AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು 50 ಸೀಟ್​ಗಳಿಗೆ ಕಟ್ಟಿಹಾಕಬಹುದು: ನಿತೀಶ್ ಕುಮಾರ್

ಬಿಹಾರದ ಸಾಮಾಜಿಕ ಮತ್ತು ಕೋಮು ಸೌಹಾರ್ದ ಕದಡಲು ಬಿಜೆಪಿ ಪ್ರಯತ್ನಿಸಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

Nitish Kumar: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು 50 ಸೀಟ್​ಗಳಿಗೆ ಕಟ್ಟಿಹಾಕಬಹುದು: ನಿತೀಶ್ ಕುಮಾರ್
ಜೆಡಿಯು ನಾಯಕ ನಿತೀಶ್ ಕುಮಾರ್Image Credit source: PTI
TV9 Web
| Edited By: |

Updated on:Sep 04, 2022 | 9:17 AM

Share

ಪಾಟ್ನಾ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 50 ಸೀಟ್​ಗಳಿಗೆ ಕಟ್ಟಿಹಾಕಲಾಗುವುದು. ಇದಕ್ಕಾಗಿಯೇ ವಿರೋಧ ಪಕ್ಷಗಳ ಸಂಘಟನೆ ಮತ್ತು ಏಕೀಕೃತ ಮೈತ್ರಿಕೂಟ ರಚನೆ ಬಗ್ಗೆ ಕೆಲಸ ಮಾಡುತ್ತಿದ್ದೇನೆ ಎಂದು ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಹೇಳಿದರು. ಜೆಡಿಯು (JDU) ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ಬಿಜೆಪಿಯ ಗೆಲುವಿಗೆ ಕಡಿವಾಣ ಹಾಕುವ ಆಶಯ ವ್ಯಕ್ತಪಡಿಸಿದರು.

2020ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಹಲವು ಸಂಚುಗಳನ್ನು ನಡೆಸುವ ಮೂಲಕ ಜೆಡಿಯು ಗೆಲುವಿಗೆ ಕಡಿವಾಣ ಹಾಕಿತ್ತು. ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆಯೂ ನನಗಿರಲಿಲ್ಲ ಎಂದು ನಿತೀಶ್​ ಸಭೆಯಲ್ಲಿ ಹೇಳಿದರು. ಜೆಡಿಯು ಮತ್ತು ಬಿಜೆಪಿ ನಡುವೆ ಹಲವು ಭಿನ್ನಮತಗಳಿಗೆ ಅದೇ ವಿಧಾನಸಭಾ ಚುನಾವಣೆಯು ಬೀಜ ಬಿತ್ತಿತ್ತು. ಜೆಡಿಯು ಮಾಜಿ ಅಧ್ಯಕ್ಷ ಆರ್​.ಸಿ.ಪಿ.ಸಿಂಗ್​ ಬಿಜೆಪಿ ಪರವಾಗಿ ಚಿತಾವಣೆ ಮಾಡುತ್ತಿರುಬಹುದು ಎಂಬ ಶಂಕೆಗಳಿಗೂ ಈ ಚುನಾವಣೆಯ ನಂತರದ ಬೆಳವಣಿಗೆಗಳು ಕಾರಣವಾಗಿದ್ದವು.

ಆರ್​ಸಿಪಿ ಸಿಂಗ್​ ನೇತೃತ್ವದಲ್ಲಿ ಜೆಡಿಯು ವಿಭಜನೆಗೆ ಸಂಚು ನಡೆಯುತ್ತಿದೆ ಎಂಬ ಅನುಮಾನಗಳು ಬಲಗೊಂಡ ನಂತರ ಬಿಜೆಪಿಯ ನಂಟು ಕಡಿದುಕೊಳ್ಳಲು ನಿತೀಶ್ ಕುಮಅರ್ ತೀರ್ಮಾನಿಸಿದರು. ಅನಂತರದ ಬೆಳವಣಿಗೆಯಲ್ಲಿ ಆರ್​ಜೆಡಿ-ಕಾಂಗ್ರೆಸ್​ ಬೆಂಬಲದೊಂದಿಗೆ ನಿತೀಶ್ ಕುಮಾರ್ ಹೊಸ ಸರ್ಕಾರ ರಚಿಸಿದರು. ಬಿಹಾರ ಸರ್ಕಾರಕ್ಕೆ ಎಡಪಕ್ಷಗಳು ಹೊರಗಿನಿಂದ ಬೆಂಬಲ ಸೂಚಿಸಿವೆ.

‘ಎಲ್ಲ (ವಿರೋಧ) ಪಕ್ಷಗಳು ಒಗ್ಗೂಡಿ ಹೋರಾಡಿದರೆ ಬಿಜೆಪಿಯನ್ನು ಕೇವಲ 50 ಸ್ಥಾನಗಳಿಗೆ ಕಟ್ಟಿಹಾಕಬಹುದು. ಈ ಅಭಿಯಾನಕ್ಕೆ ನನ್ನನ್ನು ನಾನು ಸಮರ್ಪಿಸಿಕೊಳ್ಳುತ್ತಿದ್ದೇನೆ’ ಎಂದು ನಿತೀಶ್ ಕುಮಾರ್ ಹೇಳಿದರು. ರಾಜಕೀಯ ಅಭಿಯಾನದ ಭಾಗವಾಗಿ ಮೂರು ದಿನಗಳ ಪ್ರವಾಸ ಹೊರಟಿರುವ ನಿತೀಶ್, ನಾಳೆ (ಸೆಪ್ಟೆಂಬರ್ 5) ದೆಹಲಿಗೆ ತೆರಳಲಿದ್ದಾರೆ. ಸುಮಾರು 30 ವರ್ಷ ಬಿಜೆಪಿಯ ಮಿತ್ರರಾಗಿದ್ದ ನಿತೀಶ್ ಕುಮಾರ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆಯ ಕಿವಿಮಾತನ್ನೂ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ವಿಭಜಿಸಲು ಬಿಜೆಪಿ ಪ್ರಯತ್ನಿಸಬಹುದು ಎಂಬುದು ಅವರ ಆತಂಕವಾಗಿದೆ.

‘ಬಿಹಾರದ ಸಾಮಾಜಿಕ ಮತ್ತು ಕೋಮು ಸೌಹಾರ್ದ ಕದಡಲು ಬಿಜೆಪಿ ಪ್ರಯತ್ನಿಸಬಹುದು. ಅವರ ಪ್ರಯತ್ನಗಳನ್ನು ನಾವು ವಿಫಲಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ನಾವು ಕಟ್ಟೆಚ್ಚರ ವಹಿಸಬೇಕು’ ಎಂದು ನಿತೀಶ್ ಜೆಡಿಯು ಕಾರ್ಯಕರ್ತರಿಗೆ ಕರೆ ನೀಡಿದರು.

Published On - 9:17 am, Sun, 4 September 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ