AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್: ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ದೊಪ್ಪೆಂದು ಓಟಿ ಟೇಬಲ್ ಮೇಲೆ ಬಿದ್ದ ನಾಯಿ

ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದ ವೇಳೆ ಮೇಲಿಂದ ನಾಯಿಯೊಂದು ಬಿದ್ದು ಆತಂಕ ಸೃಷ್ಟಿಸಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಶಸ್ತ್ರ ಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ನಾಯಿ(Dog)ಯೊಂದು ಓಟಿ ಟೇಬಲ್​ ಮೇಲೆ ಬಿದ್ದು ಗಾಬರಿ ಹುಟ್ಟಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಪುಣ್ಯ ರೋಗಿಯ ಮೈಮೇಲೆ ಬಿದ್ದಿಲ್ಲ ಎಂದು ವೈದ್ಯರು ತೃಪ್ತಿಪಟ್ಟುಕೊಂಡಿದ್ದಾರೆ. ಧನ್‌ಬಾದ್‌ನ ರೈಲ್ವೆ ಆಸ್ಪತ್ರೆಯಲ್ಲಿ ನಡೆದ ಘಟನೆಯಲ್ಲಿ ನರ್ಸ್ ಒಬ್ಬರು ಗಾಯಗೊಂಡಿದ್ದು ಶಸ್ತ್ರಚಿಕಿತ್ಸೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು.

ಜಾರ್ಖಂಡ್: ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ದೊಪ್ಪೆಂದು ಓಟಿ ಟೇಬಲ್ ಮೇಲೆ ಬಿದ್ದ ನಾಯಿ
ಆಸ್ಪತ್ರೆ Image Credit source: IndiaToday
ನಯನಾ ರಾಜೀವ್
|

Updated on: Jul 11, 2025 | 10:39 AM

Share

ಜಾರ್ಖಂಡ್, ಜುಲೈ 11: ಶಸ್ತ್ರ ಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ನಾಯಿ(Dog)ಯೊಂದು ಓಟಿ ಟೇಬಲ್​ ಮೇಲೆ ಬಿದ್ದು ಗಾಬರಿ ಹುಟ್ಟಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಪುಣ್ಯ ರೋಗಿಯ ಮೈಮೇಲೆ ಬಿದ್ದಿಲ್ಲ ಎಂದು ವೈದ್ಯರು ತೃಪ್ತಿಪಟ್ಟುಕೊಂಡಿದ್ದಾರೆ. ಧನ್‌ಬಾದ್‌ನ ರೈಲ್ವೆ ಆಸ್ಪತ್ರೆಯಲ್ಲಿ ನಡೆದ ಘಟನೆಯಲ್ಲಿ ನರ್ಸ್ ಒಬ್ಬರು ಗಾಯಗೊಂಡಿದ್ದು ಶಸ್ತ್ರಚಿಕಿತ್ಸೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು.

ಮಂಗಳವಾರ ಬೆಳಗ್ಗೆ 11 ಗಂಟೆ ವೇಳೆಗೆ ಮೂಳೆ ಚಿಕಿತ್ಸಾ ವಿಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿತ್ತು. ಡಾ. ಪಿ.ಆರ್ ಠಾಕೂರ್ ಶಸ್ತ್ರ ಚಿಕಿತ್ಸೆ ಮಾಡುವಾಗ ಇದ್ದಕ್ಕಿದ್ದಂತೆ ದೊಡ್ಡ ಶಬ್ದವೊಂದು ಕೇಳಿಬಂದಿತ್ತು. ಸೀಲಿಂಗ್​​ನಿಂದ ನಾಯಿಯೊಂದು ಓಟಿ ಟೇಬಲ್ ಮೇಲೆ ಬಿದ್ದಿತ್ತು. ಈ ಘಟನೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಸಹಾಯ ಮಾಡುತ್ತಿದ್ದ ನರ್ಸ್​ ಗಾಯಗೊಂಡಿದ್ದು, ಶಸ್ತ್ರ ಚಿಕಿತ್ಸೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು.

ನರ್ಸ್​ ಅಂಜಲಿಯ ಭುಜ ಹಾಗೂ ಕುತ್ತಿಗೆಗೆ ಗಾಯಗಳಾಗಿವೆ. ರೋಗಿಯನ್ನು ಬೇರೆವಾರ್ಡ್​​ಗೆ ಶಿಫ್ಟ್​ ಮಾಡಲಾಯಿತು. ಗಾಯಗೊಂಡ ನರ್ಸ್‌ಗೆ ತುರ್ತು ಚಿಕಿತ್ಸೆ ನೀಡಲಾಯಿತು. ಈ ಘಟನೆಯಂದ ನರ್ಸ್​, ವೈದ್ಯರು, ರೋಗಿ ಎಲ್ಲರೂ ಗಾಬರಿಗೊಂಡಿದ್ದಾರೆ.

ಎಂಜಿನಿಯರ್ ಈ ಬಗ್ಗೆ ಪರಿಶೀಲಿಸಿದಾಗ ವೆಂಟಿಲೇಷನ್​ಗಾಗಿ ಬಿಟ್ಟಿದ್ದ ಜಾಗದಿಂದ ನಾಯಿಗಳು ಬಂದು ಸೀಲಿಂಗ್ ಮೇಲೆ ಆಶ್ರಯ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ನಾಯಿಯ ತೂಕ ತಡೆಯಲಾಗದೆ ಸೀಲಿಂಗ್ ಮುರಿದುಬಿದ್ದಿದೆ. ಆಪರೇಷನ್ ಥಿಯೇಟರ್ ಗೋಡೆಯ ಪಕ್ಕದಲ್ಲಿದ್ದ ಕಸದ ರಾಶಿಯ ಮೇಲೆ ನಾಯಿ ಹತ್ತಿ ಈ ಸೀಲಿಂಗ್ ಮೇಲೆ ಬಂದು ಮಲಗುತ್ತಿದ್ದವು. ಒಂದು ನಾಯಿ ಬಿದ್ದ ನಂತರವೂ, ಇತರ ನಾಯಿಗಳು ಬೊಗಳುವ ಶಬ್ದವು ಮೇಲೆ ಇನ್ನೂ ಕೇಳಿಬರುತ್ತಿತ್ತು.

ಮತ್ತಷ್ಟು ಓದಿ: ಕಾರು ಲಾಕ್ ಮಾಡಿ ದೇವಸ್ಥಾನದ ಪೂಜೆಗೆ ಹೋದ ಮಾಲೀಕ; ಉಸಿರುಗಟ್ಟಿ ಕಾರೊಳಗೆ ನಾಯಿ ಸಾವು

ಪೂರ್ವ ಮಧ್ಯ ರೈಲ್ವೆಯ ಧನ್ಬಾದ್ ವಿಭಾಗವು ತನ್ನ ವಜ್ರಮಹೋತ್ಸವ ಆಚರಣೆಗೆ ಮುಂದಾಗುತ್ತಿರುವಂತೆಯೇ, ಈ ಘಟನೆಯು ಈ ಕಟ್ಟಡದ ಶಿಥಿಲಾವಸ್ಥೆಯ ಬಗ್ಗೆ ಬೆರಳು ಮಾಡಿ ತೋರಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!