AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ತಪಾಸಣೆ ವೇಳೆ ಮಹಿಳಾ ಪೊಲೀಸ್ ಮೇಲೆ ವ್ಯಾನ್​ ಹತ್ತಿಸಿ ಕೊಲೆ; ಜಾರ್ಖಂಡ್​​ನಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಪೊಲೀಸ್ ಸಬ್​ ಇನ್​ಸ್ಪೆಕ್ಟರ್​​ ಸಂಧ್ಯಾ ಅವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ.

ವಾಹನ ತಪಾಸಣೆ ವೇಳೆ ಮಹಿಳಾ ಪೊಲೀಸ್ ಮೇಲೆ ವ್ಯಾನ್​ ಹತ್ತಿಸಿ ಕೊಲೆ; ಜಾರ್ಖಂಡ್​​ನಲ್ಲಿ ಮತ್ತೊಂದು ಆಘಾತಕಾರಿ ಘಟನೆ
ಜಾರ್ಖಂಡ್ ಪೊಲೀಸ್ ಸಂಧ್ಯಾImage Credit source: India Today
TV9 Web
| Edited By: |

Updated on: Jul 20, 2022 | 10:27 AM

Share

ರಾಂಚಿ: ಜಾರ್ಖಂಡ್‌ನ ರಾಂಚಿಯಲ್ಲಿ (Ranchi) ವಾಹನ ತಪಾಸಣೆಯ ವೇಳೆ ಮಹಿಳಾ ಸಬ್ ಇನ್​ಸ್ಪೆಕ್ಟರ್ ಸಂಧ್ಯಾ ಅವರ ಮೇಲೆ ಪಿಕಪ್ ವ್ಯಾನ್ ಹತ್ತಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಬುಧವಾರ ನಸುಕಿನ ಜಾವ ತುಪುಡಾನಾ ಪ್ರದೇಶದಲ್ಲಿ ನಡೆದಿದೆ. ರಾಂಚಿಯಲ್ಲಿ ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ನಡೆದಿದ್ದು, ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ವಾಹನ ತಪಾಸಣೆಗೆ ತೆರಳಿದ್ದರು. ಅವರ ಮೇಲೆ ವ್ಯಾನ್ ಹತ್ತಿಸಿ ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ರಾಂಚಿ ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಈ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿಎಸ್ಪಿ ಶ್ರೇಣಿಯ ಹರಿಯಾಣ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ಅವರನ್ನು ನುಹ್‌ನಲ್ಲಿ ಗಣಿಗಾರಿಕೆ ಮಾಫಿಯಾದವರು ಹತ್ಯೆ ಮಾಡಿದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಪೊಲೀಸ್ ಸಬ್​ ಇನ್​ಸ್ಪೆಕ್ಟರ್​​ ಸಂಧ್ಯಾ ಅವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Mysore News: ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​​​​ ಸ್ನೇಹಿತನ ಕೊಲೆ ಪ್ರಕರಣ: ಮೂವರು ಆರೋಪಿಗಳು ಅಂದರ್

“ಸಂಧ್ಯಾ ಟೋಪ್ನೋ ಎಂಬ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಇಂದು ಮುಂಜಾನೆ ವಾಹನ ತಪಾಸಣೆಯ ವೇಳೆ ಹತ್ಯೆಗೀಡಾಗಿದ್ದಾರೆ. ಅವರನ್ನು ತುಪುಡಾನ ಓಪಿಯ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ರಾಂಚಿ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಡಿಎಸ್‌ಪಿ ಸುರೇಂದ್ರ ಸಿಂಗ್ ಅವರನ್ನು ಮಂಗಳವಾರ ನುಹ್‌ನ ಪಚ್‌ಗಾಂವ್ ಬಳಿ ಗಣಿ ಮಾಫಿಯಾದವರು ಹತ್ಯೆ ಮಾಡಿದ್ದರು. ಅಕ್ರಮ ಗಣಿಗಾರಿಕೆ ತನಿಖೆ ನಡೆಸುತ್ತಿದ್ದ ಸುರೇಂದ್ರ ಸಿಂಗ್ ಟ್ರಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ತೆರೆದ ಕಸದ ತೊಟ್ಟಿಯಲ್ಲಿ ಅವರ ಶವ ಪತ್ತೆಯಾಗಿತ್ತು.

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್