AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್(CP Radhakrishnan) ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ.

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್ ನೇಮಕ
ರಾಧಾಕೃಷ್ಣನ್
ನಯನಾ ರಾಜೀವ್
|

Updated on:Mar 19, 2024 | 11:12 AM

Share

ತೆಲಂಗಾಣದ ನೂತನ ರಾಜ್ಯಪಾಲರಾಗಿ ಸಿಪಿ ರಾಧಾಕೃಷ್ಣನ್(CP Radhakrishnan) ಅವರು ನೇಮಕಗೊಂಡಿದ್ದಾರೆ. ರಾಧಾಕೃಷ್ಣನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ. ತಮಿಳ್​ ಸಾಯಿ ಸೌಂದರರಾಜ್ ಅವರ ರಾಜೀನಾಮೆ ಪತ್ರವನ್ನು ಮುರ್ಮು ಅವರು ಅಂಗೀಕರಿಸಿದ ಬಳಿಕ ಈ ನೇಮಕ ಮಾಡಲಾಗಿದೆ. ಜಾರ್ಖಂಡ್ ರಾಜ್ಯಪಾಲ ರಾಧಾಕೃಷ್ಣನ್ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ತೆಲಂಗಾಣ ರಾಜ್ಯಪಾಲರಾಗಿದ್ದ ತಮಿಳ್ ಸಾಯಿ ಸೌಂದರ ರಾಜನ್ ಮುಂಬರುವ ಸಂಸತ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದೇ ಕಾರಣಕ್ಕೆ ಅವರು ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ತಮಿಳ್​ಸಾಯಿ ಸೌಂದರರಾಜನ್ ಅವರು ತೂತುಕುಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಪಕ್ಷದ ನಾಯಕತ್ವ ತಮಗೆ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ತಮಿಳ್​ಸಾಯಿ ಸೌಂದರರಾಜನ್ ಇತ್ತೀಚೆಗೆ ಘೋಷಿಸಿದ್ದರು. ಬಿಜೆಪಿ ಹೈಕಮಾಂಡ್ ತಮಿಳ್​ಸಾಯಿ ಸೌಂದರರಾಜನ್ ಅವರಿಗೆ ಯಾವ ಸೀಟು ಹಂಚಿಕೆ ಮಾಡಲಿದೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.

ಈ ಹಿಂದೆ ಸಿಪಿ ರಾಧಾಕೃಷ್ಣನ್ ಬಿಜೆಪಿಯ ಸದಸ್ಯರಾಗಿದ್ದರು ಮತ್ತು ಕೊಯಮತ್ತೂರಿನಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಲು ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ಧನ್ಯವಾದಗಳು ಎಂದು ರಾಧಾಕೃಷ್ಣನ್ ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Tamilisai Soundararajan resigns: ಚುನಾವಣೆ ಹೊಸ್ತಿಲಲ್ಲಿ, ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

62 ನೇ ವಯಸ್ಸಿನಲ್ಲಿ, ಸೌಂದರರಾಜನ್ ಅವರು ನವೆಂಬರ್ 2019 ರಲ್ಲಿ ಹೊಸದಾಗಿ ರೂಪುಗೊಂಡ ತೆಲಂಗಾಣ ರಾಜ್ಯದ ಎರಡನೇ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡರು. ನಂತರ, ಫೆಬ್ರವರಿ 2021 ರಲ್ಲಿ, ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಆಗಿ ಸೇವೆ ಸಲ್ಲಿಸುವ ಹೆಚ್ಚುವರಿ ಜವಾಬ್ದಾರಿಯನ್ನು ಅವರಿಗೆ ವಹಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:04 am, Tue, 19 March 24

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ