Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ತಿಂಗಳ ಹಿಂದೆ ಕೋಟಾದಿಂದ ಕಾಣೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆ

ರಾಜಸ್ಥಾನದ ಕೋಟಾದಲ್ಲಿ 5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದ ಬಾಲಕ ಅಕ್ಟೋಬರ್‌ನಲ್ಲಿ ಹಾಸ್ಟೆಲ್​ನಿಂದ ಹೊರಬಂದ ಬಳಿಕ ನಾಪತ್ತೆಯಾಗಿದ್ದರು.

ಐದು ತಿಂಗಳ ಹಿಂದೆ ಕೋಟಾದಿಂದ ಕಾಣೆಯಾಗಿದ್ದ ಜೆಇಇ ಆಕಾಂಕ್ಷಿ ಕೇರಳದಲ್ಲಿ ಪತ್ತೆ
ಜೆಇಇ ವಿದ್ಯಾರ್ಥಿಗಳು-ಸಾಂದರ್ಭಿಕ ಚಿತ್ರImage Credit source: Shiksha
Follow us
ನಯನಾ ರಾಜೀವ್
|

Updated on: Mar 17, 2024 | 10:49 AM

ಐದು ತಿಂಗಳ ಹಿಂದೆ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿ ಇದೀಗ ಕೇರಳದಲ್ಲಿ ಪತ್ತೆಯಾಗಿದ್ದಾರೆ. ಬಿಹಾರದ ಬಾಲಕ ಅಕ್ಟೋಬರ್‌ನಲ್ಲಿ ಹಾಸ್ಟೆಲ್ ಕೊಠಡಿಯಿಂದ ಹೊರಬಂದ ನಂತರ ನಾಪತ್ತೆಯಾಗಿದ್ದರು. ತಿರುವನಂತಪುರಂನ ಶಿವಗಿರಿ ಪ್ರದೇಶದಲ್ಲಿ ಆತ ಪತ್ತೆಯಾಗಿದ್ದು,ಮ ಕೌನ್ಸೆಲಿಂಗ್ ಬಳಿಕ ಪೋಷಕರಿಗೆ ಒಪ್ಪಿಸಲಾಗಿದೆ. ಬಿಹಾರದ ರಾಘೋಪುರ್-ಸುಪೌಲ್ ಮೂಲದ ಬಾಲಕ ಕೋಟಾದಲ್ಲಿ ಜಂಟಿ ಪ್ರವೇಶ ಪರೀಕ್ಷೆಗೆ (ಜೆಇಇ) ತಯಾರಿ ನಡೆಸುತ್ತಿದ್ದ ಮತ್ತು ವಿಜ್ಞಾನ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ (ಕೋಟಾ ಸಿಟಿ) ಅಮೃತಾ ದುಹಾನ್ ತಿಳಿಸಿದ್ದಾರೆ.

ಮಗ ನಾಪತ್ತೆಯಾಗಿದ್ದಾನೆ ಎಂದು ವಿದ್ಯಾರ್ಥಿ ತಂದೆ ನವೆಂಬರ್​ 9 ರಂದು ಪೊಲೀಸರಿಗೆ ದೂರು ನೀಡಿದ್ದರು. ಅಕ್ಟೋಬರ್​ 5ರಂದೇ ಹಾಸ್ಟೆಲ್​ನಿಂದ ಆತ ಕಾಣೆಯಾಗಿದ್ದ. ಬಾಲಕ ತನ್ನ ಮೊಬೈಲ್ ನಂಬರ್​, ಸಾಮಾಜಿಕ ಜಾಲತಾಣಗಳ ಖಾತೆಯನ್ನು ಬದಲಾಯಿಸಿದ್ದ. ಮಾಹಿತಿ ಮೇರೆಗೆ ಕಾರ್ಯನಿರ್ವಹಿಸಿದ ಪೊಲೀಸ್ ತಂಡವು ಮಾರ್ಚ್ 8 ರಂದು ಕೇರಳ ತಲುಪಿತು ಮತ್ತು ವ್ಯಾಪಕ ಹುಡುಕಾಟದ ನಂತರ ಗುರುವಾರ ಬಾಲಕನನ್ನು ರಕ್ಷಿಸಿದೆ.

ಜೆಇಇಗೆ ತಯಾರಿ, 12 ನೇ ತರಗತಿಗೆ ಅರ್ಹತೆ ಮತ್ತು ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ಉದ್ಯೋಗ ಪಡೆಯುವ ಬದಲು, ಆನ್‌ಲೈನ್ ಟ್ರೇಡಿಂಗ್ ಮೂಲಕ ಏನಾದರೂ ಮಾಡಲು ಬಯಸಿದ್ದರು ಎಂದು ಹುಡುಗ ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ, ಇದು ಈ ವರ್ಷ 4ನೇ ಪ್ರಕರಣ

ಬಾಲಕನನ್ನು ಶುಕ್ರವಾರ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದ್ದು, ಆತನ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ದುಹಾನ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ