AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ ನ್ಯಾಯಾಧೀಶರ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಲು ಸಿಎಂ ಹೇಮಂತ್​ ಸೊರೆನ್​ ನಿರ್ಧಾರ

ಶುಕ್ರವಾರ ಮುಖ್ಯಮಂತ್ರಿ ಸೊರೆನ್​ ಅವರು ನ್ಯಾಯಾಧೀಶರ ಕುಟುಂಬವನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದರು. ಹಾಗೇ, ಜಡ್ಜ್​ ಸಾವಿನ ಹಿಂದಿನ ಕಾರಣವನ್ನು ಕಂಡು ಹಿಡಿದು ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

ಜಾರ್ಖಂಡ್​ ನ್ಯಾಯಾಧೀಶರ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಲು ಸಿಎಂ ಹೇಮಂತ್​ ಸೊರೆನ್​ ನಿರ್ಧಾರ
ಜಾರ್ಖಂಡ ಮುಖ್ಯಮಂತ್ರಿ
TV9 Web
| Updated By: Lakshmi Hegde|

Updated on:Aug 01, 2021 | 10:05 AM

Share

ಇತ್ತೀಚೆಗೆ ಜಾರ್ಖಂಡ್​ನಲ್ಲಿ ನಡೆದ ನ್ಯಾಯಾಧೀಶ ಉತ್ತಮ್​ ಆನಂದ್​ ಹತ್ಯೆಯ ಪ್ರಕರಣವನ್ನು ಸಿಬಿಐಗೆ ವಹಿಸಲು ಜಾರ್ಖಂಡ ಮುಖ್ಯಮಂತ್ರಿ ಹೇಮಂತ್ ಸೊರೆನ್​ ನಿರ್ಧರಿಸಿದ್ದಾರೆ. ಧನ್​ಬಾಗ್​ ಜಿಲ್ಲಾ ಮತ್ತು ಸೆಶನ್ಸ್​ ಕೋರ್ಟ್​ ನ್ಯಾಯಾಧೀಶರಾದ ಉತ್ತಮ್​ ಆನಂದ್​ ಅವರು ಮುಂಜಾನೆ ಜಾಗಿಂಗ್​ ಮಾಡುತ್ತಿದ್ದಾಗ, ಟೆಂಪೋವೊಂದು ಅವರಿಗೆ ಉದ್ದೇಶಪೂರ್ವಕವಾಗಿಯೇ ಡಿಕ್ಕಿ ಹೊಡೆದು ಹೋಗಿತ್ತು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದಾದ ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ ಕೇಸ್​ನ್ನು ಸಿಬಿಐಗೆ ವಹಿಸಲು ಸಿಎಂ ನಿರ್ಧರಿಸಿದ್ದಾರೆ.

49 ವರ್ಷದ ಈ ನ್ಯಾಯಾಧೀಶ ಇತ್ತೀಚೆಗೆ ಹೈಪ್ರೊಫೈಲ್​ ಪ್ರಕರಣದ ವಿಚಾರಣೆಯೊಂದನ್ನು ನಡೆಸಿ, ಅದರಲ್ಲಿ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಹತ್ಯೆಗೀಡಾಗಿದ್ದಾರೆ. ಮೊದಲು ಸಹಜ ಅಪಘಾತ ಎಂದೇ ಹೇಳಲಾಗಿತ್ತು. ಆದರೆ ಸಿಸಿಟಿವಿ ದೃಶ್ಯ ನೋಡುತ್ತಿದ್ದಂತೆ ಪೊಲೀಸರು ತನಿಖೆ ಶುರು ಮಾಡಿದ್ದರು. ಈ ಮಧ್ಯೆ ಜಾರ್ಖಂಡ ಸರ್ಕಾರ, ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT)ವನ್ನು ರಚಿಸಿತ್ತು.

ಶುಕ್ರವಾರ ಮುಖ್ಯಮಂತ್ರಿ ಸೊರೆನ್​ ಅವರು ನ್ಯಾಯಾಧೀಶರ ಕುಟುಂಬವನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದರು. ಹಾಗೇ, ಜಡ್ಜ್​ ಸಾವಿನ ಹಿಂದಿನ ಕಾರಣವನ್ನು ಕಂಡು ಹಿಡಿದು ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಘಟನೆಯ ಬಗ್ಗೆ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್ ಕೂಡ ಈ ಬಗ್ಗೆ ಗಂಭೀರವಾಗಿ ಗಮನಹರಿಸಿದೆ. ನ್ಯಾಯಾಧೀಶರ ಹತ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಹಾಗೇ, ಈ ಕೇಸ್​​ನ ತನಿಖೆ ಆದಷ್ಟು ಬೇಗ ಮುಗಿಸಿ, ತಪ್ಪಿತಸ್ಥರನ್ನು ಕಂಡುಹಿಡಿಯುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿ ಎಂದು ಜಾರ್ಖಂಡ ಹೈಕೋರ್ಟ್​ಗೆ ಸೂಚನೆಯನ್ನೂ ನೀಡಿದೆ. ಪೊಲೀಸರು ಈಗಾಗಲೇ ಮೂವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನೂ ನಡೆಸಿದ್ದಾರೆ.

ಇದನ್ನೂ ಓದಿ: Viral Video: ಜಾರು ಬಂಡಿಯಲ್ಲಿ ಪಾಂಡಾಗಳ ಭರ್ಜರಿ ತುಂಟಾಟ; ಇದು ನಿಮ್ಮ ಬಾಲ್ಯವನ್ನು ನೆನಪಿಸೀತು!

Published On - 9:59 am, Sun, 1 August 21

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!