AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand: ಹೋಳಿಯಂದು ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ, ಬಣ್ಣ ಹಚ್ಚಿಕೊಂಡು, ಬಾಟಲಿ ಹಿಡಿದು ತೂರಾಡಿದ ಐವರು ಪೊಲೀಸರ ಅಮಾನತು

ಹೋಳಿ ಹಬ್ಬದಂದು ಪೊಲೀಸ್ ಠಾಣೆಯಲ್ಲೇ ಮದ್ಯಪಾನ ಮಾಡಿ, ಬಣ್ಣ ಹಚ್ಚಿಕೊಂಡು ತೂರಾಡಿದ್ದ ಐವರು ಪೊಲೀಸರನ್ನು ಅಮಾನತುಗೊಳಿಸಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.

Jharkhand: ಹೋಳಿಯಂದು ಪೊಲೀಸ್ ಠಾಣೆಯಲ್ಲೇ ಎಣ್ಣೆ ಪಾರ್ಟಿ, ಬಣ್ಣ ಹಚ್ಚಿಕೊಂಡು, ಬಾಟಲಿ ಹಿಡಿದು ತೂರಾಡಿದ ಐವರು ಪೊಲೀಸರ ಅಮಾನತು
ಅಮಾನತುಗೊಂಡ ಪೊಲೀಸರುImage Credit source: India Today
ನಯನಾ ರಾಜೀವ್
|

Updated on:Mar 10, 2023 | 8:26 AM

Share

ಹೋಳಿ ಹಬ್ಬದಂದು ಪೊಲೀಸ್ ಠಾಣೆಯಲ್ಲೇ ಮದ್ಯಪಾನ ಮಾಡಿ, ಬಣ್ಣ ಹಚ್ಚಿಕೊಂಡು ತೂರಾಡಿದ್ದ ಐವರು ಪೊಲೀಸರನ್ನು ಅಮಾನತುಗೊಳಿಸಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ, ಮಹಾಗಾಮಾ ಪೊಲೀಸ್ ಠಾಣೆಯೊಳಗೆ ಹೋಳಿ ಆಚರಿಸುವಾಗ ಮದ್ಯ ಸೇವಿಸಿ ನೃತ್ಯ ಮಾಡಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ವೀಡಿಯೊದಲ್ಲಿ, ಕೆಲವು ಪೊಲೀಸರು ಹೋಳಿ ಹಾಡಿಗೆ ಡ್ಯಾನ್ಸ್ ಮಾಡುವುದನ್ನು ಕಂಡುಬಂದಿತ್ತು. ಮದ್ಯ ಸೇವಿಸಿ ಪರಸ್ಪರ ಬಣ್ಣಗಳನ್ನು ಹಚ್ಚಿಕೊಳ್ಳುತ್ತಾರೆ. ವ್ಯಕ್ತಿಯೊಬ್ಬ ಮದ್ಯದ ಲೋಟವನ್ನು ತಲೆಯ ಮೇಲೆ ಇಟ್ಟು ಡ್ಯಾನ್ಸ್ ಮಾಡುತ್ತಿರುವುದು ಕೂಡ ಕಂಡು ಬಂದಿದೆ. ಅವರಲ್ಲಿ ಕೆಲವರು ಸಮವಸ್ತ್ರದಲ್ಲಿದ್ದರು.

ಮತ್ತಷ್ಟು ಓದಿ: Bengaluru News: ಹಣಕೀಳಲು ವ್ಯಕ್ತಿಯೊಬ್ಬರ ಬ್ಯಾಗ್​ನಲ್ಲಿ ಗಾಂಜಾ ಇಟ್ಟ ಇಬ್ಬರು ಕಾನ್ಸ್​ಟೆಬಲ್​ಗಳು ಅಮಾನತು

ಪೊಲೀಸ್ ವರಿಷ್ಠಾಧಿಕಾರಿ ನಾಥು ಸಿಂಗ್ ಮೀನಾ ಅವರು ಘಟನೆಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಜಾರಿಗೆ ಬರುವಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡಿರುವ ಪೊಲೀಸರಲ್ಲಿ ಇಬ್ಬರು ಎಎಸ್‌ಐಗಳು ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ. ಅವರೆಂದರೆ ಬಿಪಿನ್ ಬಿಹಾರಿ ರೈ, ರಾಧಾ ಕೃಷ್ಣ ಸಿಂಗ್, ಸತ್ಯೇಂದ್ರ ನಾರಾಯಣ ಸಿಂಗ್, ಕೃಷ್ಣ ಕುಮಾರ್ ಸಿಂಗ್ ಮತ್ತು ಪ್ಯಾರೆ ಮೋಹನ್ ಸಿಂಗ್.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:25 am, Fri, 10 March 23

Follow Us
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!
ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ!
ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ
ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಮನೆಗೆ ನುಗ್ಗಿದ ನೀರು: ಭಾರಿ ಅವಾಂತರ
VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್
VIDEO: ಬ್ಯಾಟ್ಸ್​ಮನ್​ನಿಂದ ಗಾಯಗೊಂಡ ಶ್ರೇಯಸ್ ಅಯ್ಯರ್
ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು
ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಬೆಳ್ಳಂ ಬೆಳಿಗ್ಗೆ ಮಠಕ್ಕೆ ಭಕ್ತರ ದಂಡು
ಎಡ ತಿರುವಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ
ಎಡ ತಿರುವಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಹೊತ್ತಿಕೊಂಡ ಬೆಂಕಿ
ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?
ನೀವು ಸತ್ತಂತೆ ಕನಸು ಕಂಡಿದ್ದೀರಾ? ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ದಿನ
ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ
ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ
ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ
ನಾನು ಹುಟ್ಟಿದ್ದು ದೇಶಕ್ಕೆ ಸ್ವಾತಂತ್ರ್ಯ ಬಂದ ಮೂರು ತಿಂಗಳ ನಂತರ
ಗ್ಯಾಸ್ ಟ್ರಬಲ್: ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ
ಗ್ಯಾಸ್ ಟ್ರಬಲ್: ಅರಣ್ಯದಲ್ಲಿ ಸೌದೆಗಾಗಿ ಮುಗಿಬಿದ್ದ ಜನ