AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಯು ರಾಜ್ಯ ಕಾರ್ಯದರ್ಶಿಯ ಭೀಕರ ಹತ್ಯೆ; ಮನೆಯ ಸಮೀಪವೇ ಗುಂಡು ಹೊಡೆದು ಕೊಂದ ದುಷ್ಕರ್ಮಿಗಳು

ನಿನ್ನೆ ರಾತ್ರಿ ಸುಮಾರು 10.15ರ ಹೊತ್ತಿಗೆ ನಡೆದಿದೆ. ದೀಪಕ್​ ಮೆಹ್ತಾ ಅವರು ಮನೆಯ ಬಳಿಯೇ ವಾಕಿಂಗ್​ ಮಾಡುತ್ತಿದ್ದರು. ಮನೆಗೆ ಮರಳು ತುಂಬಿದ ವಾಹನವೊಂದು ಬರಬೇಕಿದ್ದ ಕಾರಣ ಮನೆಯ ಗೇಟ್​​ನ್ನು ಕೂಡ ತೆರೆದೇ ಇಡಲಾಗಿತ್ತು.

ಜೆಡಿಯು ರಾಜ್ಯ ಕಾರ್ಯದರ್ಶಿಯ ಭೀಕರ ಹತ್ಯೆ; ಮನೆಯ ಸಮೀಪವೇ ಗುಂಡು ಹೊಡೆದು ಕೊಂದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Mar 29, 2022 | 2:36 PM

Share

ಜನತಾದಳ (ಸಂಯುಕ್ತ) ಪಕ್ಷದ ರಾಜ್ಯ ಕಾರ್ಯದರ್ಶಿ ಮತ್ತು ದನಾ​​ಪುರ ನಗರ ಪರಿಷತ್​ ಉಪಾಧ್ಯಕ್ಷ ದೀಪಕ್​ ಮೆಹ್ತಾ (47) ಅವರನ್ನು ಗುಂಡು ಹೊಡೆದು ಹತ್ಯೆಗೈಯ್ಯಲಾಗಿದೆ. ದನಾಪುರದ ಅವರ ಮನೆಯ ಸಮೀಪವೇ ಈ ಕೃತ್ಯ ನಡೆದಿದ್ದು, ಕೊಲೆ ಮಾಡಿದವರು ಯಾರೆಂಬುದು ಗೊತ್ತಾಗಿಲ್ಲ. ಈ ದನಾಪುರ ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 10 ಕಿಮೀ ದೂರದಲ್ಲಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ಇದೊಂದು ರಾಜಕೀಯ ಮತ್ತು ವ್ಯಾಪಾರ ಸಂಬಂಧಿ ವೈಷಮ್ಯದಿಂದ ನಡೆದ ಕೊಲೆಯಾಗಿರಬಹುದು ಎಂದು ಶಂಕಿಸಿದ್ದಾರೆ.

ನಿನ್ನೆ ರಾತ್ರಿ ಸುಮಾರು 10.15ರ ಹೊತ್ತಿಗೆ ನಡೆದಿದೆ. ದೀಪಕ್​ ಮೆಹ್ತಾ ಅವರು ಮನೆಯ ಬಳಿಯೇ ವಾಕಿಂಗ್​ ಮಾಡುತ್ತಿದ್ದರು. ಮನೆಗೆ ಮರಳು ತುಂಬಿದ ವಾಹನವೊಂದು ಬರಬೇಕಿದ್ದ ಕಾರಣ ಮನೆಯ ಗೇಟ್​​ನ್ನು ಕೂಡ ತೆರೆದೇ ಇಡಲಾಗಿತ್ತು. ಇದೇ ವೇಳೆ ಎರಡು ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ದೀಪಕ್​ ಮೆಹ್ತಾರ ಹತ್ತಿರವೇ ನಿಂತು ಸುಮಾರು 10 ಸುತ್ತು ಗುಂಡು ಹೊಡೆದಿದ್ದಾರೆ. ಅಷ್ಟು ಮಾಡಿ ಆರೋಪಿಗಳು ಪರಾರಿಯಾಗಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೆಹ್ತಾರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಕರೆದುಕೊಂಡು ಹೋಗುವಷ್ಟರಲ್ಲೇ ಅವರ ಉಸಿರು ನಿಂತಿತ್ತು. ಇದರಿಂದ ಸಿಟ್ಟಿಗೆದ್ದ ಅವರ ಬೆಂಬಲಿಗರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಪಾಟ್ನಾ-ದನಾಪುರ್​ ರಸ್ತೆಯನ್ನು ಸುಮಾರು 2 ತಾಸುಗಳ ಕಾಲ ಬಂದ್ ಮಾಡಿದ್ದರು.

ದೀಪಕ್​ ಮೆಹ್ತಾ ಮೂಲತಃ ರಾಷ್ಟ್ರೀಯ ಲೋಕ ಸಮತಾ ಪಾರ್ಟಿಯವರಾಗಿದ್ದರು. ಆ ಪಕ್ಷ ನಂತರ ಜೆಡಿಯುದಲ್ಲಿ ವಿಲೀನಗೊಂಡಿದೆ.  ಕಳೆದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ದೀಪಕ್​ ರಾಷ್ಟ್ರೀಯ ಲೋಕ ಸಮತಾ ಪಕ್ಷದಿಂದ ದನಾಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಆರ್​ಜೆಡಿಯ ಅಭ್ಯರ್ಥಿ ವಿರುದ್ಧ ಸೋತಿದ್ದರು. ನಿತೀಶ್​ ಕುಮಾರ್ ಅವರು ಅಧಿಕಾರಕ್ಕೆ ಬಂದ ಮೇಲೆ ಬಿಹಾರದ ಕಾನೂನು ಸುವ್ಯವಸ್ಥೆಯಲ್ಲಿ ಹಲವು ಸುಧಾರಣೆಗಳನ್ನು ಮಾಡಿದ್ದಾರೆ. ಹಾಗಿದ್ದಾಗ್ಯೂ ಅವರದ್ದೇ ಪಕ್ಷದ ಮುಖಂಡ ಹೀಗೆ ಮನೆಯ ಬಳಿಯೇ ಭೀಕರವಾಗಿ ಹತ್ಯೆಗೀಡಾಗಿದ್ದು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಹಿಂದಿ ಚಿತ್ರರಂಗದಲ್ಲಿ ‘ಆರ್​ಆರ್​ಆರ್​’ ಅಬ್ಬರ; 100 ಕೋಟಿ ಕ್ಲಬ್ ಸೇರಿದ ರಾಜಮೌಳಿ ಸಿನಿಮಾ

Published On - 2:22 pm, Tue, 29 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?