AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್(CP Radhakrishnan) ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ.

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ
ರಾಧಾಕೃಷ್ಣನ್
Follow us
ನಯನಾ ರಾಜೀವ್
|

Updated on:Mar 19, 2024 | 11:12 AM

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್(CP Radhakrishnan) ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ. ಜಾರ್ಖಂಡ್ ರಾಜ್ಯಪಾಲ ರಾಧಾಕೃಷ್ಣನ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ತೆಲಂಗಾಣ ರಾಜ್ಯಪಾಲರಾಗಿದ್ದ ತಮಿಳ್ ಸಾಯಿ ಸೌಂದರ ರಾಜನ್ ಮುಂಬರುವ ಸಂಸತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದೇ ಕಾರಣಕ್ಕೆ ಅವರು ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ತಮಿಳ್​ಸಾಯಿ ಸೌಂದರರಾಜನ್ ಅವರು ತೂತುಕುಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಪಕ್ಷದ ನಾಯಕತ್ವ ತಮಗೆ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ತಮಿಳ್​ಸಾಯಿ ಸೌಂದರರಾಜನ್ ಇತ್ತೀಚೆಗೆ ಘೋಷಿಸಿದ್ದರು. ಬಿಜೆಪಿ ಹೈಕಮಾಂಡ್ ತಮಿಳ್​ಸಾಯಿ ಸೌಂದರರಾಜನ್ ಅವರಿಗೆ ಯಾವ ಸೀಟು ಹಂಚಿಕೆ ಮಾಡಲಿದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

ಈ ಹಿಂದೆ ಸಿಪಿ ರಾಧಾಕೃಷ್ಣನ್ ಬಿಜೆಪಿಯ ಸದಸ್ಯರಾಗಿದ್ದರು ಮತ್ತು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಲು ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ರಾಧಾಕೃಷ್ಣನ್ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Tamilisai Soundararajan resigns: ಚುನಾವಣೆ ಹೊಸ್ತಿಲಲ್ಲಿ, ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

62 ನೇ ವಯಸ್ಸಿನಲ್ಲಿ, ಸೌಂದರರಾಜನ್ ಅವರು ನವೆಂಬರ್ 2019 ರಲ್ಲಿ ಹೊಸದಾಗಿ ರೂಪುಗೊಂಡ ತೆಲಂಗಾಣ ರಾಜ್ಯದ ಎರಡನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡರು. ನಂತರ, ಫೆಬ್ರವರಿ 2021 ರಲ್ಲಿ, ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಆಗಿ ಸೇವೆ ಸಲ್ಲಿಸುವ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ವಹಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:04 am, Tue, 19 March 24

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ವಿಡಿಯೋ ನೋಡಿ
ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ವಿಡಿಯೋ ನೋಡಿ