Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ

ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ ಹೊಡೆದು 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ.

Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
|

Updated on:Jul 18, 2023 | 4:44 PM

ಥಾಣೆ, ಜು.18: ಇಂದು ಬೆಳಿಗ್ಗೆ 6.30ಕ್ಕೆ  ಕಂಟೈನರ್​​ ಜೀಪೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಕಂಟೈನರ್‌ಗೆ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ, ಈ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಜೀಪಿನ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್  ಜೀಪಿಗೆ ಡಿಕ್ಕಿ ಹೊಡೆದು, ಜೀಪನ್ನು ಸುಮಾರು 100 ಮೀಟರ್‌ವರೆಗೆ ಎಳೆದೊಯ್ದು ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ . ಮೃತರನ್ನು ಚಿನ್ಮಯಿ ವಿಕಾಸ್ ಶಿಂಧೆ-15, ರಿಯಾ ಕಿಶೋರ್ ಪರದೇಶಿ, ಚೈತಾಲಿ ಸುಶಾಂತ್ ಪಿಂಪಲ್-27, ಸಂತೋಷ್ ಅನಂತ್ ಜಾಧವ್-50, ವಸಂತ್ ಧರ್ಮ ಜಾಧವ್-50, ಪ್ರಜ್ವಲ್ ಶಂಕರ್ ಫಿರ್ಕೆ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಭಿವಂಡಿಯ ಐಜಿಎಂ ಆಸ್ಪತ್ರೆಗೆ ಮತ್ತು ಕಲ್ವಾದಲ್ಲಿನ ನಾಗರಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ದಿಲೀಪ್ ಕುಮಾರ್ ವಿಶ್ವಕರ್ಮ – 29, ಚೇತನ ಗಣೇಶ್ – 19, ಕುನಾಲ್ ಜ್ಞಾನೇಶ್ವರ್ ಭಮ್ರೆ – 22 ಎಂದು ಹೇಳಲಾಗಿದೆ.

ಇದನ್ನೂ ಓದಿ:  ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಇನ್ನೂ ಥಾಣೆಯ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸವಾರರು ನಿಧಾನವಾಗಿ ವಾಹನ ಚಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಎಚ್ಚರಿಕೆ ನೀಡಿದ್ದು, ಥಾಣೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 18 July 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ