AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ ನ್ಯಾಯಾಧೀಶರು ಸತ್ತಿದ್ದು ಅಪಘಾತದಿಂದಲ್ಲ.. ಅವರದ್ದು ಹತ್ಯೆ; ಸಿಸಿಟಿವಿ ಫೂಟೇಜ್​ ಬಿಚ್ಚಿಟ್ಟ ಭಯಾನಕ ಸತ್ಯ, ಶಾಕಿಂಗ್​ ದೃಶ್ಯ ವೈರಲ್

Jharkhand Judge Murder: ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಟೋ ಚಾಲಕನೊಬ್ಬನನ್ನು ಗಿರಿಡಿಹ್​ ಪೊಲೀಸರು ಬಂಧಿಸಿದ್ದಾರೆ. ಹಾಗೇ, ಈತನ ಇಬ್ಬರು ಸಹಾಯಕರನ್ನೂ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಜಾರ್ಖಂಡ ನ್ಯಾಯಾಧೀಶರು ಸತ್ತಿದ್ದು ಅಪಘಾತದಿಂದಲ್ಲ.. ಅವರದ್ದು ಹತ್ಯೆ; ಸಿಸಿಟಿವಿ ಫೂಟೇಜ್​ ಬಿಚ್ಚಿಟ್ಟ ಭಯಾನಕ ಸತ್ಯ, ಶಾಕಿಂಗ್​ ದೃಶ್ಯ ವೈರಲ್
ಮೃತ ನ್ಯಾಯಾಧೀಶ ಉತ್ತಮ್ ಆನಂದ್​
TV9 Web
| Edited By: |

Updated on:Jul 29, 2021 | 1:06 PM

Share

ಜಾರ್ಖಂಡ್​ನ ಧನ್​ಬಾದ್​ನ ಹೆಚ್ಚುವರಿ ಮತ್ತು ಸೆಷನ್ಸ್​ ನ್ಯಾಯಾಧೀಶ (Jharkhand Judge) ಉತ್ತಮ್ ಆನಂದ್ (Uttam Anand)​ ಅವರು ಇಂದು ಬೆಳಗ್ಗೆ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ, ವಾಹನವೊಂದು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಇದರ ಸಿಸಿಟಿವಿ ದೃಶ್ಯ (CCTV Footage) ಸೆರೆಯಾಗಿದ್ದು, ಅಪರಿಚಿತ ಟೆಂಪೋ​ವೊಂದು ಉದ್ದೇಶಪೂರ್ವಕವಾಗಿಯೇ ಅವರಿಗೆ ಡಿಕ್ಕಿಹೊಡೆದಿದ್ದು ಸ್ಪಷ್ಟವಾಗಿ ಕಾಣಿಸುತ್ತದೆ. ಸದ್ಯ ಈ ಪ್ರಕರಣದ ತನಿಖೆ ಪ್ರಾರಂಭವಾಗಿದೆ. ಇನ್ನು ಹಾಡುಹಗಲಲ್ಲಿ ಈ ನ್ಯಾಯಾಧೀಶರನ್ನು ಹತ್ಯೆ ಮಾಡಿದ ವಿಚಾರವನ್ನು ಸುಪ್ರೀಂಕೋರ್ಟ್ ಬಾರ್​ ಅಸೋಸಿಯೇಶನ್​ನ ಹಿರಿಯ ನ್ಯಾಯವಾದಿ ವಿಕಾಸ್​ ಸಿಂಗ್ ಅವರು, ಸುಪ್ರೀಂಕೋರ್ಟ್(Supreme Court)​ನ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದ​ ​ಗಮನಕ್ಕೂ ತಂದಿದ್ದಾರೆ. ಹಾಗೇ, ನ್ಯಾಯಾಂಗ ವ್ಯವಸ್ಥೆಯ ಮೇಲೆ ನಡೆದ ನಿರ್ದಾಕ್ಷಿಣ್ಯ ದಾಳಿ ಇದು. ಕೂಡಲೇ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದೂ ಹೇಳಿದ್ದಾರೆ.

ಇನ್ನು ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಂಜಾನೆ 5ಗಂಟೆ ಹೊತ್ತಿಗೆ ನ್ಯಾಯಾಧೀಶ ಉತ್ತಮ್​ ಆನಂದ್ ರಸ್ತೆಯ ಒಂದು ಬದಿಯಲ್ಲಿ ಜಾಗಿಂಗ್ ಮಾಡುತ್ತ ಹೋಗುತ್ತಿರುತ್ತಾರೆ. ಹಿಂದಿನಿಂದ ಬಂದ ಟೆಂಪೋವಾಹನ ಬೇಕಂತಲೇ ಜಡ್ಜ್​ ಕಡೆಗೆ ಹೋಗಿ ಅವರಿಗೆ ಡಿಕ್ಕಿ ಹೊಡೆದು, ವೇಗವಾಗಿ ಮುಂದೆ ಹೋಗುತ್ತದೆ. ಈ ಸಿಸಿಟಿವಿ ಫೂಟೇಜ್ ಸಿಗುವುದಕ್ಕೂ ಮೊದಲು ನ್ಯಾಯಾಧೀಶರು ಸತ್ತಿದ್ದು ರಸ್ತೆ ಅಪಘಾತದಲ್ಲಿ ಎಂದೇ ಹೇಳಲಾಗಿತ್ತು. ಆದರೆ ಸಿಸಿಟಿವಿ ಫೂಟೇಜ್​ ಈ ಭಾಯನಕ ಸತ್ಯವನ್ನು ಬಿಚ್ಚಿಟ್ಟಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಟೋ ಚಾಲಕನೊಬ್ಬನನ್ನು ಗಿರಿಡಿಹ್​ ಪೊಲೀಸರು ಬಂಧಿಸಿದ್ದಾರೆ. ಹಾಗೇ, ಈತನ ಇಬ್ಬರು ಸಹಾಯಕರನ್ನೂ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಕ್ಕಿಯಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಇದರ ಮಾಲೀಕರು ಬೇರೆ..ಕದ್ದು ತಂದು ನ್ಯಾಯಾಧೀಶರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್​ ತನಿಖೆಯಿಂದ ವಿಷಯ ಬೆಳಕಿಗೆ ಬಂದಿದೆ. ನ್ಯಾಯಾಧೀಶ ಉತ್ತಮ್​ ಆನಂದ್​, ಇತ್ತೀಚೆಗೆ ಹೈಪ್ರೊಫೈಲ್ ಕೇಸ್​ವೊಂದರ ವಿಚಾರಣೆ ನಡೆಸಿದ್ದರು. ಅದರಲ್ಲಿ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಇದೇ ಸಿಟ್ಟಿಗೆ ಹತ್ಯೆ ಮಾಡಿರಬಹುದೆಂದು ಪೊಲೀಸರು ಹೇಳಿದ್ದಾರೆ.

ಸಿಜೆಐ ಗಮನಕ್ಕೆ ಕೇಸ್ ಜಾರ್ಖಂಡ ಜಡ್ಜ್​ ಹತ್ಯೆ ಪ್ರಕರಣವನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​. ವಿ.ರಮಣ ಗಂಭೀರವಾಗಿ ಪರಿಗಣಿಸಿದ್ದಾರೆ. ಹತ್ಯೆ ಬಗ್ಗೆ ತನಿಖೆ ನಡೆಯುತ್ತಿದೆ. ಜಾರ್ಖಂಡ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರೊಂದಿಗೆ ಮಾತನಾಡಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ತನಿಖೆ ಮುಂದುವರಿಯಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಆರ್​​ಟಿ ನಗರದ ಈ ರಸ್ತೆಯಿಂದ ಮೂವರಿಗೆ ಕರ್ನಾಟಕದ ಮುಖ್ಯಮಂತ್ರಿ ಭಾಗ್ಯ! ಏನಿದು ವಾಸ್ತು ಲೆಕ್ಕಾಚಾರ?

Jharkhand judge death is not by Accident it is murder CCTV Footage viral

Published On - 1:04 pm, Thu, 29 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ