AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್ ಸಿಎಂ, ಸಚಿವರು, ಶಾಸಕರ ವೇತನ ಶೇ. 50ರವರೆಗೆ ಹೆಚ್ಚಳ; ಸೋರೆನ್ ಸಂಪುಟ ಅನುಮೋದನೆ

ಮುಖ್ಯಮಂತ್ರಿ, ಸಚಿವರು, ವಿರೋಧ ಪಕ್ಷದ ನಾಯಕರು, ಸಚೇತಕರು ಮತ್ತು ಆಡಳಿತ ಮತ್ತು ವಿರೋಧ ಪಕ್ಷಗಳ ಮುಖ್ಯ ಸಚೇತಕರು ಸೇರಿದಂತೆ ಎಲ್ಲಾ ಶಾಸಕರ ವೇತನವನ್ನು ಹೆಚ್ಚಿಸುವ ಪ್ರಸ್ತಾವನೆಗೆ ಜಾರ್ಖಂಡ್ ಕ್ಯಾಬಿನೆಟ್ ಬುಧವಾರ ಅನುಮೋದನೆ ನೀಡಿದೆ.

ಜಾರ್ಖಂಡ್ ಸಿಎಂ, ಸಚಿವರು, ಶಾಸಕರ ವೇತನ ಶೇ. 50ರವರೆಗೆ ಹೆಚ್ಚಳ; ಸೋರೆನ್ ಸಂಪುಟ ಅನುಮೋದನೆ
ಚಂಪೈ ಸೋರೆನ್
ಸುಷ್ಮಾ ಚಕ್ರೆ
|

Updated on: Jun 20, 2024 | 3:52 PM

Share

ನವದೆಹಲಿ: ಜಾರ್ಖಂಡ್​ನಲ್ಲಿ (Jharkhand) ಮುಖ್ಯಮಂತ್ರಿಗಳ ವೇತನ ಮತ್ತು ಸಂಭಾವನೆಯನ್ನು ಶೇ.25ರಷ್ಟು ಹೆಚ್ಚಿಸಲಾಗಿದ್ದು, ಶಾಸಕರ ವೇತನವನ್ನು ಶೇ.50ರಷ್ಟು ಹೆಚ್ಚಿಸಲಾಗಿದೆ. ಮಂತ್ರಿಗಳ ಸಂಬಳದಲ್ಲಿ ಶೇ. 31ರಷ್ಟು ಹೆಚ್ಚಳ ಮಾಡಲಾಗಿದೆ. ಹೊಸ ಪರಿಷ್ಕರಣೆ ಪ್ರಕಾರ, ಮುಖ್ಯಮಂತ್ರಿಗಳ ಮೂಲ ವೇತನವನ್ನು ಸವಲತ್ತುಗಳು ಮತ್ತು ಭತ್ಯೆಗಳನ್ನು ಹೊರತುಪಡಿಸಿ ತಿಂಗಳಿಗೆ 80,000 ರೂ.ಗಳಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮುಖ್ಯಮಂತ್ರಿಗಳ ಪ್ರದೇಶ ಭತ್ಯೆಯನ್ನು ಮಾಸಿಕ 80,000 ರೂ.ನಿಂದ 95,000 ರೂ.ಗೆ ಮತ್ತು ರಿಫ್ರೆಶ್​ಮೆಂಟ್ ಭತ್ಯೆಯನ್ನು 60,000 ರೂ.ನಿಂದ 70,000 ರೂ.ಗೆ ಹೆಚ್ಚಿಸಲಾಗಿದೆ.

“ಶಾಸಕರು, ಸಚಿವರು, ಸ್ಪೀಕರ್, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಮತ್ತು ವಿಧಾನಸಭೆಯ ಅಧಿಕಾರಿಗಳಿಗೆ ವೇತನ, ಭತ್ಯೆಗಳು ಮತ್ತು ಇತರ ಸವಲತ್ತುಗಳ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ” ಎಂದು ಸಂಪುಟ ಕಾರ್ಯದರ್ಶಿ ವಂದನಾ ದಾಡೆಲ್ ಅನುಮೋದನೆಯನ್ನು ದೃಢಪಡಿಸಿದ್ದಾರೆ.

ಇದನ್ನೂ ಓದಿ: ಭತ್ತ, ರಾಗಿ, ಜೋಳ ಸೇರಿ 14 ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಮೋದಿ ಸರ್ಕಾರ ನಿರ್ಧಾರ

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಪ್ರಸ್ತಾವನೆಗೆ ಅನುಗುಣವಾಗಿ ಸಚಿವರ ವೇತನವನ್ನು 65,000 ರೂ.ನಿಂದ 85,000 ರೂ.ಗೆ ಮತ್ತು ಶಾಸಕರ ವೇತನವನ್ನು 40,000 ರೂ.ನಿಂದ 60,000 ರೂ.ಗೆ ಏರಿಸಲಾಗಿದೆ. ಅವರು ರೂ. 80,000ದಿಂದ 95,000 ರೂ. ಪ್ರದೇಶ ಭತ್ಯೆಯನ್ನು ಪಡೆಯುತ್ತಾರೆ.

ಜಾರ್ಖಂಡ್ ಸ್ಪೀಕರ್ ಮೂಲ ವೇತನವನ್ನು ಮಾಸಿಕ 78 ಸಾವಿರದಿಂದ 98 ಸಾವಿರಕ್ಕೆ, ಪ್ರತಿಪಕ್ಷ ನಾಯಕರ ಮೂಲ ವೇತನವನ್ನು 65 ಸಾವಿರದಿಂದ 85 ಸಾವಿರಕ್ಕೆ, ಮುಖ್ಯ ಸಚೇತಕರ ವೇತನವನ್ನು 55 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಿಸಲಾಗಿದೆ. ಶಾಸಕರ ಪ್ರದೇಶ ಭತ್ಯೆಯನ್ನು ಮಾಸಿಕ 65,000 ರೂ.ನಿಂದ 80,000 ರೂ.ಗಳಿಗೆ ಮತ್ತು ಅವರ ಉಪಹಾರ ಭತ್ಯೆಯನ್ನು ತಿಂಗಳಿಗೆ 30,000 ರೂ.ನಿಂದ 40,000 ರೂ.ಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ ನಡೆದ​ ಎನ್​ಕೌಂಟರ್​ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಶಾಸಕರ ವೇತನ ಪರಿಷ್ಕರಣೆಯನ್ನು ಪರಿಶೀಲಿಸಲು ರಚಿಸಲಾದ 5 ಸದಸ್ಯರ ಸಮಿತಿಯು ಕಳೆದ ವರ್ಷ ಡಿಸೆಂಬರ್‌ನಲ್ಲಿ ತನ್ನ ವರದಿಯನ್ನು ಸಲ್ಲಿಸಿದ್ದು, ಮುಖ್ಯಮಂತ್ರಿ ಮತ್ತು ಇತರ ಸಚಿವರಿಗೆ ಮೇಲೆ ತಿಳಿಸಲಾದ ಹೆಚ್ಚಳವನ್ನು ಶಿಫಾರಸು ಮಾಡಿದೆ. ನಂತರ, ಆಗಸ್ಟ್‌ನಲ್ಲಿ ಮತ್ತೊಂದು ಸಮಿತಿಯು ಶಾಸಕರ ಮೂಲ ವೇತನವನ್ನು 40,000 ರೂ.ನಿಂದ 60,000 ರೂ.ಗೆ ಹೆಚ್ಚಿಸಲು ಪ್ರಸ್ತಾಪವಿಟ್ಟಿತು ಮತ್ತು ಶಾಸಕರಿಗೆ ಇತರ ಭತ್ಯೆಗಳನ್ನು ಹೆಚ್ಚಿಸಲು ಸಲಹೆ ನೀಡಿತು.

ಸಮಿತಿಯು ಕಳೆದ ವರ್ಷ ಡಿಸೆಂಬರ್‌ನಲ್ಲಿ ತನ್ನ ವರದಿಯನ್ನು ಸಲ್ಲಿಸಿದ್ದು, ಸಿಎಂಗೆ ಶೇ. 25 ಮತ್ತು ಇತರ ಸಚಿವರಿಗೆ ಶೇ. 31ರಷ್ಟು ವೇತನ ಹೆಚ್ಚಳವನ್ನು ಶಿಫಾರಸು ಮಾಡಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!