AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hemant Soren: ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. ಸೋರೆನ್‌ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ" ಎಂದು ವಕೀಲರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

Hemant Soren: ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು
ಹೇಮಂತ್ ಸೊರೇನ್
ರಶ್ಮಿ ಕಲ್ಲಕಟ್ಟ
|

Updated on:Jun 28, 2024 | 12:44 PM

Share

ದೆಹಲಿ ಜೂನ್ 28: ಭೂ ಹಗರಣಕ್ಕೆ ಸಂಬಂಧಿಸಿದ (land scam) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ (Jharkhand HC) ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ (Hemant Soren)  ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಸೊರೇನ್ ಅಪರಾಧದಲ್ಲಿ ಅವರು ತಪ್ಪಿತಸ್ಥರಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ ಎಂದು ಅವರ ವಕೀಲರಾದ ಅರುಣಾಭ್ ಚೌಧರಿ ಹೇಳಿದ್ದಾರೆ. ಸೊರೇನ್‌ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. “ಸೊರೇನ್‌ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ” ಎಂದು ಚೌಧರಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸದ್ಯ ಹೇಮಂತ್ ಸೊರೇನ್ ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ. ಸೊರೇನ್ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ.

ಜನವರಿ 31 ರಂದು ಜಾರಿ ನಿರ್ದೇಶನಾಲಯ ಸೊರೇನ್ ಅವರನ್ನು ಬಂಧಿಸಿತ್ತು.

ಸೊರೇನ್ ಅವರನ್ನು ರಾಜಕೀಯ ಪ್ರೇರಿತ ಮತ್ತು  ಕಲ್ಪಿತ ಎಂದು ವಿವರಿಸಿರುವ ಪ್ರಕರಣದಲ್ಲಿ ಅನ್ಯಾಯವಾಗಿ ಗುರಿಯಾಗಿಸಲಾಗಿದೆ ಎಂದು ಅವರ ವಕೀಲೆ ಮೀನಾಕ್ಷಿ ಅರೋರಾ ವಾದಿಸಿದ್ದರು.

ರಾಜ್ಯ ರಾಜಧಾನಿಯಲ್ಲಿ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ದೆಹಲಿ ಮಳೆಗೆ ಮನೆಗೆ ನುಗ್ಗಿದ ನೀರು, ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ನೋಡಿ

ಅಕ್ರಮ ಭೂ ವ್ಯವಹಾರದಲ್ಲಿ ಹೇಮಂತ್ ಸೊರೇನ್ ಭಾಗಿಯಾಗಿರುವುದನ್ನು ಸಾಕ್ಷಿಗಳು ಖಚಿತಪಡಿಸಿದ್ದಾರೆ. ಸೊರೇನ್ ಅವರ ಮಾಧ್ಯಮ ಸಲಹೆಗಾರ ಅಭಿಷೇಕ್ ಪ್ರಸಾದ್ ಅವರು ಜಮೀನಿನ ಮಾಲೀಕತ್ವದ ವಿವರಗಳನ್ನು ಬದಲಾಯಿಸಲು ಅಧಿಕೃತ ದಾಖಲೆಗಳನ್ನು ತಿರುಚುವಂತೆ ಮಾಜಿ ಸಿಎಂ ಅವರಿಗೆ ಸೂಚನೆ ನೀಡಿದ್ದರು ಎಂದು ಒಪ್ಪಿಕೊಂಡಿದ್ದಾರೆ ಎಂದು ಇಡಿ ವಕೀಲ ಎಸ್‌ವಿ ರಾಜು ಹೇಳಿದ್ದಾರೆ.

ಇಡಿ ಮ್ಯಾರಥಾನ್ ಪ್ರಶ್ನೋತ್ತರ ಅವಧಿಯನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ  ಅವರನ್ನು ಬಂಧಿಸಲಾಗುವುದು ಎಂದು ತಿಳಿದಾಗ ಸೊರೇನ್ ಜನವರಿ 31 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದಾಗ್ಯೂ, ಬಂಧನಕ್ಕೆ ಒಳಗಾದ ಮೊದಲ ಹಾಲಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು, ಅವರು ತಮ್ಮ ಹುದ್ದೆಯನ್ನು ತ್ಯಜಿಸುವವರೆಗೂ ಬಂಧನ ಮೆಮೊವನ್ನು ಸ್ವೀಕರಿಸಲು ನಿರಾಕರಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Fri, 28 June 24

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್