AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭ ಎಂಬ ಪದ ಕೇಳುತ್ತಿದ್ದಂತೆ ಮರಳಿದ ನೆನಪಿನ ಶಕ್ತಿ, 15 ವರ್ಷಗಳ ಬಳಿಕ ಮನೆ ಸೇರಿದ ವ್ಯಕ್ತಿ

ಮಹಾಕುಂಭ ಎಂಬ ಪದ ಕೇಳುತ್ತಿದ್ದಂತೆ 15 ವರ್ಷಗಳಿಂದ ನೆನಪಿನ ಶಕ್ತಿ ಕಳೆದುಕೊಂಡು ಬದುಕುತ್ತಿದ್ದ ವ್ಯಕ್ತಿಗೆ ಎಲ್ಲವೂ ನೆನಪಿಗೆ ಬಂದಿದ್ದು, ತನ್ನ ಕುಟುಂಬದವರನ್ನು ಅರಸಿ ಊರಿಗೆ ತೆರಳಿದ್ದಾರೆ. ಇದನ್ನು ಎಲ್ಲರೂ ಪವಾಡವೆಂದೇ ಹೇಳುತ್ತಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ಕಾಣೆಯಾಗಿದ್ದ ಜಾರ್ಖಂಡ್​ ವ್ಯಕ್ತಿ ಈಗ ಮರಳಿ ಮನೆಗೆ ಬಂದಿದ್ದಾರೆ. ಕೊಡೆರ್ಮಾ ನಿವಾಸಿ ಪ್ರಕಾಶ್ ಮಹಾತೋ ​​ಅವರು ಕೆಲಸದ ನಿಮಿತ್ತ ಕೋಲ್ಕತ್ತಾಗೆ ಹೋಗುವಾಗ ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೂ ಅಲ್ಲೆಲ್ಲೋ ಕಣ್ಮರೆಯಾಗಿದ್ದರು.

ಮಹಾಕುಂಭ ಎಂಬ ಪದ ಕೇಳುತ್ತಿದ್ದಂತೆ ಮರಳಿದ ನೆನಪಿನ ಶಕ್ತಿ, 15 ವರ್ಷಗಳ ಬಳಿಕ ಮನೆ ಸೇರಿದ ವ್ಯಕ್ತಿ
ಪ್ರಕಾಶ್ ಮಹತೋImage Credit source: News 18
ನಯನಾ ರಾಜೀವ್
|

Updated on: Feb 10, 2025 | 8:07 AM

Share

ಮಹಾಕುಂಭ ಎಂಬ ಪದ ಕೇಳುತ್ತಿದ್ದಂತೆ 15 ವರ್ಷಗಳಿಂದ ನೆನಪಿನ ಶಕ್ತಿ ಕಳೆದುಕೊಂಡು ಬದುಕುತ್ತಿದ್ದ ವ್ಯಕ್ತಿಗೆ ಎಲ್ಲವೂ ನೆನಪಿಗೆ ಬಂದಿದ್ದು, ತನ್ನ ಕುಟುಂಬದವರನ್ನು ಅರಸಿ ಊರಿಗೆ ತೆರಳಿದ್ದಾರೆ. ಇದನ್ನು ಎಲ್ಲರೂ ಪವಾಡವೆಂದೇ ಹೇಳುತ್ತಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ಕಾಣೆಯಾಗಿದ್ದ ಜಾರ್ಖಂಡ್​ ವ್ಯಕ್ತಿ ಈಗ ಮರಳಿ ಮನೆಗೆ ಬಂದಿದ್ದಾರೆ.

ಕೊಡೆರ್ಮಾ ನಿವಾಸಿ ಪ್ರಕಾಶ್ ಮಹಾತೋ ​​ಅವರು ಕೆಲಸದ ನಿಮಿತ್ತ ಕೋಲ್ಕತ್ತಾಗೆ ಹೋಗುವಾಗ ಅವರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೂ ಅಲ್ಲೆಲ್ಲೋ ಕಣ್ಮರೆಯಾಗಿದ್ದರು. ಈಗ ಮಹಾಕುಂಭ ಎಂಬ ಪದವನ್ನು ಕೇಳಿದಾಕ್ಷಣ ಇದ್ದಕ್ಕಿಂತದ್ದಂತೆ ಅವರ ನೆನಪಿನ ಶಕ್ತಿ ಮರಳಿದ್ದು, ಕೂಡಲೇ ಊರನ್ನು ಹುಡುಕಿಕೊಂಡು ತೆರಳಿದ್ದಾರೆ ಎಂದು ನ್ಯೂಸ್​18 ವರದಿ ಮಾಡಿದೆ.

ಮಹಾತೋ ​​ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಉದ್ಯೋಗದಲ್ಲಿದ್ದರು ಮತ್ತು ಮೇ 9, 2010 ರಂದು ನಾಪತ್ತೆಯಾಗಿದ್ದರು. ಅವರ ಕುಟುಂಬವು ಅವರು ಕಾಣೆಯಾಗಿದ್ದಾರೆ ಎಂದು ಮಾರ್ಕಾಚೊ ಪೊಲೀಸರಿಗೆ ದೂರು ನೀಡಿತು, ಅವರು ವ್ಯಾಪಕ ಹುಡುಕಾಟ ನಡೆಸಿದರು, ಆದರೆ ಒಂದು ದಶಕಕ್ಕೂ ಹೆಚ್ಚು ಕಾಲ ಅವರು ಪತ್ತೆಯಾಗಿರಲಿಲ್ಲ.

ಮತ್ತಷ್ಟು ಓದಿ: ಮಹಾಕುಂಭ ಮೇಳದಲ್ಲಿ 3 ದಿನಗಳ ಕಾಲ ಅಂತಾರಾಷ್ಟ್ರೀಯ ಪಕ್ಷಿ ಉತ್ಸವ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯೋಜನೆಗಳನ್ನು ಮಹತೋ ಎದುರು ಕೆಲವರು ಚರ್ಚಿಸುತ್ತಿರುವಾಗ, ಮಹತ್ವದ ತಿರುವು ಸಿಕ್ಕಿತ್ತು, ಮಾತು ಕತೆ ಸಮಯದಲ್ಲಿ ತಮ್ಮ ಮನೆ ಅದೇ ಮಾರ್ಗದಲ್ಲಿದ್ದು, ತಾವು ಕೂಡ ಕುಂಭ ಮೇಳಕ್ಕೆ ಹೋಗಬೇಕು ಎಂದು ಹೇಳಲು ಶುರು ಮಾಡಿದ್ದರು.

ಅಲ್ಲಿದ್ದವರು ಕೂಡಲೇ ಮಹತೋ ಬಳಿ ಮಾಹಿತಿ ಪಡೆದು, ಮಾರ್ಕಾಚೋ ಪೊಲೀಸರಿಗೆ ಮಾಹಿತಿ ನೀಡಿ ಕೊನೆಗೂ ಕುಟುಂಬದವರ ಜತೆ ಒಂದಾಗುವಂತೆ ಮಾಡಿದರು. ಅವರು 10 ವರ್ಷವಾದರೂ ಸಿಕ್ಕಿರಲಿಲ್ಲವೆಂದು ಕುಟುಂಬವು ಇತ್ತೀಚೆಗಷ್ಟೇ ಮರಣ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ