AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸಿ, ವೊಡಾಫೋನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೆಟ್ ಏರ್‌ವೇಸ್ ಸಿಇಒ; ಹೀಗಿದೆ ಕಾರಣ

ಇಷ್ಟಾದರೂ ಕರೆಗಳು ನಿಂತಿಲ್ಲ. ಇದು ‘ಸ್ವೀಕಾರಾರ್ಹವಲ್ಲ’ ಮತ್ತು ‘ಅಸಂಬದ್ಧ’ ಎಂದು ಹೇಳಿದ ಕಪೂರ್, ವೊಡಾಫೋನ್ ಕಂಪನಿಯ ಹಿರಿಯ ಮ್ಯಾನೇಜ್‌ಮೆಂಟ್‌ನಿಂದ ಯಾರಾದರೂ ಟ್ವಿಟರ್‌ನಲ್ಲಿದ್ದಾರೆಯೇ ಎಂದು ಕೇಳಿದ್ದಾರೆ.

ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸಿ, ವೊಡಾಫೋನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೆಟ್ ಏರ್‌ವೇಸ್ ಸಿಇಒ; ಹೀಗಿದೆ ಕಾರಣ
ಸಂಜೀವ್ ಕಪೂರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 13, 2023 | 8:01 PM

Share

ವೊಡಾಫೋನ್‌ ಬಗ್ಗೆ ತನ್ನ ಅಸಮಾಧನ ವ್ಯಕ್ತಪಡಿಸಿದ ಜೆಟ್ ಏರ್‌ವೇಸ್ ಸಿಇಒ ಸಂಜೀವ್ ಕಪೂರ್ ( Jet Airways CEO Sanjiv Kapoor)ಭಾನುವಾರ ಟೆಲಿಕಾಂ ಆಪರೇಟರ್‌ಗೆ ‘ವಾಹಕಗಳನ್ನು ಬದಲಾಯಿಸದಂತೆ ನನಗೆ ಮನವರಿಕೆ ಮಾಡಲು’ ಪದೇ ಪದೇ ಕರೆ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ.ಈ ವಿಷಯದ ಬಗ್ಗೆ ನಾನು ತನ್ನನ್ನು ಸಂಪರ್ಕಿಸುತ್ತೇನೆ ಎಂದು ಹೇಳಿದ ಗ್ರಾಹಕ ಪ್ರತಿನಿಧಿಗೆ ಪ್ರತಿಕ್ರಿಯಿಸಿದ ಕಪೂರ್, ಕಂಪನಿಯು ತನಗೆ ಕರೆ ಮಾಡಬಾರದು ಎಂದಿದ್ದಾರೆ.ಡಿಯರ್ @ViCustomerCare: ಕ್ಯಾರಿಯರ್‌ಗಳನ್ನು ಬದಲಾಯಿಸಬೇಡಿ ಎಂದು ನನಗೆ ಮನವರಿಕೆ ಮಾಡಲು ದಯವಿಟ್ಟು ನನಗೆ ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸಿ. 9 ವರ್ಷಗಳ ನಂತರ ನಾನು ಏಕೆ ಬದಲಾಯಿಸುತ್ತಿದ್ದೇನೆ ಎಂದು ನಾನು ನಿಮಗೆ ಹೇಳಿದ್ದೇನೆ: 1. ಭಾರತದ ಕೆಲವು ಭಾಗಗಳಲ್ಲಿ ಕಳಪೆ ಕವರೇಜ್, 2. ಕೆಲವು ದೇಶಗಳಿಗೆ ಕೆಳಮಟ್ಟದ ಅಂತಾರಾಷ್ಟ್ರೀಯ ರೋಮಿಂಗ್ ಯೋಜನೆಗಳು. ಅಷ್ಟೇ. ಧನ್ಯವಾದಗಳು” ಎಂದು ಕಪೂರ್ ಟ್ವೀಟ್ ಮಾಡಿದ್ದಾರೆ.

ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ವಂದನಾ ಎಂಬ ಗ್ರಾಹಕ ಪ್ರತಿನಿಧಿ, ವೊಡಾಫೋನ್ ನಿಮ್ಮ ಕಷ್ಟಗಳನ್ನು ಅರ್ಥಮಾಡಿಕೊಂಡಿದೆ. ಶೀಘ್ರದಲ್ಲೇ ನಿಮ್ಮನ್ನು ಸಂಪರ್ಕಿಸುತ್ತೇವೆ ಎಂದಿದ್ದಾರೆ.

“ದಯವಿಟ್ಟು ನನ್ನೊಂದಿಗೆ ಸಂಪರ್ಕದಲ್ಲಿರಬೇಡಿ. ನಾನು ಹೇಳುತ್ತಿರುವುದು ಇಷ್ಟೇ. ನಿನ್ನೆಯಿಂದ ನನಗೆ ಹತ್ತಾರು ಕರೆಗಳು ಬಂದಿವೆ” ಎಂದು ಜೆಟ್ ಸಿಇಒ ಪ್ರತಿಕ್ರಿಯಿಸಿದ್ದಾರೆ.

ಇಷ್ಟಾದರೂ ಕರೆಗಳು ನಿಂತಿಲ್ಲ. ಇದು ‘ಸ್ವೀಕಾರಾರ್ಹವಲ್ಲ’ ಮತ್ತು ‘ಅಸಂಬದ್ಧ’ ಎಂದು ಹೇಳಿದ ಕಪೂರ್, ವೊಡಾಫೋನ್ ಕಂಪನಿಯ ಹಿರಿಯ ಮ್ಯಾನೇಜ್‌ಮೆಂಟ್‌ನಿಂದ ಯಾರಾದರೂ ಟ್ವಿಟರ್‌ನಲ್ಲಿದ್ದಾರೆಯೇ ಎಂದು ಕೇಳಿದ್ದಾರೆ. ಅವರ ಸಂಭಾಷಣೆಯ ಕೆಳಗಿನ ಕಾಮೆಂಟ್‌ಗಳಲ್ಲಿ ನಾನು ಕೂಡಾ ವೊಡಾಫೋನ್‌ನಿಂದ ಪೋರ್ಟ್ ಮಾಡಲು ಬಯಸಿದ್ದೆ. ನನಗೆ ಅರ್ಥವಾಗದ ಭಾಷೆಯಲ್ಲಿ ಆಪರೇಟರ್‌ನಿಂದ ಐದು ಕರೆಗಳು ಬಂದಿತ್ತು ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ,

ಆದಾಗ್ಯೂ, ಇನ್ನೊಬ್ಬ ಬಳಕೆದಾರರು ಟೆಲಿಕಾಂ ದೈತ್ಯ ಅತ್ಯುತ್ತಮ ಅಂತರಾಷ್ಟ್ರೀಯ ರೋಮಿಂಗ್ ಯೋಜನೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದು ಅದಕ್ಕೆ ಪ್ರತಿಕ್ರಿಯಿಸಿದ ಕಪೂರ್, ಅದು ಇತ್ತು ಆದರೆ ಈಗ ಇಲ್ಲ ಎಂದಿದ್ದಾರೆ.

ವೊಡಾಫೋನ್ ಭಾರತದಲ್ಲಿ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ನಂತರ ಮೂರನೇ ಅತಿ ಹೆಚ್ಚು ಚಂದಾದಾರರನ್ನು ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Mon, 13 February 23

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್