AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿ ಚಂಪೈ ಸೊರೆನ್ ಪತ್ರ

ಜಾರ್ಖಂಡ್​​ನ ನೂತನ ಮುಖ್ಯಮಂತ್ರಿ ಆದಿ ಜೆಎಂಎಂ ಪಕ್ಷ ಘೋಷಣೆ ಮಾಡಿರುವ ಚಂಪೈ ಸೊರೆನ್ ರಾಜ್ಯಪಾಲರ ಭೇಟಿ ಕೋರಿ ಪತ್ರ ಬರೆದಿದ್ದಾರೆ. ಏತನ್ಮಧ್ಯೆ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ನಿಗಾ ಇಲಾಖೆಯು ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜೀನಾಮೆ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ. ಜನವರಿ 31ರ ರಾತ್ರಿಯಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆ ಪತ್ರವನ್ನು ಇಲಾಖೆ ಅಂಗೀಕರಿಸಿದೆ

ಜಾರ್ಖಂಡ್ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿ ಚಂಪೈ ಸೊರೆನ್ ಪತ್ರ
ಚಂಪೈ ಸೊರೆನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 01, 2024 | 4:03 PM

Share

ರಾಂಚಿ ಫೆಬ್ರವರಿ 01: ಜಾರ್ಖಂಡ್​​ನಲ್ಲಿ (Jharkhand) ನಡೆಯುತ್ತಿರುವ ರಾಜಕೀಯ ಗೊಂದಲದ ನಡುವೆಯೇ ಚಂಪೈ ಸೊರೆನ್ (Champai Soren) ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರನ್ನು (Governor) ಭೇಟಿ ಮಾಡಲು ಮಧ್ಯಾಹ್ನ 3 ಗಂಟೆಗೆ ಅವಕಾಶ ನೀಡಬೇಕೆಂದು  ಅವರು ಪತ್ರದಲ್ಲಿ ಕೇಳಿದ್ದಾರೆ. ನಿನ್ನೆ ಕೂಡ ಮಾಜಿ ಸಚಿವರು 45 ಶಾಸಕರೊಂದಿಗೆ ರಾಜಭವನಕ್ಕೆ ಆಗಮಿಸಿದ್ದರು. ಆದರೆ ಇದುವರೆಗೂ ರಾಜಭವನದಿಂದ ಪ್ರಮಾಣ ವಚನ ಸ್ವೀಕಾರಕ್ಕೆ ಕರೆ ಬಂದಿಲ್ಲ.

ಏತನ್ಮಧ್ಯೆ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ನಿಗಾ ಇಲಾಖೆಯು ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜೀನಾಮೆ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ. ಜನವರಿ 31ರ ರಾತ್ರಿಯಿಂದ ಜಾರಿಗೆ ಬರುವಂತೆ ಅವರ ರಾಜೀನಾಮೆ ಪತ್ರವನ್ನು ಇಲಾಖೆ ಅಂಗೀಕರಿಸಿದೆ. ರಾತ್ರಿ 8.45ರಿಂದ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಡಿ ಅಧಿಕಾರಿಗಳು ಮಾಜಿ ಸಿಎಂ ಹೇಮಂತ್ ಸೊರೇನ್ ಅವರೊಂದಿಗೆ ಭೂ ಹಗರಣ ಪ್ರಕರಣದ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಭಾರೀ ಭದ್ರತೆಯ ನಡುವೆ ಇಡಿ ತಂಡ ಹೇಮಂತ್ ಸೊರೆನ್ ಅವರೊಂದಿಗೆ ಪಿಎಂಎಲ್‌ಎ ನ್ಯಾಯಾಲಯವನ್ನು ತಲುಪಿದೆ. ಹೇಮಂತ್ ಸೊರೆನ್ ನ್ಯಾಯಾಲಯದ ಮುಂದೆ ತಲೆಬಾಗಿ ನಮಸ್ಕರಿಸಿದರು. ಹಸ್ತಲಾಘವದ ಮೂಲಕ ಜನರ ಶುಭಾಶಯಗಳನ್ನು ಸ್ವೀಕರಿಸಿದರು. ನ್ಯಾಯಾಲಯದಲ್ಲಿ ಹೇಮಂತ್ ಸೊರೇನ್ ಜಿಂದಾಬಾದ್ ಎಂಬ ಘೋಷಣೆಗಳು ಮೊಳಗಿದವು.

ಇದನ್ನೂ ಓದಿ: 23 ವರ್ಷಗಳಲ್ಲಿ 12 ಮುಖ್ಯಮಂತ್ರಿಗಳನ್ನು ಕಂಡ ಹೊಸ ರಾಜ್ಯ ಜಾರ್ಖಂಡ್​

ಮೂಲಗಳ ಪ್ರಕಾರ ಇಡಿ ಹೇಮಂತ್ ಸೊರೆನ್‌ಗೆ 7 ದಿನಗಳ ರಿಮಾಂಡ್ ಕೇಳಬಹುದು. ಅದೇ ಸಮಯದಲ್ಲಿ, ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ, ರಾಜ್ಯದ 150 ಸ್ಥಳಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಗಲಾಟೆ ಭೀತಿಯ ಹಿನ್ನೆಲೆಯಲ್ಲಿ ಪಡೆ ನಿಯೋಜಿಸಲಾಗಿದೆ. ಇತ್ತ, ಜಾರ್ಖಂಡ್‌ನಲ್ಲಿ ರಾಜಕೀಯ ಗೊಂದಲ ಹೆಚ್ಚಿದೆ. ರಾಂಚಿ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಿರುವ ಜೆಎಂಎಂ ಶಾಸಕರನ್ನು ಕರೆದುಕೊಂಡು ಹೋಗಲು ಬಸ್‌ ಬಂದಿದ್ದು ,ಅವರನ್ನು ಹೈದರಾಬಾದ್‌ಗೆ ಕರೆದೊಯ್ಯುವ ಸಾಧ್ಯತೆ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ