AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ ಉದ್ಘಾಟನೆಗೆ ಹಾಜರಾಗಿದ್ದ ರಾಜ್ಯಸಭಾ ಉಪ ಸಭಾಪತಿ ನಡೆಗೆ ಜೆಡಿಯು ಅಸಮಾಧಾನ

ಬಿಜೆಪಿಯನ್ನು ವಿರೋಧಿಸುವ 20 ಕ್ಕೂ ಹೆಚ್ಚು ಪಕ್ಷಗಳು ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಹೊಸ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅಲ್ಲ, ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು ಎಂದು ಒತ್ತಾಯಿಸಿದರು.

ಸಂಸತ್​​ ಉದ್ಘಾಟನೆಗೆ ಹಾಜರಾಗಿದ್ದ ರಾಜ್ಯಸಭಾ ಉಪ ಸಭಾಪತಿ ನಡೆಗೆ ಜೆಡಿಯು ಅಸಮಾಧಾನ
ಹರಿವಂಶ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 29, 2023 | 6:34 PM

Share

ಪಾಟ್ನಾ: ಪಕ್ಷ ಕಾರ್ಯಕ್ರಮವನ್ನು ಬಹಿಷ್ಕರಿಸಿದರೂ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕಾಗಿ ರಾಜ್ಯಸಭಾ (Rajya Sabha) ಉಪ ಸಭಾಪತಿ ಹರಿವಂಶ್ (Harivansh)ವಿರುದ್ಧ ಜೆಡಿಯು(JDU) ಮುಖ್ಯ ವಕ್ತಾರ ನೀರಜ್ ಕುಮಾರ್ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಅಧ್ಯಕ್ಷರು, ಗೌರವಾನ್ವಿತ ಉಪಾಧ್ಯಕ್ಷರೂ ಸಹ ಗೈರುಹಾಜರಾದ ಸಮಾರಂಭದಲ್ಲಿ ಪತ್ರಕರ್ತ-ರಾಜಕಾರಣಿ ಹರಿವಂಶ್ ಭಾಗವಹಿಸುವಿಕೆಯನ್ನು ಕುಮಾರ್ ಖಂಡಿಸಿದ್ದಾರೆ. ಪತ್ರಿಕೋದ್ಯಮಕ್ಕೆ ನಿಮ್ಮ ಕೊಡುಗೆಯನ್ನು ಗುರುತಿಸಿ ಪಕ್ಷವು ನಿಮ್ಮನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ದೇಶದ ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯ ನಡೆದಾಗ ನಿಮ್ಮ ಉನ್ನತ ಹುದ್ದೆಗಾಗಿ ನೀವು ಬೌದ್ಧಿಕ ಸಮಗ್ರತೆಯನ್ನು ಮಾರಿಕೊಂಡಿದ್ದೀರಿ ಎಂದು ಜೆಡಿಯು ವಕ್ತಾರರು ಹೇಳಿದ್ದಾರೆ.

ಪಕ್ಷದ ವರಿಷ್ಠ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಮಾರಂಭದ ಬಹಿಷ್ಕಾರವನ್ನು ಸಮರ್ಥಿಸಿಕೊಂಡಿದ್ದು, ಸ್ವಾತಂತ್ರ್ಯ ಹೋರಾಟಕ್ಕೆ ಯಾವುದೇ ಕೊಡುಗೆ ನೀಡದವರ ಇತಿಹಾಸವನ್ನು ಬದಲಾಯಿಸುವ ಪ್ರಯತ್ನ ಇದು ಎಂದು ಬಣ್ಣಿಸಿದ್ದಾರೆ.

ಬಿಜೆಪಿಯನ್ನು ವಿರೋಧಿಸುವ 20 ಕ್ಕೂ ಹೆಚ್ಚು ಪಕ್ಷಗಳು ಭಾನುವಾರದ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಹೊಸ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಅಲ್ಲ, ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು ಎಂದು ಒತ್ತಾಯಿಸಿದರು.

ಪಕ್ಷ ಬಹಿಷ್ಕರಿಸಲು ನಿರ್ಧರಿಸಿದ್ದರೂ ನಿಮ್ಮ ಭಾಗವಹಿಸುವಿಕೆಯ ದೃಷ್ಟಿಯಿಂದ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಉನ್ನತ ನಾಯಕತ್ವ ನಿರ್ಧರಿಸುತ್ತದೆ. ಆದರೆ ಭವಿಷ್ಯದ ಪೀಳಿಗೆಯು ಒಬ್ಬ ನಿಮ್ಮ ನಿಲುವಿಗೆ ಯೋಗ್ಯವಲ್ಲದ ನಿಮ್ಮ ನಡೆ ಬಗ್ಗೆ ಕ್ರಮವನ್ನು ನಿರ್ಧರಿಸುತ್ತದೆ ಎಂದಿದ್ದಾರೆ ಕುಮಾರ್.

ಮುಂದಿನ ವರ್ಷ ಕೊನೆಗೊಳ್ಳಲಿರುವ ರಾಜ್ಯಸಭೆಯಲ್ಲಿ ಅವರ ಸತತ ಎರಡನೇ ಅಧಿಕಾರಾವಧಿಯನ್ನು ಪೂರೈಸುತ್ತಿರುವ ಹರಿವಂಶ್ ಅವರು 2018 ರಿಂದ ಉಪ ಸಭಾಪತಿಯಾಗಿದ್ದಾರೆ, ಅವರು ಈ ಸ್ಥಾನವನ್ನು ಆಕ್ರಮಿಸಿಕೊಂಡ ಮೂರನೇ ಕಾಂಗ್ರೆಸ್ಸೇತರ ಸಂಸದರಾಗಿದ್ದಾರೆ. 66 ವರ್ಷ ಹರೆಯದ ಹರಿವಂಶ್ ಜಾರ್ಖಂಡ್ ಮತ್ತು ಬಿಹಾರದ ಪ್ರಮುಖ ಹಿಂದಿ ಪತ್ರಿಕೆಗಳಲ್ಲಿ ಒಂದಾದ ಪ್ರಭಾತ್ ಖಬರ್‌ನ ಸಂಪಾದಕರಾಗಿ ಸೇವೆ ಸಲ್ಲಿಸುವ ಮೊದಲು ಆಗಿನ ಪ್ರಧಾನಿ ಚಂದ್ರಶೇಖರ್ ಅವರ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: Delhi murder: ದೆಹಲಿಯಲ್ಲಿ 16ರ ಹರೆಯದ ಬಾಲಕಿಯ ಬರ್ಬರ ಕೊಲೆ ಮಾಡಿದ ಆರೋಪಿ ಸಾಹಿಲ್ ಬಂಧನ

ಜೆಡಿಯು ಕಳೆದ ವರ್ಷ ಬಿಜೆಪಿ ನೇತೃತ್ವದ ಎನ್ ಡಿಎಯಿಂದ ಹೊರಬಂದು ನಂತರ ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಒಳಗೊಂಡಿರುವ ‘ಮಹಾಘಟಬಂಧನ್’ ಭಾಗವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ