AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ

ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ ಹೊಡೆದು 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ.

Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 4:44 PM

Share

ಥಾಣೆ, ಜು.18: ಇಂದು ಬೆಳಿಗ್ಗೆ 6.30ಕ್ಕೆ  ಕಂಟೈನರ್​​ ಜೀಪೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಕಂಟೈನರ್‌ಗೆ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ, ಈ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಜೀಪಿನ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್  ಜೀಪಿಗೆ ಡಿಕ್ಕಿ ಹೊಡೆದು, ಜೀಪನ್ನು ಸುಮಾರು 100 ಮೀಟರ್‌ವರೆಗೆ ಎಳೆದೊಯ್ದು ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ . ಮೃತರನ್ನು ಚಿನ್ಮಯಿ ವಿಕಾಸ್ ಶಿಂಧೆ-15, ರಿಯಾ ಕಿಶೋರ್ ಪರದೇಶಿ, ಚೈತಾಲಿ ಸುಶಾಂತ್ ಪಿಂಪಲ್-27, ಸಂತೋಷ್ ಅನಂತ್ ಜಾಧವ್-50, ವಸಂತ್ ಧರ್ಮ ಜಾಧವ್-50, ಪ್ರಜ್ವಲ್ ಶಂಕರ್ ಫಿರ್ಕೆ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಭಿವಂಡಿಯ ಐಜಿಎಂ ಆಸ್ಪತ್ರೆಗೆ ಮತ್ತು ಕಲ್ವಾದಲ್ಲಿನ ನಾಗರಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ದಿಲೀಪ್ ಕುಮಾರ್ ವಿಶ್ವಕರ್ಮ – 29, ಚೇತನ ಗಣೇಶ್ – 19, ಕುನಾಲ್ ಜ್ಞಾನೇಶ್ವರ್ ಭಮ್ರೆ – 22 ಎಂದು ಹೇಳಲಾಗಿದೆ.

ಇದನ್ನೂ ಓದಿ:  ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಇನ್ನೂ ಥಾಣೆಯ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸವಾರರು ನಿಧಾನವಾಗಿ ವಾಹನ ಚಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಎಚ್ಚರಿಕೆ ನೀಡಿದ್ದು, ಥಾಣೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 18 July 23

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು