AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್​, ಟೀ ಶರ್ಟ್​ ಧರಿಸಿ ಕಚೇರಿಗೆ ಬರಬೇಡಿ, ಸರ್ಕಾರಿ ನೌಕರರಿಗೆ ಸೂಚನೆ

ಬಿಹಾರದ ಸರನ್ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಜೀನ್ಸ್ ಧರಿಸಿ ಕಚೇರಿಗೆ ಬರುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಜೀನ್ಸ್​, ಟೀ ಶರ್ಟ್​ ಧರಿಸಿ ಕಚೇರಿಗೆ ಬರಬೇಡಿ, ಸರ್ಕಾರಿ ನೌಕರರಿಗೆ ಸೂಚನೆ
ಜೀನ್ಸ್
ನಯನಾ ರಾಜೀವ್
|

Updated on:Apr 19, 2023 | 11:38 AM

Share

ಕಳೆದ ವರ್ಷ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಜೀನ್ಸ್(Jeans) ಮತ್ತು ಟೀ ಶರ್ಟ್ ಧರಿಸಿ ಕರ್ತವ್ಯಕ್ಕೆ ಬರಬಾರದು ಎಂದು ಆದೇಶ ಹೊರಡಿಸಲಾಗಿತ್ತು. ಈಗ ಬಿಹಾರದ ಸರನ್ ಜಿಲ್ಲೆಯಲ್ಲಿಯೂ ಇದೇ ನಿಯಮ ಜಾರಿಗೆ ಬರಲಿದೆ. ಎಲ್ಲಾ ಸರ್ಕಾರಿ ನೌಕರರು ಜೀನ್ಸ್ ಧರಿಸಿ ಕಚೇರಿಗೆ ಬರುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಅಲ್ಲದೆ ಟೀ ಶರ್ಟ್ ಧರಿಸದಂತೆ ಸೂಚಿಸಿದ್ದಾರೆ. ಈ ಸಂಬಂಧ ಮ್ಯಾಜಿಸ್ಟ್ರೇಟ್ ಅಮರ್ ಸಮೀರ್ ಸುತ್ತೋಲೆ ಹೊರಡಿಸಿದ್ದಾರೆ. ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲಾ ನೌಕರರು ಫಾರ್ಮಲ್ಸ್ ಧರಿಸಬೇಕು ಎಂದು ಆದೇಶಿಸಿದೆ. ಪ್ರತಿದಿನ ಅನೇಕ ಜನರು ಬರುತ್ತಾರೆ ಮತ್ತು ಅಧಿಕಾರಿಗಳು ಯಾರು ಎಂಬುದನ್ನು ಸುಲಭವಾಗಿ ನೆನಪಿಟ್ಟುಕೊಳ್ಳಲು ಈ ಡ್ರೆಸ್ ಕೋಡ್ ಉಪಯುಕ್ತವಾಗಿದೆ ಎಂದು ಮ್ಯಾಜಿಸ್ಟ್ರೇಟ್ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಧಿಕಾರಿಗಳನ್ನು ಕಂಡರೆ ಜನ ಗುರುತಿಸುವಂತಾಗಬೇಕು ಎಂದರು. ಉತ್ತಮ ಬಟ್ಟೆ ಧರಿಸಿ ಐಡಿ ಕಾರ್ಡ್​ ಕೂಡ ಧರಿಸುವಂತೆ ಸೂಚಿಸಲಾಗಿದೆ. ಅದಕ್ಕಾಗಿಯೇ ಎಲ್ಲ ನೌಕರರಿಗೂ ಗುರುತಿನ ಚೀಟಿ ನೀಡಲಾಗಿದೆ. ಎಲ್ಲಾ ನೌಕರರು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕಚೇರಿಗಳಲ್ಲಿ ಔಪಚಾರಿಕ ಬಟ್ಟೆಗಳನ್ನು ಧರಿಸಬೇಕು ಎಂದು ಮ್ಯಾಜಿಸ್ಟ್ರೇಟ್ ಸಲಹೆ ನೀಡಿದರು.

ಮತ್ತಷ್ಟು ಓದಿ: Airbag Jeans: ವಿಶ್ವದ ಮೊದಲ ಏರ್​​ ಬ್ಯಾಗ್​​ ಜೀನ್ಸ್, ಇದರ ಬೆಲೆ ಹಾಗೂ ವಿಶೇಷತೆ ಇಲ್ಲಿದೆ

ನಿರ್ದಿಷ್ಟ ಇಲಾಖೆಗಳಲ್ಲಿ ಹಠಾತ್ ತಪಾಸಣೆ ನಡೆಸಲಾಗುವುದು ಮತ್ತು ವೀಡಿಯೊ ಕಾನ್ಫರೆನ್ಸ್ ಮತ್ತು ವೀಡಿಯೊ ಕರೆ ಮೂಲಕ ಆದೇಶಗಳ ಸ್ಥಿತಿಯನ್ನು ಸಹ ತಿಳಿಯಲಾಗುವುದು ಎಂದು ತಿಳಿಸಲಾಗಿದೆ. ಹೊಸ ಮಾರ್ಗಸೂಚಿಗಳನ್ನು ವಿಶೇಷವಾಗಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೌಕರರಿಗೆ ಎಚ್ಚರಿಕೆ ನೀಡಿದ ಅವರು, ಏನಾದರೂ ತಪ್ಪು ಮಾಡಿದರೆ ದಂಡ ವಿಧಿಸಲಾಗುತ್ತದೆ. ಕಚೇರಿಗಳಲ್ಲಿನ ಕಾರ್ಯ ವೈಖರಿಯನ್ನು ಬದಲಾಯಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 19 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ