AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ ಜಡ್ಜ್​ ಹತ್ಯೆ ಪ್ರಕರಣ; ಉದ್ದೇಶ ಪೂರ್ವಕವಾಗಿಯೇ ಅಪಘಾತ ಮಾಡಲಾಗಿದೆ ಎಂದ ಸಿಬಿಐ

ಪ್ರಕರಣದಲ್ಲಿ ಸದ್ಯ ಆರೋಪಿಗಳಾದ ವಾಹನ ಚಾಲಕ ಲಖನ್​ ವರ್ಮಾ ಮತ್ತು ಸಹಾಯಕ ರಾಹುಲ್​ ವರ್ಮಾ ಬಂಧಿತರಾಗಿದ್ದಾರೆ. ಅಪಘಾತಕ್ಕೆ ಇವರು ಬಳಸಿದ ವಾಹನ ಓರ್ವ ಮಹಿಳೆಯ ಹೆಸರಲ್ಲಿ ನೋಂದಣಿಯಾಗಿದೆ.

ಜಾರ್ಖಂಡ ಜಡ್ಜ್​ ಹತ್ಯೆ ಪ್ರಕರಣ; ಉದ್ದೇಶ ಪೂರ್ವಕವಾಗಿಯೇ ಅಪಘಾತ ಮಾಡಲಾಗಿದೆ ಎಂದ ಸಿಬಿಐ
ಜಾರ್ಖಂಡ್ ಜಡ್ಜ್​ ಹತ್ಯೆಗೆ ಬಳಸಲಾದ ವಾಹನ
TV9 Web
| Edited By: |

Updated on:Sep 23, 2021 | 4:08 PM

Share

ರಾಂಚಿ: ಜಾರ್ಖಂಡ ಜಿಲ್ಲಾ ಸೆಷನ್ಸ್​ ನ್ಯಾಯಾಧೀಶ ಉತ್ತಮ್​ ಆನಂದ್​​ ಅವರಿಗೆ ಉದ್ದೇಶ ಪೂರ್ವಕವಾಗಿಯೇ ಅಪಘಾತ ಮಾಡಿ ಕೊಲ್ಲಲಾಗಿದೆ ಎಂದು ಸಿಬಿಐ ಜಾರ್ಖಂಡ ಹೈಕೋರ್ಟ್​ಗೆ ಗುರುವಾರ ತಿಳಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಪ್​ಡೇಟ್​ ವರದಿಯನ್ನು ಸಲ್ಲಿಸಿದೆ. ಉತ್ತಮ್​ ಆನಂದ್​ ಅವರನ್ನು ಜುಲೈನಲ್ಲಿ ಹತ್ಯೆ ಮಾಡಲಾಗಿತ್ತು. ಮುಂಜಾನೆ ರಸ್ತೆ ಬದಿಯಲ್ಲಿ ಜಾಗಿಂಗ್​ ಮಾಡುತ್ತಿದ್ದ ಅವರಿಗೆ ವಾಹನವೊಂದು ಬೇಕೆಂದೇ ಹೋಗಿ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. 

ಸಿಸಿಟಿವಿ ಫೂಟೇಜ್​​ನ್ನು ಸಿಬಿಐ 3ಡಿ ತಂತ್ರಾಂಶದ ಮೂಲಕ ಪರಿಶೀಲನೆ ಮಾಡಿದೆ. ಹಾಗೇ, ವಿಧಿವಿಜ್ಞಾನ ಪುರಾವೆಗಳೂ ಸಹ, ನ್ಯಾಯಾಧೀಶರನ್ನು ಉದ್ದೇಶಪೂರ್ವಕವಾಗಿಯೇ ಕೊಲೆ ಮಾಡಲಾಗಿದೆ ಎಂಬುದನ್ನು ಸೂಚಿಸುತ್ತವೆ ಎಂದು ಸಿಬಿಐ ಹೇಳಿದೆ.  ಇನ್ನು ಸಾಕ್ಷಿಗಳನ್ನು ವಿಶ್ಲೇಷಿಸಲು ಸಿಬಿಐ ಗುಜರಾತ್​ನ ಗಾಂಧಿನಗರ, ದೆಹಲಿ ಮತ್ತು ಮುಂಬೈನಲ್ಲಿ ಒಟ್ಟೂ ನಾಲ್ಕು ವಿಧಿವಿಜ್ಞಾನ ತಂಡಗಳನ್ನು ಹೊಂದಿದೆ. ಈ ನಾಲ್ಕೂ ತಂಡಗಳೂ ಕೂಡ ನ್ಯಾಯಾಧೀಶರನ್ನು ಉದ್ದೇಶಪೂರ್ವಕವಾಗಿಯೇ ಹತ್ಯೆ ಮಾಡಿದ್ದಾಗಿ ಹೇಳಿವೆ ಎಂದು ಮೂಲಗಳು ತಿಳಿಸಿವೆ.

ಮೂರ್ನಾಲ್ಕು ಹೈಪ್ರೊಫೈಲ್ ಪ್ರಕರಣಗಳ ವಿಚಾರಣೆ ನಡೆಸಿದ್ದ ಉತ್ತಮ್​ ಆನಂದ್ ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಅವರು ಮೃತಪಟ್ಟಿದ್ದರು. ಮೊದಲು ಅದೊಂದು ಆಕಸ್ಮಿಕ ಅಪಘಾತ ಎಂದು ಹೇಳಲಾಗಿದ್ದರೂ, ಸಿಸಿಟಿವಿ ಫೂಟೇಜ್​​ನಿಂದಾಗಿ ಸತ್ಯ ಹೊರಬಿದ್ದಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರಿಂಕೋರ್ಟ್ ಕೂಡ ಆಗ್ರಹಿಸಿತ್ತು. ಇದೀಗ ತನಿಖೆ ನಡೆಸುತ್ತಿರುವ ಸಿಬಿಐ, ಆರೋಪಿಗನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇಬ್ಬರು ಆರೋಪಿಗಳ ಮೇಲೆ ಗುಜರಾತ್​ನಲ್ಲಿ ಸುಳ್ಳು ಪತ್ತೆ ಪರೀಕ್ಷೆಗಳನ್ನು ನಡೆಸಿದೆ. ಹಲವು ಆಯಾಮಗಳಲ್ಲಿ ಕೇಸ್​​ನ್ನು ತನಿಖೆ ಮಾಡುತ್ತಿದೆ ಎಂದು ಹೇಳಲಾಗಿದೆ.

ಪ್ರಕರಣದಲ್ಲಿ ಸದ್ಯ ಆರೋಪಿಗಳಾದ ವಾಹನ ಚಾಲಕ ಲಖನ್​ ವರ್ಮಾ ಮತ್ತು ಸಹಾಯಕ ರಾಹುಲ್​ ವರ್ಮಾ ಬಂಧಿತರಾಗಿದ್ದಾರೆ. ಅಪಘಾತಕ್ಕೆ ಇವರು ಬಳಸಿದ ವಾಹನ ಓರ್ವ ಮಹಿಳೆಯ ಹೆಸರಲ್ಲಿ ನೋಂದಣಿಯಾಗಿದೆ ಎನ್ನಲಾಗಿದೆ. ಅಷ್ಟೇ ಅಲ್ಲ, ಈ ಆರೋಪಿಗಳು ಜಡ್ಜ್​ ಹತ್ಯೆಯ ಮುನ್ನಾದಿನ ಕೆಲವು ಮೊಬೈಲ್​ಗಳನ್ನು ಕಳವು ಮಾಡಿದ್ದರು. ಅದರ ಮೂಲಕವೇ ಮಾತನಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ನಿಗೂಢ ಸ್ಫೋಟ ಪ್ರಕರಣ: ಗೋದಾಮು ಮಾಲೀಕ ಪೊಲೀಸರ ವಶಕ್ಕೆ; ಒಬ್ಬ ಗಾಯಾಳು ಸ್ಥಿತಿ ಗಂಭೀರ

ನ್ಯೂತರಗುಪೇಟೆ ಸ್ಫೋಟ: ಮೃತರ ಕುಟುಂಬಕ್ಕೆ 2ಲಕ್ಷ ರೂ. ಪರಿಹಾರ ಘೋಷಿಸಿದ ಜಮೀರ್ ಅಹ್ಮದ್; ಪ್ರತ್ಯಕ್ಷದರ್ಶಿಗಳ ಮಾಹಿತಿ ಲಭ್ಯ

(Jharkhand Judge Intentionally Hit By Autorickshaw says CBI)

Published On - 4:06 pm, Thu, 23 September 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ