AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್ ನ್ಯಾಯಾಧೀಶರ ಹತ್ಯೆ ಪ್ರಕರಣ; ಸಿಬಿಐನಿಂದ ವಿಶೇಷ ತನಿಖಾ ತಂಡ ರಚನೆ

Jharkhand Judge Death Case: ಜುಲೈ 28ರಂದು ಜಾರ್ಖಂಡ್​ನ ಧನ್ಬಾದ್ ನ್ಯಾಯಾಧೀಶ ಉತ್ತಮ್ ಆನಂದ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆಟೋ ಅವರಿಗೆ ಡಿಕ್ಕಿ ಹೊಡೆದಿತ್ತು. ಈ ಪ್ರಕರಣವನ್ನು ಸಿಬಿಗೆ ತನಿಖೆಗೆ ವಹಿಸಲಾಗಿದೆ.

ಜಾರ್ಖಂಡ್ ನ್ಯಾಯಾಧೀಶರ ಹತ್ಯೆ ಪ್ರಕರಣ; ಸಿಬಿಐನಿಂದ ವಿಶೇಷ ತನಿಖಾ ತಂಡ ರಚನೆ
ಜಾರ್ಖಂಡ್ ನ್ಯಾಯಾಧೀಶರ ಸಾವಿನ ದೃಶ್ಯ
TV9 Web
| Edited By: |

Updated on: Aug 04, 2021 | 9:55 PM

Share

ರಾಂಚಿ: ಜಾರ್ಖಂಡ್​ನ ಧನ್ಬಾದ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ ಅವರಿಗೆ ಆಟೋದಲ್ಲಿ ಗುದ್ದಿ ಕೊಲೆ ಮಾಡಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಅಪಘಾತವೆಂದು ಬಿಂಬಿಸಲು ಆಟೋದಲ್ಲಿ ಗುದ್ದಿ ನ್ಯಾಯಾಧೀಶರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದ್ದು, ತನಿಖೆಗಾಗಿ ಇಂದು 20 ವಿಶೇಷ ಅಧಿಕಾರಿಗಳ ತಂಡವೊಂದನ್ನು ರಚಿಸಲಾಗಿದೆ.

ಜಾರ್ಖಂಡ್​ನ 49 ವರ್ಷದ ಧನ್ಬಾದ್ ನ್ಯಾಯಾಧೀಶರ ಹಿಟ್ ಆ್ಯಂಡ್ ರನ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕಳೆದ ಶನಿವಾರ ನಿರ್ಧರಿಸಿದ್ದರು. ಜುಲೈ 28ರಂದು ನ್ಯಾಯಾಧೀಶ ಉತ್ತಮ್ ಆನಂದ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆಟೋವೊಂದು ಅವರಿಗೆ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರ ಸ್ಥಳದಲ್ಲೇ ಮೃತಪಟ್ಟಿದ್ದರು. ಇದೊಂದು ಅಪಘಾತ ಎಂದು ಮೊದಲು ನಂಬಲಾಗಿತ್ತು. ಆದರೆ, ಸಿಸಿಟಿವಿ ದೃಶ್ಯಾವಳಿಯನ್ನು ನೋಡಿದಾಗ ಇದು ಪೂರ್ವನಿರ್ಧರಿತ ಕೊಲೆ ಎಂಬುದು ಖಚಿತವಾಗಿತ್ತು.

ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಘಟನೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಆಟೋ ಚಾಲಕ ಉದ್ದೇಶಪೂರ್ವಕವಾಗಿ ಉತ್ತಮ್ ಆನಂದ್ ಅವರಿಗೆ ಡಿಕ್ಕಿ ಹೊಡೆದಿದ್ದಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಡಿಕ್ಕಿ ಹೊಡೆದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಇದರ ಮಾಲೀಕರಿಂದ ಆಟೋವನ್ನು ಕದ್ದು ತಂದು ನ್ಯಾಯಾಧೀಶರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್​ ತನಿಖೆಯಿಂದ ವಿಷಯ ಬೆಳಕಿಗೆ ಬಂದಿತ್ತು.

ನ್ಯಾಯಾಧೀಶ ಉತ್ತಮ್​ ಆನಂದ್​, ಇತ್ತೀಚೆಗೆ ಹೈಪ್ರೊಫೈಲ್ ಕೇಸ್​ವೊಂದರ ವಿಚಾರಣೆ ನಡೆಸಿದ್ದರು. ಅದರಲ್ಲಿ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಇದೇ ಸಿಟ್ಟಿಗೆ ಹತ್ಯೆ ಮಾಡಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಇತ್ತೀಚೆಗಷ್ಟೇ ಮಾಜಿ ಶಾಸಕರ ಆಪ್ತರಾಗಿದ್ದ ರಂಜಯ್ ಕೊಲೆ ಪ್ರಕರಣದಂತಹ ಹಲವಾರು ಪ್ರಮುಖ ಪ್ರಕರಣಗಳ ವಿಚಾರಣೆ ನಡೆಸಿದ್ದರು. ಅಲ್ಲದೇ ಆರೋಪಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದರು. ಹೀಗಿರುವಾಗಲೇ ಈ ಘಟನೆ ಸಂಭವಿಸಿದ್ದು, ಆಟೋ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದೆ ಎಂದು ಮೃತ ನ್ಯಾಯಾಧೀಶರ ತಂದೆ ಸದಾನಂದ್ ಪ್ರಸಾದ್ ಆರೋಪಿಸಿದ್ದರು.

ಸಿಬಿಐನಿಂದ ರಚಿಸಲ್ಪಟ್ಟಿರುವ ವಿಶೇಷ ತನಿಖಾಧಿಕಾರಿಗಳ ತಂಡದ ಜೊತೆ ದೆಹಲಿಯ ಸೆಂಟ್ರಲ್ ಫಾರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ಎಕ್ಸ್​ಪರ್ಟ್ ಕೂಡ ಇದ್ದಾರೆ. ಇಂದು ಸಿಬಿಐ ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದ್ದು, ಶೀಘ್ರದಲ್ಲೇ ಈ ಸಾವಿನ ಹಿಂದಿನ ಅಸಲಿ ವಿಷಯ ಬಯಲಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಜಾರ್ಖಂಡ್​ ನ್ಯಾಯಾಧೀಶರ ಹತ್ಯೆ ಪ್ರಕರಣದ ತನಿಖೆ ಸಿಬಿಐಗೆ ನೀಡಲು ಸಿಎಂ ಹೇಮಂತ್​ ಸೊರೆನ್​ ನಿರ್ಧಾರ

ಜಾರ್ಖಂಡ ನ್ಯಾಯಾಧೀಶರು ಸತ್ತಿದ್ದು ಅಪಘಾತದಿಂದಲ್ಲ.. ಅವರದ್ದು ಹತ್ಯೆ; ಸಿಸಿಟಿವಿ ಫೂಟೇಜ್​ ಬಿಚ್ಚಿಟ್ಟ ಭಯಾನಕ ಸತ್ಯ, ಶಾಕಿಂಗ್​ ದೃಶ್ಯ ವೈರಲ್

(Jharkhand Judge Death CBI forms SIT to probe into death of Dhanbad district judge Hit and Run Case)

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ