AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ತಿಂಗಳ ಹಿಂದೆ ಕೋಟಾದಿಂದ ಕಾಣೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆ

ರಾಜಸ್ಥಾನದ ಕೋಟಾದಲ್ಲಿ 5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದ ಬಾಲಕ ಅಕ್ಟೋಬರ್‌ನಲ್ಲಿ ಹಾಸ್ಟೆಲ್​ನಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರು.

ಐದು ತಿಂಗಳ ಹಿಂದೆ ಕೋಟಾದಿಂದ ಕಾಣೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆ
ಜೆಇಇ ವಿದ್ಯಾರ್ಥಿಗಳು-ಸಾಂದರ್ಭಿಕ ಚಿತ್ರImage Credit source: Shiksha
ನಯನಾ ರಾಜೀವ್
|

Updated on: Mar 17, 2024 | 10:49 AM

Share

ಐದು ತಿಂಗಳ ಹಿಂದೆ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿ ಇದೀಗ ಕೇರಳದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದ ಬಾಲಕ ಅಕ್ಟೋಬರ್‌ನಲ್ಲಿ ಹಾಸ್ಟೆಲ್ ಕೊಠಡಿಯಿಂದ ಹೊರಬಂದ ನಂತರ ನಾಪತ್ತೆಯಾಗಿದ್ದರು. ತಿರುವನಂತಪುರಂನ ಶಿವಗಿರಿ ಪ್ರದೇಶದಲ್ಲಿ ಆತ ಪತ್ತೆಯಾಗಿದ್ದು,ಮ ಕೌನ್ಸೆಲಿಂಗ್ ಬಳಿಕ ಪೋಷಕರಿಗೆ ಒಪ್ಪಿಸಲಾಗಿದೆ. ಬಿಹಾರದ ರಾಘೋಪುರ್-ಸುಪೌಲ್ ಮೂಲದ ಬಾಲಕ ಕೋಟಾದಲ್ಲಿ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿದ್ದ ಮತ್ತು ವಿಜ್ಞಾನ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕೋಟಾ ಸಿಟಿ) ಅಮೃತಾ ದುಹಾನ್ ತಿಳಿಸಿದ್ದಾರೆ.

ಮಗ ನಾಪತ್ತೆಯಾಗಿದ್ದಾನೆ ಎಂದು ವಿದ್ಯಾರ್ಥಿ ತಂದೆ ನವೆಂಬರ್​ 9 ರಂದು ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್​ 5ರಂದೇ ಹಾಸ್ಟೆಲ್​ನಿಂದ ಆತ ಕಾಣೆಯಾಗಿದ್ದ. ಬಾಲಕ ತನ್ನ ಮೊಬೈಲ್ ನಂಬರ್​, ಸಾಮಾಜಿಕ ಜಾಲತಾಣಗಳ ಖಾತೆಯನ್ನು ಬದಲಾಯಿಸಿದ್ದ. ಮಾಹಿತಿ ಮೇರೆಗೆ ಕಾರ್ಯನಿರ್ವಹಿಸಿದ ಪೊಲೀಸ್ ತಂಡವು ಮಾರ್ಚ್ 8 ರಂದು ಕೇರಳ ತಲುಪಿತು ಮತ್ತು ವ್ಯಾಪಕ ಹುಡುಕಾಟದ ನಂತರ ಗುರುವಾರ ಬಾಲಕನನ್ನು ರಕ್ಷಿಸಿದೆ.

ಜೆಇಇಗೆ ತಯಾರಿ, 12 ನೇ ತರಗತಿಗೆ ಅರ್ಹತೆ ಮತ್ತು ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ಉದ್ಯೋಗ ಪಡೆಯುವ ಬದಲು, ಆನ್‌ಲೈನ್ ಟ್ರೇಡಿಂಗ್ ಮೂಲಕ ಏನಾದರೂ ಮಾಡಲು ಬಯಸಿದ್ದರು ಎಂದು ಹುಡುಗ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ, ಇದು ಈ ವರ್ಷ 4ನೇ ಪ್ರಕರಣ

ಬಾಲಕನನ್ನು ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದ್ದು, ಆತನ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ದುಹಾನ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ