AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ

ಕಾರಿನಲ್ಲಿದ್ದ ನಗದು ಅಪಾರ ಪ್ರಮಾಣದಲ್ಲಿದ್ದ ಕಾರಣ ಹಣ ಎಣಿಸುವ ಯಂತ್ರಗಳ ನೆರವಿನಿಂದ ಎಣಿಸಲಾಯಿತು. ಈ ಹಣ ಎಲ್ಲಿಂದ ಬಂತು ಮತ್ತು ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಶಾಸಕರನ್ನು ಪ್ರಶ್ನಿಸಲಾಯಿತು.

ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 31, 2022 | 7:55 AM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಹೌರಾ ಸೇತುವೆ ಬಳಿ ಮೂವರು ಕಾಂಗ್ರೆಸ್ ಶಾಸಕರನ್ನು (Congress Workers) ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಶಾಸಕರಿದ್ದ ವಾಹನದಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶಾಸಕರಾದ ಇರ್ಫಾನ್ ಅನ್ಸಾರಿ, ರಾಜೇಶ್​ ಕಚ್ಚಪ್ ಮತ್ತು ನಮನ್ ಬಿಕ್ಸಲ್ ಕೊಂಗಾರಿ ಅವರಿದ್ದ ಕಾರನ್ನು ತಡೆದು ಪರಿಶೀಲಿಸಿದರು. ಇವರಿದ್ದ ಕಾರನ್ನು ರಾಷ್ಟ್ರೀಯ ಹೆದ್ದಾರಿ 16ರಲ್ಲಿ ತಡೆಯಲಾಯಿತು.

‘ಕಪ್ಪು ಕಾರಿನಲ್ಲಿ ದೊಡ್ಡಮಟ್ಟದ ಹಣವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ನಮಗೆ ಬಂದಿತ್ತು. ನಂತರ ನಾವು ವಾಹನ ತಪಾಸಣೆ ಆರಂಭಿಸಿದೆವು. ಈ ವೇಳೆ ಜಾರ್ಖಂಡ್​ ಶಾಸಕರು ಪ್ರಯಾಣಿಸುತ್ತಿದ್ದ ಎಸ್​ಯುವಿ ತಡೆದು ಪರಿಶೀಲಿಸಿದೆವು. ಕಾರಿನಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾಯಿತು’ ಎಂದು ಹೌರಾ ಗ್ರಾಮೀಣ ವಲಯದ ಎಸ್​ಪಿ ಸ್ವಾತಿ ಭಂಗಾಲಿಯಾ ಮಾಹಿತಿ ನೀಡಿದರು.

ಕಾರಿನಲ್ಲಿದ್ದ ನಗದು ಅಪಾರ ಪ್ರಮಾಣದಲ್ಲಿದ್ದ ಕಾರಣ ಹಣ ಎಣಿಸುವ ಯಂತ್ರಗಳ ನೆರವಿನಿಂದ ಎಣಿಸಲಾಯಿತು. ಈ ಹಣ ಎಲ್ಲಿಂದ ಬಂತು ಮತ್ತು ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಶಾಸಕರನ್ನು ಪ್ರಶ್ನಿಸಲಾಯಿತು. ಶಾಸಕರೊಂದಿಗೆ ಇಬ್ಬರು ಇತರ ವ್ಯಕ್ತಿಗಳೂ ಕಾರಿನಲ್ಲಿದ್ದರು. ಈ ಕಾರಿನ ಮೇಲೆ ‘MLA Jamtara Jharkhand’ (ಶಾಸಕರು, ಜಮ್​ತಾರಾ, ಜಾರ್ಖಂಡ್) ಎನ್ನುವ ಫಲಕವಿತ್ತು. ಕಾಂಗ್ರೆಸ್​ನ ಚುನಾವಣಾ ಚಿಹ್ನೆಯೂ ಎದ್ದು ಕಾಣಿಸುವಂತಿತ್ತು ಎಂದು ಪೊಲೀಸರು ತಿಳಿಸಿದರು.

ಜಮ್​ತಾರಾ ಶಾಸಕ ಅನ್ಸಾರಿ, ರಾಂಚಿ ಜಿಲ್ಲೆ ಖಿರ್ಜಿ ಕ್ಷೇತ್ರದ ಶಾಸಕ ಕಚ್ಚಪ್ ಮತ್ತು ಸಿಮ್​ಡೆಗಾ ಜಿಲ್ಲೆ ಕೊಲೆಬಿರಾ ಶಾಸಕ ಕೊನ್​ಗಾರಿ ಪ್ರಸ್ತುತ ಪೊಲೀಸರ ವಶದಲ್ಲಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಾರ್ಖಂಡ್​ನ ಕಾಂಗ್ರೆಸ್​ ವಕ್ತಾರ ರಾಜೀವ್ ರಂಜನ್ ಪ್ರಸಾದ್, ಪ್ರಕರಣದ ಬಗ್ಗೆ ಪಕ್ಷವು ಮಾಹಿತಿ ಕಲೆಹಾಕುತ್ತಿದೆ ಎಂದು ಹೇಳಿದರು. ಜಾರ್ಖಂಡ್​ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ವಕ್ತಾ ಸುಪ್ರಿಯೊ ಭಟ್ಟಾಚಾರ್ಯ ಮಾತನಾಡಿ, ‘ಈ ಪ್ರಕರಣದ ಬಗ್ಗೆ ಪಕ್ಷದ ಪ್ರತಿಕ್ರಿಯೆಯನ್ನು ನಾಳೆ ನೀಡಲಾಗುವುದು’ ಎಂದರು. ‘ಹಣದ ಮೂಲದ ಬಗ್ಗೆ ಶಾಸಕರು ವಿವರ ನೀಡಬೇಕು’ ಎಂದು ಬಿಜೆಪಿ ವಕ್ತಾರ ದೀಪಕ್ ಪ್ರಕಾಶ್ ಆಗ್ರಹಿಸಿದ್ದಾರೆ.

ಈ ನಡುವೆ ಘಟನೆ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಘಟಕವು, ‘ಜಾರ್ಖಂಡ್​ನಲ್ಲಿ ಕುದುರೆ ವ್ಯಾಪಾರದ ಮೂಲಕ ಸರ್ಕಾರ ಉರುಳಿಸುವ ಪ್ರಯತ್ನಗಳು ನಡೆಯುತ್ತಿವೆ. ಈ ಹಣದಿಂದ ಶಾಸಕರನ್ನು ಖರೀದಿಸಲು ಬಿಜೆಪಿ ಯತ್ನಿಸಿತ್ತು. ಕೇಂದ್ರ ಸರ್ಕಾರದ ಯಾವುದಾದರೂ ತನಿಖಾ ಸಂಸ್ಥೆಯು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು ಈ ಹಣದ ಮೂಲ ಯಾವುದು ಎಂದು ಪತ್ತೆಹಚ್ಚಲು ಮುಂದಾಗಬಹುದೇ’ ಎಂದು ಪ್ರಶ್ನಿಸಿದೆ.

Published On - 7:55 am, Sun, 31 July 22

ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಲೋಡ್​ಗಟ್ಟಲೆ ಬಿಯರ್, ವೈನ್ ಚರಂಡಿ ಪಾಲು! ಯಾಕೆ ಗೊತ್ತೇ?
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!