AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್: ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ದೊಪ್ಪೆಂದು ಓಟಿ ಟೇಬಲ್ ಮೇಲೆ ಬಿದ್ದ ನಾಯಿ

ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದ ವೇಳೆ ಮೇಲಿಂದ ನಾಯಿಯೊಂದು ಬಿದ್ದು ಆತಂಕ ಸೃಷ್ಟಿಸಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಶಸ್ತ್ರ ಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ನಾಯಿ(Dog)ಯೊಂದು ಓಟಿ ಟೇಬಲ್​ ಮೇಲೆ ಬಿದ್ದು ಗಾಬರಿ ಹುಟ್ಟಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಪುಣ್ಯ ರೋಗಿಯ ಮೈಮೇಲೆ ಬಿದ್ದಿಲ್ಲ ಎಂದು ವೈದ್ಯರು ತೃಪ್ತಿಪಟ್ಟುಕೊಂಡಿದ್ದಾರೆ. ಧನ್‌ಬಾದ್‌ನ ರೈಲ್ವೆ ಆಸ್ಪತ್ರೆಯಲ್ಲಿ ನಡೆದ ಘಟನೆಯಲ್ಲಿ ನರ್ಸ್ ಒಬ್ಬರು ಗಾಯಗೊಂಡಿದ್ದು ಶಸ್ತ್ರಚಿಕಿತ್ಸೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು.

ಜಾರ್ಖಂಡ್: ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ದೊಪ್ಪೆಂದು ಓಟಿ ಟೇಬಲ್ ಮೇಲೆ ಬಿದ್ದ ನಾಯಿ
ಆಸ್ಪತ್ರೆ Image Credit source: IndiaToday
ನಯನಾ ರಾಜೀವ್
|

Updated on: Jul 11, 2025 | 10:39 AM

Share

ಜಾರ್ಖಂಡ್, ಜುಲೈ 11: ಶಸ್ತ್ರ ಚಿಕಿತ್ಸೆ ವೇಳೆ ಸೀಲಿಂಗ್ ಸೀಳಿಕೊಂಡು ನಾಯಿ(Dog)ಯೊಂದು ಓಟಿ ಟೇಬಲ್​ ಮೇಲೆ ಬಿದ್ದು ಗಾಬರಿ ಹುಟ್ಟಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಪುಣ್ಯ ರೋಗಿಯ ಮೈಮೇಲೆ ಬಿದ್ದಿಲ್ಲ ಎಂದು ವೈದ್ಯರು ತೃಪ್ತಿಪಟ್ಟುಕೊಂಡಿದ್ದಾರೆ. ಧನ್‌ಬಾದ್‌ನ ರೈಲ್ವೆ ಆಸ್ಪತ್ರೆಯಲ್ಲಿ ನಡೆದ ಘಟನೆಯಲ್ಲಿ ನರ್ಸ್ ಒಬ್ಬರು ಗಾಯಗೊಂಡಿದ್ದು ಶಸ್ತ್ರಚಿಕಿತ್ಸೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು.

ಮಂಗಳವಾರ ಬೆಳಗ್ಗೆ 11 ಗಂಟೆ ವೇಳೆಗೆ ಮೂಳೆ ಚಿಕಿತ್ಸಾ ವಿಭಾಗದಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿತ್ತು. ಡಾ. ಪಿ.ಆರ್ ಠಾಕೂರ್ ಶಸ್ತ್ರ ಚಿಕಿತ್ಸೆ ಮಾಡುವಾಗ ಇದ್ದಕ್ಕಿದ್ದಂತೆ ದೊಡ್ಡ ಶಬ್ದವೊಂದು ಕೇಳಿಬಂದಿತ್ತು. ಸೀಲಿಂಗ್​​ನಿಂದ ನಾಯಿಯೊಂದು ಓಟಿ ಟೇಬಲ್ ಮೇಲೆ ಬಿದ್ದಿತ್ತು. ಈ ಘಟನೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಸಹಾಯ ಮಾಡುತ್ತಿದ್ದ ನರ್ಸ್​ ಗಾಯಗೊಂಡಿದ್ದು, ಶಸ್ತ್ರ ಚಿಕಿತ್ಸೆಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು.

ನರ್ಸ್​ ಅಂಜಲಿಯ ಭುಜ ಹಾಗೂ ಕುತ್ತಿಗೆಗೆ ಗಾಯಗಳಾಗಿವೆ. ರೋಗಿಯನ್ನು ಬೇರೆವಾರ್ಡ್​​ಗೆ ಶಿಫ್ಟ್​ ಮಾಡಲಾಯಿತು. ಗಾಯಗೊಂಡ ನರ್ಸ್‌ಗೆ ತುರ್ತು ಚಿಕಿತ್ಸೆ ನೀಡಲಾಯಿತು. ಈ ಘಟನೆಯಂದ ನರ್ಸ್​, ವೈದ್ಯರು, ರೋಗಿ ಎಲ್ಲರೂ ಗಾಬರಿಗೊಂಡಿದ್ದಾರೆ.

ಎಂಜಿನಿಯರ್ ಈ ಬಗ್ಗೆ ಪರಿಶೀಲಿಸಿದಾಗ ವೆಂಟಿಲೇಷನ್​ಗಾಗಿ ಬಿಟ್ಟಿದ್ದ ಜಾಗದಿಂದ ನಾಯಿಗಳು ಬಂದು ಸೀಲಿಂಗ್ ಮೇಲೆ ಆಶ್ರಯ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ. ನಾಯಿಯ ತೂಕ ತಡೆಯಲಾಗದೆ ಸೀಲಿಂಗ್ ಮುರಿದುಬಿದ್ದಿದೆ. ಆಪರೇಷನ್ ಥಿಯೇಟರ್ ಗೋಡೆಯ ಪಕ್ಕದಲ್ಲಿದ್ದ ಕಸದ ರಾಶಿಯ ಮೇಲೆ ನಾಯಿ ಹತ್ತಿ ಈ ಸೀಲಿಂಗ್ ಮೇಲೆ ಬಂದು ಮಲಗುತ್ತಿದ್ದವು. ಒಂದು ನಾಯಿ ಬಿದ್ದ ನಂತರವೂ, ಇತರ ನಾಯಿಗಳು ಬೊಗಳುವ ಶಬ್ದವು ಮೇಲೆ ಇನ್ನೂ ಕೇಳಿಬರುತ್ತಿತ್ತು.

ಮತ್ತಷ್ಟು ಓದಿ: ಕಾರು ಲಾಕ್ ಮಾಡಿ ದೇವಸ್ಥಾನದ ಪೂಜೆಗೆ ಹೋದ ಮಾಲೀಕ; ಉಸಿರುಗಟ್ಟಿ ಕಾರೊಳಗೆ ನಾಯಿ ಸಾವು

ಪೂರ್ವ ಮಧ್ಯ ರೈಲ್ವೆಯ ಧನ್ಬಾದ್ ವಿಭಾಗವು ತನ್ನ ವಜ್ರಮಹೋತ್ಸವ ಆಚರಣೆಗೆ ಮುಂದಾಗುತ್ತಿರುವಂತೆಯೇ, ಈ ಘಟನೆಯು ಈ ಕಟ್ಟಡದ ಶಿಥಿಲಾವಸ್ಥೆಯ ಬಗ್ಗೆ ಬೆರಳು ಮಾಡಿ ತೋರಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!