AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮವರಿಗೆ ಲಸಿಕೆ ನೀಡುವಂತೆ ಒತ್ತಾಯ; ಆರೋಗ್ಯ ಅಧಿಕಾರಿ ವಿರುದ್ಧ ದೂರು ದಾಖಲು

ಎಲ್ಲರೂ ಕೂಡ 45 ವರ್ಷಕ್ಕಿಂತ ಕೆಳಗಿನವರು ಆದ್ದರಿಂದ ಇದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಮೀರಿದಂತೆ ಆಗಿದೆ ಎಂದು ಕಡ್ಮ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮನೋಜ್ ಠಾಕುರ್ ಹೇಳಿದ್ದಾರೆ.

ತಮ್ಮವರಿಗೆ ಲಸಿಕೆ ನೀಡುವಂತೆ ಒತ್ತಾಯ; ಆರೋಗ್ಯ ಅಧಿಕಾರಿ ವಿರುದ್ಧ ದೂರು ದಾಖಲು
ಲಸಿಕೆಯ ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Aug 23, 2021 | 12:35 PM

Share

ರಾಂಚಿ: ಲಸಿಕೆ ನೀಡಲು ನಿಗದಿಸಲ್ಪಟ್ಟ ವಯೋಮಾನಕ್ಕಿಂತ ಕಡಿಮೆಯ ಅಂದರೆ, 45 ವರ್ಷದೊಳಗಿನ 35 ಮಂದಿಗೆ ಸರ್ಕಾರ ಸೂಚಿಸುವ ಮೊದಲೇ ಲಸಿಕೆ ನೀಡುವಂತೆ ಒತ್ತಾಯ ಮಾಡಿದ ಕಾರಣ ಜಾರ್ಖಂಡ್​ನ ಜಮ್​ಶೆಡ್​ಪುರ್ ಆರೋಗ್ಯ ಮತ್ತು ವಿಪತ್ತು ನಿರ್ವಹಣಾ ಕಚೇರಿ ಉಸ್ತುವಾರಿ ಬನ್ನಾ ಗುಪ್ತಾ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯದಲ್ಲಿ 45 ವರ್ಷದ ಒಳಗಿನವರಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭವಾಗುವ ಮೂರು ದಿನ ಮೊದಲು ಅಂದರೆ, ಮೇ 11ರಂದು 35 ಜನರಿಗೆ ಲಸಿಕೆ ನೀಡುವಂತೆ ಕೊವಿಡ್ ವ್ಯಾಕ್ಸಿನೇಷನ್ ತಂಡಕ್ಕೆ ಒತ್ತಾಯಿಸಿದ್ದಾರೆ ಎಂಬ ಆರೋಪ ದಾಖಲಾಗಿದೆ.

ಕಡ್ಮ ನ್ಯೂ ಫಾರ್ಮ್ ಏರಿಯಾ ಕಮ್ಯುನಿಟಿ ಹಾಲ್​ನಲ್ಲಿ ಮೇ 11ರಂದು ಸಂಜಯ್ ತಿವಾರಿ ಮತ್ತು 35 ಮಂದಿಗೆ ಲಸಿಕೆ ನೀಡುವಂತೆ ಒತ್ತಾಯಿಸಲಾಗಿದೆ. ಎಲ್ಲರೂ ಕೂಡ 45 ವರ್ಷಕ್ಕಿಂತ ಕೆಳಗಿನವರು ಆದ್ದರಿಂದ ಇದು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಮೀರಿದಂತೆ ಆಗಿದೆ ಎಂದು ಕಡ್ಮ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮನೋಜ್ ಠಾಕುರ್ ಹೇಳಿದ್ದಾರೆ.

ಗುರುವಾರ ಸಂಜೆಯ ವೇಳೆಗೆ ಎಫ್​ಐಆರ್ ದಾಖಲಾಗಿದೆ. ಇನ್ಸಿಡೆಂಟ್ ಕಮಾಂಡರ್ ಹಾಗೂ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಚಂದ್ರದೇವ್ ರಾವ್ ಪ್ರಸಾದ್ ಅವರ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 188, 504 ಮತ್ತು 506, ಆಕ್ಟ್ 51 ಮತ್ತು 60, 61ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಲಸಿಕಾ ಕೇಂದ್ರದ ಮೂವರು ಮಹಿಳಾ ಸದಸ್ಯರ ದೂರನ್ನು ಪರಿಶೀಲಿಸಿ ಅದು ಸರಿ ಎಂದು ಕಂಡ ಬಳಿಕವೇ ಎಫ್​ಐಆರ್ ದಾಖಲಿಸಲಾಗಿದೆ ಎಂದು ಪ್ರಸಾದ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ಪ್ರಸಾದ್ ಮತ್ತೊಂದು ದೂರನ್ನು ಕೂಡ ದಾಖಲಿಸಿದ್ದಾರೆ. ತಿವಾರಿ ಹಾಗೂ 25-30 ಮಂದಿ ಇತರರ ವಿರುದ್ಧ ದೈಹಿಕ ಹಲ್ಲೆ, ಕೆಟ್ಟ ರೀತಿಯ ವರ್ತನೆ ತೋರಿರುವುದಕ್ಕೆ ಹಾಗೂ ಬೆದರಿಕೆಯ ಬಗ್ಗೆ ದೂರು ನೀಡಿದ್ದಾರೆ. ಆದರೆ, ತಿವಾರಿ ಇದೆಲ್ಲವೂ ಆಧಾರ ರಹಿತ ಎಂದು ದೂರನ್ನು ಅಲ್ಲಗಳೆದಿದ್ದಾರೆ. ಲಸಿಕೆ ನೀಡಲು ನಾನು ಯಾರು? ಅಲ್ಲದೆ, 18-44 ವರ್ಷದ ವಯಸ್ಸಿನವರು ಸ್ಲಾಟ್ ಬುಕ್ ಮಾಡದೆ ಲಸಿಕೆ ಪಡೆಯುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Sputnik V: ಸ್ಪುಟ್ನಿಕ್​ ವಿ ಕೊರೊನಾ ಲಸಿಕೆ ಒಂದು ಡೋಸ್​ಗೆ 995.40 ರೂ; ಭಾರತದಲ್ಲಿ ಉತ್ಪಾದನೆ ಆರಂಭವಾದ ನಂತರ ಬೆಲೆ ತಗ್ಗುವ ಸಾಧ್ಯತೆ

ಕೋವಿಶೀಲ್ಡ್ ಲಸಿಕೆ ಸಾಕಾಷ್ಟಿದೆ, ಆದರೆ ಕೋವ್ಯಾಕ್ಸೀನ್ ನಮ್ಮ ಬಳಿ ಇಲ್ಲ: ವೈದ್ಯಾಧಿಕಾರಿ ಡಾ.‌ವೆಂಕಟೇಶಯ್ಯ

Published On - 6:16 pm, Fri, 14 May 21

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು