Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್​, ಟೀ ಶರ್ಟ್​ ಧರಿಸಿ ಕಚೇರಿಗೆ ಬರಬೇಡಿ, ಸರ್ಕಾರಿ ನೌಕರರಿಗೆ ಸೂಚನೆ

ಬಿಹಾರದ ಸರನ್ ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ ನೌಕರರು ಜೀನ್ಸ್ ಧರಿಸಿ ಕಚೇರಿಗೆ ಬರುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಜೀನ್ಸ್​, ಟೀ ಶರ್ಟ್​ ಧರಿಸಿ ಕಚೇರಿಗೆ ಬರಬೇಡಿ, ಸರ್ಕಾರಿ ನೌಕರರಿಗೆ ಸೂಚನೆ
ಜೀನ್ಸ್
Follow us
ನಯನಾ ರಾಜೀವ್
|

Updated on:Apr 19, 2023 | 11:38 AM

ಕಳೆದ ವರ್ಷ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಜೀನ್ಸ್(Jeans) ಮತ್ತು ಟೀ ಶರ್ಟ್ ಧರಿಸಿ ಕರ್ತವ್ಯಕ್ಕೆ ಬರಬಾರದು ಎಂದು ಆದೇಶ ಹೊರಡಿಸಲಾಗಿತ್ತು. ಈಗ ಬಿಹಾರದ ಸರನ್ ಜಿಲ್ಲೆಯಲ್ಲಿಯೂ ಇದೇ ನಿಯಮ ಜಾರಿಗೆ ಬರಲಿದೆ. ಎಲ್ಲಾ ಸರ್ಕಾರಿ ನೌಕರರು ಜೀನ್ಸ್ ಧರಿಸಿ ಕಚೇರಿಗೆ ಬರುವುದನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದಾರೆ.

ಅಲ್ಲದೆ ಟೀ ಶರ್ಟ್ ಧರಿಸದಂತೆ ಸೂಚಿಸಿದ್ದಾರೆ. ಈ ಸಂಬಂಧ ಮ್ಯಾಜಿಸ್ಟ್ರೇಟ್ ಅಮರ್ ಸಮೀರ್ ಸುತ್ತೋಲೆ ಹೊರಡಿಸಿದ್ದಾರೆ. ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲಾ ನೌಕರರು ಫಾರ್ಮಲ್ಸ್ ಧರಿಸಬೇಕು ಎಂದು ಆದೇಶಿಸಿದೆ. ಪ್ರತಿದಿನ ಅನೇಕ ಜನರು ಬರುತ್ತಾರೆ ಮತ್ತು ಅಧಿಕಾರಿಗಳು ಯಾರು ಎಂಬುದನ್ನು ಸುಲಭವಾಗಿ ನೆನಪಿಟ್ಟುಕೊಳ್ಳಲು ಈ ಡ್ರೆಸ್ ಕೋಡ್ ಉಪಯುಕ್ತವಾಗಿದೆ ಎಂದು ಮ್ಯಾಜಿಸ್ಟ್ರೇಟ್ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಅಧಿಕಾರಿಗಳನ್ನು ಕಂಡರೆ ಜನ ಗುರುತಿಸುವಂತಾಗಬೇಕು ಎಂದರು. ಉತ್ತಮ ಬಟ್ಟೆ ಧರಿಸಿ ಐಡಿ ಕಾರ್ಡ್​ ಕೂಡ ಧರಿಸುವಂತೆ ಸೂಚಿಸಲಾಗಿದೆ. ಅದಕ್ಕಾಗಿಯೇ ಎಲ್ಲ ನೌಕರರಿಗೂ ಗುರುತಿನ ಚೀಟಿ ನೀಡಲಾಗಿದೆ. ಎಲ್ಲಾ ನೌಕರರು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಕಚೇರಿಗಳಲ್ಲಿ ಔಪಚಾರಿಕ ಬಟ್ಟೆಗಳನ್ನು ಧರಿಸಬೇಕು ಎಂದು ಮ್ಯಾಜಿಸ್ಟ್ರೇಟ್ ಸಲಹೆ ನೀಡಿದರು.

ಮತ್ತಷ್ಟು ಓದಿ: Airbag Jeans: ವಿಶ್ವದ ಮೊದಲ ಏರ್​​ ಬ್ಯಾಗ್​​ ಜೀನ್ಸ್, ಇದರ ಬೆಲೆ ಹಾಗೂ ವಿಶೇಷತೆ ಇಲ್ಲಿದೆ

ನಿರ್ದಿಷ್ಟ ಇಲಾಖೆಗಳಲ್ಲಿ ಹಠಾತ್ ತಪಾಸಣೆ ನಡೆಸಲಾಗುವುದು ಮತ್ತು ವೀಡಿಯೊ ಕಾನ್ಫರೆನ್ಸ್ ಮತ್ತು ವೀಡಿಯೊ ಕರೆ ಮೂಲಕ ಆದೇಶಗಳ ಸ್ಥಿತಿಯನ್ನು ಸಹ ತಿಳಿಯಲಾಗುವುದು ಎಂದು ತಿಳಿಸಲಾಗಿದೆ. ಹೊಸ ಮಾರ್ಗಸೂಚಿಗಳನ್ನು ವಿಶೇಷವಾಗಿ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೌಕರರಿಗೆ ಎಚ್ಚರಿಕೆ ನೀಡಿದ ಅವರು, ಏನಾದರೂ ತಪ್ಪು ಮಾಡಿದರೆ ದಂಡ ವಿಧಿಸಲಾಗುತ್ತದೆ. ಕಚೇರಿಗಳಲ್ಲಿನ ಕಾರ್ಯ ವೈಖರಿಯನ್ನು ಬದಲಾಯಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 19 April 23

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ