AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ

ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ ಹೊಡೆದು 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ.

Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 4:44 PM

Share

ಥಾಣೆ, ಜು.18: ಇಂದು ಬೆಳಿಗ್ಗೆ 6.30ಕ್ಕೆ  ಕಂಟೈನರ್​​ ಜೀಪೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಕಂಟೈನರ್‌ಗೆ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ, ಈ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಜೀಪಿನ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್  ಜೀಪಿಗೆ ಡಿಕ್ಕಿ ಹೊಡೆದು, ಜೀಪನ್ನು ಸುಮಾರು 100 ಮೀಟರ್‌ವರೆಗೆ ಎಳೆದೊಯ್ದು ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ . ಮೃತರನ್ನು ಚಿನ್ಮಯಿ ವಿಕಾಸ್ ಶಿಂಧೆ-15, ರಿಯಾ ಕಿಶೋರ್ ಪರದೇಶಿ, ಚೈತಾಲಿ ಸುಶಾಂತ್ ಪಿಂಪಲ್-27, ಸಂತೋಷ್ ಅನಂತ್ ಜಾಧವ್-50, ವಸಂತ್ ಧರ್ಮ ಜಾಧವ್-50, ಪ್ರಜ್ವಲ್ ಶಂಕರ್ ಫಿರ್ಕೆ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಭಿವಂಡಿಯ ಐಜಿಎಂ ಆಸ್ಪತ್ರೆಗೆ ಮತ್ತು ಕಲ್ವಾದಲ್ಲಿನ ನಾಗರಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ದಿಲೀಪ್ ಕುಮಾರ್ ವಿಶ್ವಕರ್ಮ – 29, ಚೇತನ ಗಣೇಶ್ – 19, ಕುನಾಲ್ ಜ್ಞಾನೇಶ್ವರ್ ಭಮ್ರೆ – 22 ಎಂದು ಹೇಳಲಾಗಿದೆ.

ಇದನ್ನೂ ಓದಿ:  ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಇನ್ನೂ ಥಾಣೆಯ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸವಾರರು ನಿಧಾನವಾಗಿ ವಾಹನ ಚಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಎಚ್ಚರಿಕೆ ನೀಡಿದ್ದು, ಥಾಣೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 18 July 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?