AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KC Tyagi:ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಯು ನಾಯಕ ಕೆಸಿ ತ್ಯಾಗಿ

ಜೆಡಿಯು ನಾಯಕ ಕೆಸಿ ತ್ಯಾಗಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಹೊಸ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ರಂಜನ್ ಪ್ರಸಾದ್ ಅವರು ತ್ಯಾಗಿ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.

KC Tyagi:ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಯು ನಾಯಕ ಕೆಸಿ ತ್ಯಾಗಿ
ಕೆಸಿ ತ್ಯಾಗಿImage Credit source: The Hindu
ನಯನಾ ರಾಜೀವ್
|

Updated on: Sep 01, 2024 | 11:50 AM

Share

ಸಂಯುಕ್ತ ಜನತಾದಳದ ಹಿರಿಯ ನಾಯಕ ಕೆಸಿ ತ್ಯಾಗಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕತ್ವಕ್ಕೆ ಬರೆದ ಪತ್ರದಲ್ಲಿ ತ್ಯಾಗಿ ತಮ್ಮ ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಆದರೆ, ಇತ್ತೀಚೆಗೆ ವಿವಿಧ ವಿಷಯಗಳ ಕುರಿತು ಅವರು ನೀಡಿರುವ ಹೇಳಿಕೆಗಳಿಂದ ನಾಯಕತ್ವದ ಅಸಮಾಧಾನಗೊಂಡಿತ್ತು ಈ ಹಿನ್ನೆಲೆ ರಾಜೀನಾಮೆ ನೀಡಲಾಗಿದೆ ಎಂದು ಮೂಲಗಳು ಸೂಚಿಸಿವೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಹೊಸ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ರಂಜನ್ ಪ್ರಸಾದ್ ಅವರು ತ್ಯಾಗಿ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆ ಮತ್ತು ಲ್ಯಾಟರಲ್ ಎಂಟ್ರಿ ವಿವಾದ ಸೇರಿದಂತೆ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ನಿಲುವಿಗಿಂತ ಭಿನ್ನವಾಗಿತ್ತು.

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ನಿಲ್ಲಿಸುವಂತೆ ಅವರು ಕೇಂದ್ರವನ್ನು ಒತ್ತಾಯಿಸಿದ್ದರು ಮತ್ತು ಗಾಜಾದಲ್ಲಿ ಶಾಂತಿ ಮತ್ತು ಕದನ ವಿರಾಮವನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿಕೆ ನೀಡಿದ್ದರು. ತ್ಯಾಗಿ ಅವರು ನಾಯಕರನ್ನು ಸಂಪರ್ಕಿಸದೆ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಅವರ ಹೇಳಿಕೆಗಳಿಂದಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ (ಎನ್‌ಡಿಎ) ಭಿನ್ನಾಭಿಪ್ರಾಯಗಳ ಬಗ್ಗೆ ಮಾತುಕತೆ ನಡೆದಿತ್ತು.

ಮತ್ತಷ್ಟು ಓದಿ: ಲೋಕಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಅಭ್ಯರ್ಥಿಗೆ ಬೆಂಬಲ; ಜೆಡಿಯು ಸ್ಪಷ್ಟನೆ

73 ವರ್ಷ ವಯಸ್ಸಿನ ನಾಯಕ ತ್ಯಾಗಿ, ನಿತೀಶ್ ಕುಮಾರ್ ಅವರ ರಾಜಕೀಯ ಪ್ರಯಾಣದುದ್ದಕ್ಕೂ ಜೊತೆಯಲ್ಲಿದ್ದರು ಮತ್ತು ಪಕ್ಷದ ಪ್ರಮುಖ ಮುಖವೆಂದು ಪರಿಗಣಿಸಲ್ಪಟ್ಟಿದ್ದಾರೆ. ಅವರು 2013 ರಿಂದ 2016 ರವರೆಗೆ ಬಿಹಾರದಿಂದ ರಾಜ್ಯಸಭಾ ಸಂಸದರಾಗಿದ್ದರು ಮತ್ತು 1989 ರಿಂದ 1991 ರವರೆಗೆ ಹಾಪುರ್ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿದ್ದರು.

ಕೋಟಾವನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ತಿದ್ದುಪಡಿಗಳನ್ನು ರದ್ದುಗೊಳಿಸಿದ ಪಾಟ್ನಾ ಹೈಕೋರ್ಟ್‌ನ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಪ್ರತಿಕ್ರಿಯಿಸಿದ ತ್ಯಾಗಿ, ಜೆಡಿಯು ದೇಶದಲ್ಲಿ ಜಾತಿ ಆಧಾರಿತ ಜನಗಣತಿ ಪರವಾಗಿದೆ ಎಂದು ಹೇಳಿದ್ದರು.

ತ್ಯಾಗಿ ಈ ವಿಷಯಗಳ ಬಗ್ಗೆ ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಪಕ್ಷದ ಅಭಿಪ್ರಾಯದಂತೆ ಆಗಾಗ ಮಂಡಿಸುತ್ತಿದ್ದರು ಎಂದು ಜೆಡಿಯು ಮೂಲಗಳು ಆರೋಪಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್