿರುತ್ತಾರೆ. ಏಕೆಂದರೆ ಮೈತ್ರಿಕೂಟಗಳಲ್ಲಿ ಬಿಜೆಪಿ ಸದಸ್ಯರ ಸಂಖ್ಯೆಯೂ ಅತ್ಯಧಿಕವಾಗಿದೆ” ಎಂದು ಜೆಡಿಯು ನಾಯಕ ಕೆ.ಸಿ. ತ್ಯಾಗಿ ಹೇಳಿದ್ದಾರೆ. 18ನೇ ಲೋಕಸಭೆಯು ಜೂನ್ 24ರಂದು ಮೊದಲ ಬಾರಿಗೆ ಸಭೆ ಸೇರಲಿದ್ದು, ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.

ಇದನ್ನೂ ಓದಿ: ದುರಹಂಕಾರ ತೋರಿದವರನ್ನು 241ಕ್ಕೆ ನಿಲ್ಲಿಸಿದ ರಾಮ; ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ನಾಯಕನಿಂದಲೇ ವಾಗ್ದಾಳಿ

ನೂತನವಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲ ಎರಡು ದಿನ ಮೀಸಲಾಗಿದ್ದರೆ, ಜೂನ್ 26ಕ್ಕೆ ಸ್ಪೀಕರ್ ಆಯ್ಕೆಗೆ ದಿನಾಂಕ ನಿಗದಿಯಾಗಿದೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಉಡುಪಿ: ಸಿಟಿ ಬಸ್ ನಿಲ್ದಾಣದ ಮುಂದೆಯೇ ಹೊತ್ತಿ ಉರಿದ ಕಟ್ಟಡ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ಪಂಚಮಸಾಲಿ ಪೀಠ ಸಂಘರ್ಷ: 3 ಟ್ರಸ್ಟಿಗಳ ಉಚ್ಚಾಟನೆ; ಸೋಮನಗೌಡ ಸ್ಫೋಟಕ ಹೇಳಿಕೆ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ನನ್ನ ಅಕ್ಕ ಲಕ್ಷ್ಮಿ ಹೆಬ್ಬಾಳ್ಕರ್ ಕರ್ನಾಟಕದ ಐರನ್ ಲೇಡಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಉಲ್ಟಾ ಹೊಡೆದ ಚೇತನ್ ಅಹಿಂಸ ವಿರುದ್ಧ ಸಾರಾ ಗೋವಿಂದು ವಾಗ್ದಾಳಿ
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಅಭಿಮಾನಿ ಸಂಘದ ಹೆಸರಲ್ಲಿ ಜೀವ ಬೆದರಿಕೆ ಹಾಕಲು ಯಾರಿಗೂ ಹಕ್ಕಿಲ್ಲ: ಚೇತನ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಬೇಸಿಗೆ ಧಗೆ ಹೆಚ್ಚಾಗುತ್ತಿದ್ದಂತೆ ಚಿಲ್ ಬಿಯರ್‌ಗೆ ಭಾರಿ ಡಿಮ್ಯಾಂಡ್
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!